Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಪವಾಸಕ್ಕಿಂತ ಕೊರೋನ ವೈರಸ್ ಉತ್ತಮ:...

ಉಪವಾಸಕ್ಕಿಂತ ಕೊರೋನ ವೈರಸ್ ಉತ್ತಮ: ಉ.ಪ್ರದೇಶದ ಲಕ್ಷಾಂತರ ವಲಸೆ ಕಾರ್ಮಿಕರ ಅಳಲು

ವಾರ್ತಾಭಾರತಿವಾರ್ತಾಭಾರತಿ28 Jun 2020 9:03 PM IST
share
ಉಪವಾಸಕ್ಕಿಂತ ಕೊರೋನ ವೈರಸ್ ಉತ್ತಮ: ಉ.ಪ್ರದೇಶದ ಲಕ್ಷಾಂತರ ವಲಸೆ ಕಾರ್ಮಿಕರ ಅಳಲು

ಲಕ್ನೊ, ಜೂ.28: ಕೊರೋನ ವೈರಸ್ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್ ಸಂದರ್ಭ ಹರಸಾಹಸ ಪಟ್ಟು ತಮ್ಮ ಸ್ವಂತ ಗ್ರಾಮಕ್ಕೆ ವಾಪಸಾಗಿದ್ದ  ಉತ್ತರಪ್ರದೇಶದ 30 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರು, ಈಗ ಸೋಂಕು ಉಲ್ಬಣಗೊಂಡಿರುವ ಸಮಯದಲ್ಲೇ ಮತ್ತೆ ಅನ್ಯರಾಜ್ಯದತ್ತ ತೆರಳಲು ಮುಂದಾಗಿದ್ದಾರೆ. ‘ಉಪವಾಸಕ್ಕಿಂತ ಕೊರೋನ ಸೋಂಕು ಉತ್ತಮ ಎಂದುಕೊಂಡು ಹೀಗೆ ಮಾಡುತ್ತಿರುವುದಾಗಿ’ ಕಾರ್ಮಿಕರು ಹೇಳುತ್ತಿದ್ದಾರೆ.

ಮಹಾರಾಷ್ಟ್ರ, ಗುಜರಾತ್ ಮತ್ತಿತರ ಉದ್ಯಮ ನಗರಗಳಿಗೆ ತೆರಳುವ ರೈಲಿಗಾಗಿ ಸಾವಿರಾರು ಕಾರ್ಮಿಕರು ಈಗ ಗೋರಖ್‌ಪುರ ಸಹಿತ ಪ್ರಮುಖ ರೈಲು ನಿಲ್ದಾಣಗಳಲ್ಲಿ ಕಾಯುತ್ತಿದ್ದಾರೆ. ಮುಂಬೈಯಲ್ಲಿ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಖುರ್ಷೀದ್ ಅನ್ಸಾರಿ ಕೇವಲ ಒಂದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದು ಈಗ ಮತ್ತೆ ಮುಂಬೈಯತ್ತ ಮುಖ ಮಾಡಿದ್ದಾರೆ.

“ಲಾಕ್‌ಡೌನ್ ಜಾರಿಯಾದಂದಿನಿಂದ ಕೆಲಸವಿಲ್ಲದೆ ಇಕ್ಕಟ್ಟಿನಲ್ಲಿ ಸಿಲುಕಿದ್ದೆ. ಕಡೆಗೂ ತಿಂಗಳ ಹಿಂದೆ ಉತ್ತರಪ್ರದೇಶಕ್ಕೆ ವಾಪಸಾದೆ. ಆದರೆ ಇಲ್ಲಿ ಕೆಲಸವೇ ಇಲ್ಲ. ಮುಂಬೈಯಲ್ಲಿದ್ದ ಗಾರ್ಮೆಂಟ್ ಫ್ಯಾಕ್ಟರಿ ಆರಂಭವಾಗಿಲ್ಲ. ಆದರೂ ಇಲ್ಲಿದ್ದು ಉಪವಾಸ ಬೀಳುವುದಕ್ಕಿಂತ ಮುಂಬೈಗೆ ತೆರಳಿ ಏನಾದರೊಂದು ಕೆಲಸ ಮಾಡಿ ನನ್ನ ಕುಟುಂಬದ ಹೊಟ್ಟೆ ತುಂಬಿಸುವ ವಿಶ್ವಾಸವಿದೆ. ಉಪವಾಸಕ್ಕಿಂತ ಕೊರೋನ ಉತ್ತಮ. ಮಕ್ಕಳು ಉಪವಾಸದಿಂದ ಸಾಯುವ ಬದಲು ನಾನು ಕೊರೋನ ವೈರಸ್‌ನಿಂದ ಸಾಯುವುದು ಒಳ್ಳೆಯದು” ಎಂದು ಅನ್ಸಾರಿ ಹೇಳಿದ್ದಾರೆ.

ಕೋಲ್ಕತಾದ ಸಂಸ್ಥೆಯೊಂದರಲ್ಲಿ ಟೆಕ್ನೀಶಿಯನ್ ಆಗಿ ಕೆಲಸ ಮಾಡುತ್ತಿದ್ದ ಪ್ರಸಾದ್ ಹೋಳಿ ಹಬ್ಬಕ್ಕೆಂದು ಲಕ್ನೋದ ಮನೆಗೆ ಬಂದವರು ಲಾಕ್‌ಡೌನ್‌ನಿಂದ ಅಲ್ಲೇ ಸಿಕ್ಕಿಬಿದ್ದಿದ್ದರು. ಕೋಲ್ಕತಾದಲ್ಲಿ ಕೊರೋನ ಸೋಂಕು ಹೆಚ್ಚಿದೆ. ಆದರೆ ಕುಟುಂಬದ ಹೊಟ್ಟೆಪಾಡಿಗೆ ಕೆಲಸ ಮಾಡುವುದು ಅನಿವಾರ್ಯ. ಆದ್ದರಿಂದ ವಾಪಸು ತೆರಳುತ್ತಿದ್ದೇನೆ ಎಂದವರು ಹೇಳಿದ್ದಾರೆ.

ಉತ್ತರಪ್ರದೇಶದ ಸಿದ್ದಾರ್ಥನಗರ ಜಿಲ್ಲೆಯಿಂದ ಅತ್ಯಧಿಕ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ವಾಪಸಾಗುತ್ತಿದ್ದಾರೆ. ರಾಜ್ಯ ಸರಕಾರ ಎಂನರೇಗಾ (ಗ್ರಾಮೀಣ ಉದ್ಯೋಗ ಖಾತರಿ )ಯೋಜನೆಯಡಿ ವಲಸೆ ಕಾರ್ಮಿಕರಿಗೆ ಕೆಲಸ ಒದಗಿಸುತ್ತಿದೆ ಎಂದು ಹೇಳಿದ್ದರೂ ತಮಗೆ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಬಹುತೇಕ ವಲಸೆ ಕಾರ್ಮಿಕರು ಹೇಳಿದ್ದಾರೆ. ಮುಂಬೈಯಲ್ಲಿ ಒಳ್ಳೆಯ ಸಂಬಳ ಸಿಗುತ್ತದೆ. ಆದರೆ ಇಲ್ಲಿ ಸಿಗುವುದಿಲ್ಲ. ಸರಕಾರದ ಯಾವುದೇ ಯೋಜನೆ ಅಥವಾ ಭರವಸೆ ನಮ್ಮನ್ನು ತಲುಪಿಲ್ಲ. ಈಗ ನಮ್ಮ ಊರಿನಲ್ಲಿ ನಿರುದ್ಯೋಗಿಯಾಗಿದ್ದೇನೆ. ಎಲ್ಲಿಯೂ ಕೆಲಸವಿಲ್ಲ. ಯಾರನ್ನು ಕೇಳಿದರೂ ಕೆಲಸವಿಲ್ಲ ಎನ್ನುತ್ತಿದ್ದಾರೆ. ಮುಂಬೈಯ ಪರಿಸ್ಥಿತಿ ತಿಳಿದಿದೆ. ಆದರೆ ಹೋಗುವುದು ಅನಿವಾರ್ಯ. ಹೊಟ್ಟೆಪಾಡಿಗೆ ಬೇರೆ ಗತಿಯಿಲ್ಲ ಎಂದು ಮುಂಬೈಯಲ್ಲಿ ಎಸಿ ಟೆಕ್ನೀಶಿಯನ್ ಆಗಿರುವ ಮುಹಮ್ಮದ್ ಅಬಿದ್ ಅಳಲು ತೋಡಿಕೊಂಡಿದ್ದಾರೆ.

ರಾಜ್ಯ ಸರಕಾರ ಪಡಿತರ ಸಾಮಗ್ರಿ ಬಿಟ್ಟು ಬೇರೇನನ್ನೂ ನೀಡುತ್ತಿಲ್ಲ. ಇತರ ಖರ್ಚು ವೆಚ್ಚ ನಿಭಾಯಿಸುವುದು ಹೇಗೆ ? ಎಂನರೇಗಾ ಬಿಟ್ಟರೆ ಬೇರೇನೂ ಕೆಲಸವಿಲ್ಲ ಎಂದು ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ದಿನಸಿ ಸಾಮಾಗ್ರಿಗಳ ಅಂಗಡಿಯನ್ನು ಬಾಡಿಗೆಗೆ ಪಡೆದಿರುವ ರಾಜೇಶ್ ಕುಮಾರ್ ವರ್ಮ ಹೇಳಿದ್ದು, ಅಂಗಡಿ ಬಂದ್ ಆಗಿದ್ದರೂ ಬಾಡಿಗೆ ಪಾವತಿಸಲೇಬೇಕು. ಆದ್ದರಿಂದ ಕೊರೋನ ಸೋಂಕಿನ ಅಪಾಯದ ಮಧ್ಯೆಯೇ ಗುಜರಾತ್‌ಗೆ ವಾಪಸಾಗುತ್ತಿದ್ದೇನೆ ಎಂದಿದ್ದಾರೆ.

ಎಲ್ಲರಿಗೂ ಕೆಲಸವಿದೆ: ಸರಕಾರದ ಹೇಳಿಕೆ

ಆದರೆ ರಾಜ್ಯ ಸರಕಾರ ಹೇಳುವುದೇ ಬೇರೆ. ಎಂನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸಂಖ್ಯೆ ಸಾರ್ವಕಾಲಿಕ ದಾಖಲೆಯಾಗಿದೆ. ಸಣ್ಣ ಉದ್ಯಮಗಳಲ್ಲಿ ಸುಮಾರು 60 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸಲಾಗಿದೆ. ಕೆಲಸ ಮಾಡಲು ಮುಂದೆ ಬರುವವರಿಗೆ ಎಂನರೇಗಾದಡಿ ಯಾವತ್ತೂ ಅವಕಾಶವಿದೆ ಎಂದು ಉತ್ತರಪ್ರದೇಶ ಸರಕಾರ ಶನಿವಾರ ಹೇಳಿಕೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X