Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಉಸಿರಾಡಲು ಸಾಧ್ಯವಾಗುತ್ತಿಲ್ಲ: ಇದು...

​ಉಸಿರಾಡಲು ಸಾಧ್ಯವಾಗುತ್ತಿಲ್ಲ: ಇದು ಕೋವಿಡ್‌ಗೆ ಬಲಿಯಾದ ವ್ಯಕ್ತಿಯ ಕೊನೆಯ ಸಂದೇಶ...

ವಾರ್ತಾಭಾರತಿವಾರ್ತಾಭಾರತಿ29 Jun 2020 10:27 AM IST
share
​ಉಸಿರಾಡಲು ಸಾಧ್ಯವಾಗುತ್ತಿಲ್ಲ: ಇದು ಕೋವಿಡ್‌ಗೆ ಬಲಿಯಾದ ವ್ಯಕ್ತಿಯ ಕೊನೆಯ ಸಂದೇಶ...

ಹೈದರಾಬಾದ್ : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 34 ವರ್ಷದ ಯುವಕನೊಬ್ಬ ತನ್ನ ತಂದೆಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ಉಸಿರಾಟ ಸಾಧ್ಯವೇ ಆಗುತ್ತಿಲ್ಲ ಎಂದು ಹೇಳಿರುವ ಬಗೆಗಿನ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

10 ಖಾಸಗಿ ಆಸ್ಪತ್ರೆಗಳು ಈ ರೋಗಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ ಬಳಿಕ ಬುಧವಾರ ಸರ್ಕಾರಿ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೃತ ಯುವಕನ ತಂದೆ ವಿವರಿಸಿದ್ದಾರೆ.

ಉಸಿರಾಡಲು ಸಾಧ್ಯವಾಗುತ್ತಿಲ್ಲ... ಪದೇ ಪದೇ ಬೇಡಿಕೊಂಡರೂ ಕಳೆದ ಮೂರು ಗಂಟೆಗಳಿಂದ ಆಮ್ಲಜನಕ ಮುಂದುವರಿಸಿಲ್ಲ. ಅಪ್ಪಾ, ನನಗಿನ್ನು ಉಸಿರಾಡಲು ಸಾಧ್ಯವೇ ಇಲ್ಲ. ನನ್ನ ಹೃದಯ ನಿಂತಂತಾಗಿದೆ.. ಡ್ಯಾಡಿ..ಬೈ.. ಎಲ್ಲರಿಗೂ ಬೈ ಡ್ಯಾಡಿ.. ಎಂದು ವೀಡಿಯೊದಲ್ಲಿ ಯುವಕ ಹೇಳುತ್ತಿದ್ದಾನೆ.

ಕೋವಿಡ್-19 ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವರ ಬಗೆಗಿನ ಉದಾಸೀನ ಮನೋಭಾವವನ್ನು ವಿವರಿಸಲು ಜನ ಈ ವೀಡಿಯೊ ಟ್ವೀಟ್ ಮಾಡಿದ್ದಾರೆ. ಯುವಕ ಸಾಯುವ ಒಂದು ಗಂಟೆ ಮುನ್ನ ಚಿತ್ರೀಕರಿಸಿದ ವೀಡಿಯೊ ಇದಾಗಿದೆ.

ನನ್ನ ಮಗ ಸಹಾಯ ಯಾಚಿಸಿದ್ದಾನೆ. ಆದರೆ ಯಾರೂ ನೆರವಿಗೆ ಮುಂದಾಗಲಿಲ್ಲ. ಆತನ ಅಂತ್ಯಸಂಸ್ಕಾರ ಮುಗಿಸಿ ಬಂದ ಬಳಿಕ ನಾನು ಈ ವೀಡಿಯೊ ನೋಡಿದೆ. ಬೈ ಡ್ಯಾಡಿ ಎಂದು ಆತ ಹೇಳಿದ್ದ ಎಂದು ತಂದೆ ವಿವರಿಸಿದರು. ನನ್ನ ಮಗನಿಗೆ ಬಂದ ಸ್ಥಿತಿ ಯಾರಿಗೂ ಬರಬಾರದು. ಮಗನಿಗೆ ಆಮ್ಲಜನಕ ಏಕೆ ಕೊಟ್ಟಿಲ್ಲ ? ವೀಡಿಯೊದಲ್ಲಿ ಮಗ ಹೇಳುತ್ತಿರುವುದು ಕೇಳಿ ಹೃದಯ ಕಿತ್ತು ಬರುತ್ತಿದೆ ಎಂದು ವಿವರಿಸಿದ್ದಾರೆ.

ಅದೇ ದಿನ ಮಗನ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಮರುದಿನ ಬೆಳಗ್ಗೆ ಆತನ ಗಂಟಲು ಸ್ರಾವ ಸ್ವೀಕರಿಸಿದ್ದ ಖಾಸಗಿ ಆಸ್ಪತ್ರೆಯಿಂದ ವರದಿ ಬಂದಿದ್ದು, ಕೋವಿಡ್-19 ಸೋಂಕಿನಿಂದ ಆತ ಮೃತಪಟ್ಟಿರುವುದನ್ನು ವರದಿ ದೃಢಪಡಿಸಿತ್ತು. ಯುವಕನ ತಂದೆ, ಪತ್ನಿ, ಸಹೋದರ, ಅತ್ತಿಗೆ ಮತ್ತು ಭಾವನಿಗೂ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನುವುದು ಕುಟುಂಬದಲ್ಲಿ ಆತಂಕ ಸೃಷ್ಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X