Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇವಲ 50 ರೂ. ಪಡೆದು ಡಯಾಲಿಸಿಸ್...

ಕೇವಲ 50 ರೂ. ಪಡೆದು ಡಯಾಲಿಸಿಸ್ ಪ್ರಕ್ರಿಯೆ ನಡೆಸುವ ಡಾ. ಫುವಾದ್ ಹಲೀಂ

ಬಡವರ ಪಾಲಿನ ಆಪದ್ಬಾಂಧವ ಈ ವೈದ್ಯ

ವಾರ್ತಾಭಾರತಿವಾರ್ತಾಭಾರತಿ29 Jun 2020 4:27 PM IST
share
ಕೇವಲ 50 ರೂ. ಪಡೆದು ಡಯಾಲಿಸಿಸ್ ಪ್ರಕ್ರಿಯೆ ನಡೆಸುವ ಡಾ. ಫುವಾದ್ ಹಲೀಂ

ಕೊಲ್ಕತ್ತಾ: ದಕ್ಷಿಣ ಕೊಲ್ಕತ್ತಾದ ಪಾರ್ಕ್ ಸ್ಟ್ರೀಟ್ ಸಮೀಪ ಸಣ್ಣ ಡಯಾಲಿಸಿಸ್ ಕ್ಲಿನಿಕ್ ನಡೆಸುವ ಸಿಪಿಎಂ ನಾಯಕರೂ ಆಗಿರುವ 49 ವರ್ಷದ ವೈದ್ಯ ಫುವಾದ್ ಹಲೀಂ ಅವರು ಒಂದು ಡಯಾಲಿಸಿಸ್ ಪ್ರಕ್ರಿಯೆಗೆ ಕೇವಲ ರೂ. 50 ಶುಲ್ಕ ವಿಧಿಸುವ ಮೂಲಕ ನೂರಾರು ಜನರ ಪಾಲಿಗೆ ಆಪತ್ಬಾಂಧವರಾಗಿದ್ದಾರೆ.

ಈ ಕ್ಲಿನಿಕ್ ಅನ್ನು ಅವರು ತಮ್ಮ 60 ಮಂದಿ ಸ್ನೇಹಿತರು ಹಾಗೂ ಸಂಬಂಧಿಕರ ಜತೆಗೆ ಆರಂಭಿಸಿರುವ ಕೊಲ್ಕತ್ತಾ ಸ್ವಾಸ್ಥ್ಯ ಸಂಕಲ್ಪ ಎಂಬ ಹೆಸರಿನ ಎನ್‍ ಜಿಒ ಮೂಲಕ ನಡೆಸುತ್ತಿದ್ದಾರೆ. ಲಾಕ್ ಡೌನ್ ಆರಂಭಗೊಂಡಂದಿನಿಂದ ಹಿಡಿದು ಇಲ್ಲಿಯ ತನಕ ಡಾ. ಹಲೀಂ ಅವರ ತಂಡದ ಮೂವರು ವೈದ್ಯರು ಹಾಗೂ ನಾಲ್ಕು ಮಂದಿ ಟೆಕ್ನಿಷಿಯನ್‍ಗಳು 2,190 ಡಯಾಲಿಸಿಸ್ ಪ್ರಕ್ರಿಯೆಗಳನ್ನು ನಡೆಸಿದ್ದಾರೆ. ಕೋವಿಡ್ ಸೋಂಕಿನ ಭಯದಿಂದ ಹಲವು ಆಸ್ಪತ್ರೆಗಳು ರೋಗಿಗಳನ್ನು ವಾಪಸ್ ಕಳುಹಿಸುತ್ತಿರುವ ಇಂದಿನ ಸಂದರ್ಭದಲ್ಲಿ ಹಲೀಂ ಅವರ ಕ್ಲಿನಿಕ್ ರೋಗಿಗಳು ಕೋವಿಡ್-19 ಪಾಸಿಟಿವ್ ಆಗಿದ್ದರೂ ಅಥವಾ ನೆಗೆಟಿವ್ ಆಗಿದ್ದರೂ ಅವರಿಗೆ ಡಯಾಲಿಸಿಸ್ ನಡೆಸುತ್ತದೆ, ಆದರೆ ಕೋವಿಡ್ ಲಕ್ಷಣಗಳನ್ನು ಹೊಂದಿರುವವರು ಡಯಾಲಿಸಿಸ್ ನಂತರ ಸರಕಾರಿ ಫೀವರ್ ಕ್ಲಿನಿಕ್‍ ಗಳಲ್ಲಿ ಪರೀಕ್ಷೆ ನಡೆಸಬೇಕು ಎಂಬುದೇ ಅವರು ವಿಧಿಸುವ ಷರತ್ತಾಗಿದೆ.

ಡಾ. ಫುವಾದ್ ಹಲೀಂ ಅವರು ಪಶ್ಚಿಮ ಬಂಗಾಳ ವಿಧಾನಸಭೆಯ ಸ್ಪೀಕರ್ ಆಗಿ 1982ರಿಂದ 2011 ತನಕ 29 ವರ್ಷ ಸೇವೆ ಸಲ್ಲಿಸಿದ್ದ ಹಾಶಿಂ ಅಬ್ದುಲ್ ಹಲೀಂ ಅವರ ಪುತ್ರರಾಗಿದ್ದಾರೆ.

ಡಾ. ಫುವಾದ್ ಹಲೀಂ ಅವರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂ ಟಿಕೆಟ್‍ನಿಂದ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರೂ  ಮೂರನೇ ಸ್ಥಾನ ಗಳಿಸಿ ಸೋತಿದ್ದರು. ಅವರು ಸ್ಪರ್ಧಿಸಿದ್ದ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಗೆಲುವು ಸಾಧಿಸಿದ್ದರು. ಡಾ ಫುವಾದ್ ಅವರು ಸಿಪಿಎಂನ ಸಾರ್ವಜನಿಕ ಪರಿಹಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಆದರೆ ಅವರು ಆರಂಭಿಸಿರುವ ಸ್ವಾಸ್ಥ್ಯ ಸಂಕಲ್ಪ ಸಂಘಟನೆ ಸಿಪಿಎಂ ಜತೆ ಯಾವುದೇ ಸಂಬಂಧ ಹೊಂದಿಲ್ಲ. ಅವರ ಡಯಾಲಿಸಿಸ್ ಕ್ಲಿನಿಕ್ ಯಾವುದೇ ಸರಕಾರಿ ಯಾ ಖಾಸಗಿ ಆಸ್ಪತ್ರೆ ಜತೆ ಸಹಯೋಗವನ್ನೂ ಹೊಂದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X