ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಲೇಔಟ್ ನಿರ್ಮಾಣ: ರಾಘವೇಂದ್ರ ಕಿಣಿ
ಉಡುಪಿ ಜೂ.29: ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದಿಂದ ನಗರದಲ್ಲಿ ಜಾಗವನ್ನು ಖರೀದಿಸಿ ರಾಜ್ಯಕ್ಕೆ ಮಾದರಿಯಾದ ಯೋಜನಾಬದ್ಧ ಲೇಔಟ್ ನಿರ್ಮಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗುವುದು ಎಂದು ಪ್ರಾಧಿಕಾರದ ನೂತನ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ತಿಳಿಸಿದ್ದಾರೆ.
ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಕಚೇರಿಯಲ್ಲಿ ಸೋಮವಾರ ಪ್ರಾಧಿ ಕಾರದ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಂದ ಅಧಿಕಾರ ಸ್ವೀಕರಿಸಿ ಅವರು ಮಾತನಾಡುತಿದ್ದರು. ನಗರಾಭಿವೃಧ್ದಿ ಪ್ರಾಧಿಕಾರದ ಮೂಲಕ 10 ಎಕರೆಗಿಂತ ಹೆಚ್ಚಿನ ಜಾಗವನ್ನು ಖರೀದಿಸಿ ಅಲ್ಲಿ, ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಲೇ ಔಟ್ ನಿರ್ಮಿಸಲಾಗುವುದು ಎಂದರು.
ಪ್ರಾಧಿಕಾರದ ಕಚೇರಿಯನ್ನು ಜನಸ್ನೇಹಿಯಾಗಿ ರೂಪಿಸಿ, ಸಾರ್ವಜನಿಕರಿಗೆ ಶ್ರೀ ಹಾಗೂ ಉತ್ತಮ ಸೇವೆ ನೀಡಲಾಗುವುದು. ಪ್ರತಿದಿನ ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲ್ಯ ಇರುತ್ತೇನೆ. ಕೊರೋನಾದ ಈ ಸಮಯದಲ್ಲಿ ಸಾರ್ವಜನಿಕರು ತುರ್ತು ಅನಿವಾರ್ಯವಿದ್ದಲ್ಲಿ ಮಾತ್ರ ಕಚೇರಿಗೆ ಆಗಮಿಸಬೇಕು ಎಂದು ಅವರು ಮನವಿ ಮಾಡಿದರು.
ಉಡುಪಿ ಶಾಸಕ ರಘುಪತಿ ಭಟ್ ಮಾತನಾಡಿ, ಉಡುಪಿ ನಗರಾ ಭಿವೃದ್ದಿಯ ಮಾಸ್ಟರ್ ಪ್ಲಾನ್ ಈವರೆಗೆ ಅನುಮೋದನೆಗೊಂಡಿಲ್ಲ. ಇದರ ಅನುಮೋದನೆಗೆ ನೂತನ ಅಧ್ಯಕ್ಷರು ಮತ್ತು ಅವರ ತಂಡ ಪ್ರಯತ್ನಿಸಬೇಕು. ಇದರಿಂದ ವಲಯದ ಬದಲಾವಣೆಗೆ ಇರುವ ಸಮಸ್ಯೆಯನ್ನು ಪರಿಹರಿಸಬಹು ದಾಗಿದೆ ಎಂದು ಹೇಳಿದರು.
ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಪ್ರಭಾರ ಆಯುಕ್ತ ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು, ಪ್ರಾಧಿಕಾರದ ನೂತನ ಸದಸ್ಯ ರಾದ ದಿನಕರ ಪೂಜಾರಿ, ಕಿಶೋರ್ ಕುಮಾರ್, ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಸುಮಾ ನಾಯಕ್ ಉಪಸ್ಥಿತರಿದ್ದರು.
ಕೆರೆಗಳ ಅಭಿವೃದ್ಧಿಗೆ 5 ಕೋಟಿ ರೂ. ಕ್ರಿಯಾಯೋಜನೆ
ಉಡುಪಿ ನಗರದಲ್ಲಿ ಕೆರೆಗಳ ಅಭಿವೃದ್ಧಿಗಾಗಿ 5 ಕೋಟಿ ರೂ. ಗಳ ಕ್ರಿಯಾ ಯೋಜನೆ ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿದ್ದು, ಇದಕ್ಕೆ ಶೀಘ್ರವೇ ಮಂಜೂ ರಾತಿ ದೊರೆಯುವ ನಿರೀಕ್ಷೆಯಿದೆ. ಪ್ರಾಧಿಕಾರದಲ್ಲಿ ಹಣದ ಕೊರತೆ ಇಲ್ಲ. ನಗರದಲ್ಲಿ ಕರೆ ಅಭಿವೃಧ್ದಿ ಮತ್ತು ಪಾರ್ಕ್ಗಳ ನಿರ್ಮಾಣ ಜೊತೆಗೆ ವಾಕಿಂಗ್ ಪಾಥ್ಗಳು ಮತ್ತು ಓಪನ್ ಜಿಮ್ಗಳ ಸ್ಥಾಪನೆಗೆ ಆದ್ಯತೆ ನೀಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಲೇ ಔಟ್ಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮ ಗಳಂತೆ ಪಾರ್ಕ್ ಮತ್ತು ರಸ್ತೆಗಳಿಗೆ ಅಗತ್ಯ ಜಾಗ ಮೀಸಲಿಡುವ ಬಗ್ಗೆ ಹೆಚಿನ ಆದ್ಯತೆ ನೀಡಬೇಕು. ಬಿಡಿಬಿಡಿಯಾಗಿ ಅನುಮತಿ ನೀಡದೇ ವ್ಯವಸ್ಥಿತ ಲೇಔಟ್ ಗಳ ನಿರ್ಮಾಣಕ್ಕೆ ಅನುಮತಿ ನೀಡುವುದರ ಮೂಲಕ ನಿರ್ಮಾಣದ ನಂತರ ಯಾವುದೇ ವಿವಾದಗಳು ತಲೆದೋರಂತೆ ನೋಡಿಕೊಳ್ಳಬೇಕು ಎಂದರು.