Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜುಲೈ ಅಂತ್ಯಕ್ಕೆ ಭಾರತ ತಲುಪಲಿರುವ ರಫೇಲ್...

ಜುಲೈ ಅಂತ್ಯಕ್ಕೆ ಭಾರತ ತಲುಪಲಿರುವ ರಫೇಲ್ ಯುದ್ಧವಿಮಾನಗಳು

ವಾರ್ತಾಭಾರತಿವಾರ್ತಾಭಾರತಿ29 Jun 2020 9:50 PM IST
share
ಜುಲೈ ಅಂತ್ಯಕ್ಕೆ ಭಾರತ ತಲುಪಲಿರುವ ರಫೇಲ್ ಯುದ್ಧವಿಮಾನಗಳು

ಹೊಸದಿಲ್ಲಿ,ಜೂ.29: ಆಗಸದಿಂದ ಆಗಸಕ್ಕೆ ಚಿಮ್ಮುವ ಮೀಟಿಯೋರ್ ಕ್ಷಿಪಣಿಗಳು ಮತ್ತು ಸ್ಕಾಲ್ಪ್ ದಾಳಿ ಕ್ಷಿಪಣಿಗಳಿಂದ ಸಜ್ಜಿತ ನಾಲ್ಕರಿಂದ ಆರು ರಫೇಲ್ ಯುದ್ಧ ವಿಮಾನಗಳ ಮೊದಲ ತಂಡ ಜುಲೈ ಅಂತ್ಯದ ವೇಳೆಗೆ ಭಾರತವನ್ನು ತಲುಪಲಿದ್ದು, ಭಾರತೀಯ ವಾಯುಪಡೆಗೆ ಈ ವಿಮಾನಗಳು ಭೀಮಬಲವನ್ನು ನೀಡಲಿವೆ.

ಪೂರ್ವ ಲಡಾಖ್‌ ನಲ್ಲಿ ಚೀನಾದೊಂದಿಗೆ ಮಿಲಿಟರಿ ಬಿಕ್ಕಟ್ಟಿನ ನಡುವೆಯೇ ಭಾರತವು 36 ರಫೇಲ್ ವಿಮಾನಗಳ ಪೂರೈಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಫ್ರಾನ್ಸ್‌ಗೆ ಸೂಚಿಸಿತ್ತು. 59,000 ಕೋ.ರೂ. ವೆಚ್ಚದ ಈ ಖರೀದಿ ಒಪ್ಪಂದಕ್ಕೆ 2016,ಸೆಪ್ಟೆಂಬರ್‌ನಲ್ಲಿ ಅಂಕಿತ ಹಾಕಲಾಗಿತ್ತು.

  ಫ್ರಾನ್ಸ್ ‌ನಲ್ಲಿ ತರಬೇತಿಯನ್ನು ಪಡೆದಿರುವ ಭಾರತೀಯ ವಾಯುಪಡೆಯ ಪೈಲಟ್‌ ಗಳು ಮೊದಲ ನಾಲ್ಕರಿಂದ ಆರು ರಫೇಲ್‌ಗಳನ್ನು ಭಾರತಕ್ಕೆ ತರಲಿದ್ದು,ಅಬುಧಾಬಿ ಬಳಿಯ ಅಲ್ ಧಫ್ರಾ ವಾಯುನೆಲೆಯಲ್ಲಿ ಸಂಕ್ಷಿಪ್ತ ನಿಲುಗಡೆಯ ಬಳಿಕ ಜು.27 ರಂದು ಅಂಬಾಲಾ ವಾಯುನೆಲೆಗೆ ಬಂದಿಳಿಯುವ ಸಾಧ್ಯತೆಗಳಿವೆ ಎಂದು ಐಎಎಫ್ ಮೂಲಗಳು ತಿಳಿಸಿದವು. ಅಬುಧಾಬಿಯಿಂದ ಭಾರತಕ್ಕೆ ಬರುವ ಮಾರ್ಗದಲ್ಲಿ ಐಎಎಫ್‌ನ ಐಎಲ್-78 ಟ್ಯಾಂಕರ್ ವಿಮಾನದ ಮೂಲಕ ಮಧ್ಯ ಆಗಸದಲ್ಲಿ ರಫೇಲ್ ವಿಮಾನಗಳಿಗೆ ಇಂಧನ ಮರುಪೂರಣವಾಗುವ ಸಾಧ್ಯತೆಯಿದೆ.

120ರಿಂದ 150 ಕಿ.ಮೀ.ದಾಳಿ ವ್ಯಾಪ್ತಿಯನ್ನು ಹೊಂದಿರುವ ಮಿಟಿಯೋರ್ ಮತ್ತು 300 ಕಿ.ಮೀ.ವ್ಯಾಪ್ತಿಯ ಸ್ಕಾಲ್ಪ್ ಕ್ಷಿಪಣಿಗಳ ಪೂರೈಕೆ ಈಗಾಗಲೇ ಆರಂಭಗೊಂಡಿದೆ.

 ನಿಗದಿತ ಪೂರೈಕೆ ವೇಳಾಪಟ್ಟಿಯಂತೆ ಮೊದಲ ನಾಲ್ಕು ರಫೇಲ್‌ ಗಳು ಈ ವರ್ಷದ ಮೇ ತಿಂಗಳೊಳಗೆ ಅಂಬಾಲಾ ತಲುಪಬೇಕಿತ್ತು ಮತ್ತು ಎಲ್ಲ 36 ರಫೇಲ್ ಯುದ್ಧವಿಮಾನಗಳು 2022,ಎಪ್ರಿಲ್‌ನೊಳಗೆ ಪೂರೈಕೆಯಾಗಬೇಕಿತ್ತು. ಆದರೆ ಕೊರೋನ ವೈರಸ್ ಪಿಡುಗಿನಿಂದಾಗಿ ಮೊದಲ ತಂಡದ ಪೂರೈಕೆ ಕೊಂಚ ವಿಳಂಬವಾಗಿದ್ದರೂ,ಚೀನಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಪರಿಗಣಿಸಿ ನಿಗದಿತ ಅವಧಿಗೆ ಮೊದಲೇ ಎಲ್ಲ ವಿಮಾನಗಳನ್ನು ಪೂರೈಸುವಂತೆ ಭಾರತವೀಗ ಫ್ರಾನ್ಸ್‌ಗೆ ಸೂಚಿಸಿದೆ.

 ರಫೇಲ್ ಯುದ್ಧವಿಮಾನಗಳು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಿ ವಾಯುಪಡೆಯ ವಿರುದ್ಧ ಐಎಎಫ್‌ಗೆ ಹೆಚ್ಚಿನ ಮೇಲುಗೈ ಅನ್ನು ಒದಗಿಸಲಿವೆ.

ಚೀನಾ ಯಾವುದೇ ದುಸ್ಸಾಹಸಕ್ಕೆ ಇಳಿಯದಂತಿರಲು ಐಎಫ್ ಈಗಾಗಲೇ ಎಲ್‌ಎಸಿಯಲ್ಲಿ ಸುಖೋಯ್-30 ಎಂಕೆ ಐ,ಮಿಗ್-29 ಮತ್ತು ಜಾಗ್ವಾರ್ ಯುದ್ಧವಿಮಾನಗಳನ್ನು ನಿಯೋಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X