Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಿಕಿತ್ಸೆಗಾಗಿ ಅಲೆದಾಡಿದ ಕೊರೋನ ಸೋಂಕಿತ:...

ಚಿಕಿತ್ಸೆಗಾಗಿ ಅಲೆದಾಡಿದ ಕೊರೋನ ಸೋಂಕಿತ: ಹಾಸಿಗೆ ಕೊರತೆಯ ನೆಪ ಹೇಳಿ ಚಿಕಿತ್ಸೆ ನಿರಾಕರಣೆ; ಆರೋಪ

ವಾರ್ತಾಭಾರತಿವಾರ್ತಾಭಾರತಿ29 Jun 2020 11:33 PM IST
share
ಚಿಕಿತ್ಸೆಗಾಗಿ ಅಲೆದಾಡಿದ ಕೊರೋನ ಸೋಂಕಿತ: ಹಾಸಿಗೆ ಕೊರತೆಯ ನೆಪ ಹೇಳಿ ಚಿಕಿತ್ಸೆ ನಿರಾಕರಣೆ; ಆರೋಪ

ಬೆಂಗಳೂರು, ಜೂ.29: ಗೊಟ್ಟಿಗೆರೆಯ 45 ವರ್ಷದ ಕೊರೋನ ಸೋಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಸಿಗದೆ ಅಲೆದಾಡಿರುವ ಮನಮಿಡಿಯುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೊರೋನ ಸೋಂಕು ಪ್ರಕರಣಗಳು ಎಲ್ಲೆ ಮೀರುತ್ತಿರುವ ಈ ಸಂದರ್ಭದಲ್ಲಿ ಕೊರೋನ ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳೇ ಇಲ್ಲದಂತಾಗಿದೆ. ಇದರಿಂದ ಕೊರೋನ ರೋಗಿಗಳು ಸರಿಯಾದ ಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಇತ್ತೀಚಿಗೆ ನಡೆದ ಕರುಣಾಜನಕ ಘಟನೆಯೇ ಉದಾಹರಣೆಯಾಗಿದೆ.

ಕಳೆದ ವಾರ ಕೊರೋನ ಸೋಂಕಿತ ವ್ಯಕ್ತಿಗೆ ಚಿಕಿತ್ಸೆಗೆ 9 ಆಸ್ಪತ್ರೆಗಳು ಹಾಸಿಗೆಯ ಕೊರತೆಯ ನೆಪ ಹೇಳಿ ಚಿಕಿತ್ಸೆ ನೀಡಲು ನಿರಾಕರಿಸಿವೆ. ಇದರಿಂದ ಚಿಕಿತ್ಸೆ ದೊರೆಯದೆ ರೋಗಿಯು ಆಸ್ಪತ್ರೆಯ ಮೆಟ್ಟಿಲು ಹತ್ತಿ ಇಳಿದು ಬಸವಳಿದಿದ್ದಾರೆ ಎನ್ನಲಾಗಿದೆ.

ಕೊರೋನ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರಿಗೆ ಕಳೆದ ಶುಕ್ರವಾರ ತೀವ್ರ ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನಲೆ ಅವರನ್ನು ಮೊದಲು ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಲ್ಲಿ ಹಾಸಿಗೆ ಲಭ್ಯವಿಲ್ಲ ಎಂಬ ಕಾರಣ ನೀಡಿ ದಾಖಲಿಸಿಕೊಳ್ಳದೆ ಹಿಂದಕ್ಕೆ ಕಳುಹಿಸಲಾಯಿತು. ನಂತರ ರೋಗಿಯನ್ನು ದಾಖಲಿಸಲು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಕಂಗಾಲಾದ ಸಂಬಂಧಿಕರು ಅನೇಕ ಆಸ್ಪತ್ರೆಗಳಿಗೆ ಕರೆ ಮಾಡಿ ವಿಚಾರಿಸಿದರೂ ಯಾವುದರಿಂದಲೂ ಸೂಕ್ತ ಸ್ಪಂದನೆ ದೊರೆಯದೆ ಬೇಸತ್ತಿದ್ದಾರೆ ಎಂದು ತಿಳಿದುಬಂದಿದೆ.

ನಂತರ ಜಯನಗರ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ದೊರೆಯುತ್ತದೆ ಎಂಬ ಮಾಹಿತಿಯ ಮೇರೆಗೆ ಕರೆ ಮಾಡಿದಾಗ ಅಲ್ಲಿ ಹಾಸಿಗೆ ಇಲ್ಲ ಎಂದು ಹೇಳಿದ್ದಾರೆ. ಬಳಿಕ ಬನ್ನೇರುಘಟ್ಟ ಆಸ್ಪತ್ರೆ, ಕೆಂಗೇರಿ ಆಸ್ಪತ್ರೆಗಳಲ್ಲಿ ಇದೇ ಉತ್ತರ ಬಂದಿದೆ. ನಂತರ ರಾಜೀವ್ ಗಾಂಧಿ ಆಸ್ಪತ್ರೆಯಲ್ಲೂ ಹಾಸಿಗೆ ಸಿಗದೆ ರೋಗಿ ಪರದಾಡಿದ್ದಾರೆ. 

ಕೊನೆಗೆ ಪ್ರಕ್ರಿಯಾ ಆಸ್ಪತ್ರೆಯು ರೋಗಿಯನ್ನು ಕಾಪಾಡಿದೆ. ಪ್ರಕ್ರಿಯಾ ಆಸ್ಪತ್ರೆಯು ರೋಗಿಯನ್ನು ದಾಖಲಿಸಿಕೊಂಡಿದ್ದು ಚಿಕಿತ್ಸೆ ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X