Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ಜುಲೈ 1ರಿಂದ ಮಸೀದಿಗಳಿಗೆ...

ಯುಎಇ: ಜುಲೈ 1ರಿಂದ ಮಸೀದಿಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ

ಅನುಸರಿಸಬೇಕಾದ ಮಾರ್ಗಸೂಚಿಗಳು ಇಲ್ಲಿದೆ…

ವಾರ್ತಾಭಾರತಿವಾರ್ತಾಭಾರತಿ30 Jun 2020 12:06 PM IST
share
ಯುಎಇ: ಜುಲೈ 1ರಿಂದ ಮಸೀದಿಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ

ರಿಯಾದ್:  ಕೋವಿಡ್-19 ಸಮಸ್ಯೆಯಿಂದ ಮುಚ್ಚಲ್ಪಟ್ಟಿದ್ದ ಸಂಯುಕ್ತ ಅರಬ್ ಸಂಸ್ಥಾನದ ಮಸೀದಿಗಳು ಹಾಗೂ ಇತರ ಧಾರ್ಮಿಕ ಸ್ಥಳಗಳನ್ನು ಜುಲೈ 1ರಿಂದ ಮರು ತೆರೆಯಲು ನಿರ್ಧರಿಸಲಾಗಿದ್ದು, ಎಲ್ಲಾ ಸ್ಥಳಗಳಲ್ಲಿ ಎಂದಿನ ಸಾಮರ್ಥ್ಯಕ್ಕಿಂತ ಶೇ. 30ರಷ್ಟು ಜನರಿಗೆ ಮಾತ್ರ ಏಕಕಾಲದಲ್ಲಿ ಪ್ರವೇಶಕ್ಕೆ ಅನುಮತಿಸಲಾಗುವುದು.

ಆದರೆ ಶುಕ್ರವಾರದ ಪ್ರಾರ್ಥನೆಗಳನ್ನು ಮಾತ್ರ ಮಸೀದಿಗಳಲ್ಲಿ ಸದ್ಯ ಅನುಮತಿಸಲಾಗುವುದಿಲ್ಲ ಎಂದು  ದೇಶದ  ವಿಪತ್ತು ಮತ್ತು ತುರ್ತು ಸಂದರ್ಭ ನಿರ್ವಹಣಾ ಪ್ರಾಧಿಕಾರದ ವಕ್ತಾರ ಸೈಫ್ ಅಲ್ ಧಹೇರಿ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೈಗಾರಿಕಾ ಪ್ರದೇಶಗಳು, ಕಾರ್ಮಿಕ ವಸತಿ ಪ್ರದೇಶಗಳು, ಶಾಪಿಂಗ್ ಮಾಲ್‍ ಗಳು ಹಾಗೂ ಪಾರ್ಕ್‍ ಗಳಲ್ಲಿರುವ ಮಸೀದಿಗಳು ಮುಂದಿನ ಸೂಚನೆ ತನಕ ಬಂದ್ ಆಗಿರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಸೀದಿಗಳಲ್ಲಿ ಕಾರ್ಯನಿರ್ವಹಿಸುವ ಇಮಾಮ್ ‍ಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೋವಿಡ್-19 ಪರೀಕ್ಷೆಗೆ ಗುರಿಪಡಿಸಲಾಗುವುದು ಹಾಗೂ ಈ ಮೂಲಕ ಮಸೀದಿಗಳಿಗೆ ಆಗಮಿಸುವ ಜನರು ಸುರಕ್ಷಿತ ವಾತಾವರಣದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುವುದು.

ಮಸೀದಿಗಳ ಆರಂಭದ ಸಂದರ್ಭ ಕೆಲವೊಂದು ಮಾರ್ಗಸೂಚಿಗಳನ್ನು ನೀಡಲಾಗಿದ್ದು ಜನರು ಪರಸ್ಪರ ಮೂರು ಮೀಟರ್ ಅಂತರ ಕಾಪಾಡಬೇಕು, ಕೈಕುಲುಕುವ ಹಾಗಿಲ್ಲ, ಪವಿತ್ರ ಕುರ್ ಆನ್ ಪ್ರತಿಯನ್ನು ಮನೆಯಿಂದಲೇ ತರಬೇಕು, ಮಸೀದಿಗೆ ಭೇಟಿ ನೀಡುವ ಎಲ್ಲರೂ ಕಾಂಟಾಕ್ಟ್ ಟ್ರೇಸಿಂಗ್ ಆ್ಯಪ್ ಅಲ್‍ ಹೊಸ್ನ್ ಇದನ್ನು ಡೌನ್‍ಲೋಡ್ ಮಾಡಿರಬೇಕು ಹಾಗೂ  ಆರೋಗ್ಯ ಸಮಸ್ಯೆ ಇರುವವರು ಹಾಗೂ ಹಿರಿಯ ನಾಗರಿಕರು ಮಸೀದಿಗಳಿಗೆ ಭೇಟಿ ನೀಡಬಾರದು.

ಪ್ರಾರ್ಥನಾ ಸ್ಥಳಗಳಿಗೆ ಸಾರ್ವಜನಿಕರ ಭೇಟಿಯನ್ನು ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಮೊದಲು ಮಾರ್ಚ್ 16ರಂದು ನಿಷೇಧಿಸಲಾಗಿದ್ದರೆ, ನಂತರ ಎಪ್ರಿಲ್ 9ರಂದು ಅನಿರ್ದಿಷ್ಟಾವಧಿ ಅವಧಿಗೆ  ಪ್ರಾರ್ಥನಾ ಸ್ಥಳಗಳನ್ನು ಸಾರ್ವಜನಿಕರಿಗಾಗಿ ಮುಚ್ಚಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X