Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುವಾಹಟಿ: ಅಖಿಲ್ ಗೊಗೊಯಿ ಬಿಡುಗಡೆಗೆ...

ಗುವಾಹಟಿ: ಅಖಿಲ್ ಗೊಗೊಯಿ ಬಿಡುಗಡೆಗೆ ಆಗ್ರಹಿಸಿ ಕೈದಿಗಳಿಂದ ನಿರಶನ

ಸಿಎಎ ವಿರೋಧಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Jun 2020 8:07 PM IST
share
ಗುವಾಹಟಿ: ಅಖಿಲ್ ಗೊಗೊಯಿ ಬಿಡುಗಡೆಗೆ ಆಗ್ರಹಿಸಿ ಕೈದಿಗಳಿಂದ ನಿರಶನ

ಹೊಸದಿಲ್ಲಿ,ಜೂ.30: ರೈತ ನಾಯಕ ಅಖಿಲ್ ಗೊಗೊಯಿ ಬಿಡುಗಡೆಗೆ ಆಗ್ರಹಿಸಿ ಅಸ್ಸಾಂ ಗುವಾಹಟಿ ಸೆಂಟ್ರಲ್ ಜೈಲಿನ ಸುಮಾರು 1200 ಮಂದಿ ಕೈದಿಗಳು ನಿರಶನ ನಡೆಸಿದರು. ಅಲ್ಲದೆ ಕೊರೋನ ಸೋಂಕಿನ ಭೀತಿಯ ವಿರುದ್ಧ ತಮಗೆ ರಕ್ಷಣೆ ನೀಡುವಂತೆಯೂ ಕೈದಿಗಳು ಜೈಲಿನ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

 ಗುವಾಹಟಿ ಜೈಲಿನಿಂದ ಗೊಗೊಯಿ ಅವರ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೈದಿಗಳು ಜೂನ್ 25 ಹಾಗೂ 26ರಂದು ನಿರಶನ ನಡೆಸಿದ್ದರೆಂದು ಅಸ್ಸಾಂನ ದಿನಪತ್ರಿಕೆ ಆಮರ್ ಅಸೊಮ್ ವರದಿ ಮಾಡಿದೆ.

 ಕೊರೋನ ಹಾವಳಿ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಜೈಲಿಗೆ ಆಗಮಿಸುವ ಹೊಸ ಕೈದಿಗಳನ್ನು ಈಗ ಇರುವ ಕೈದಿಗಳ ಸೆಲ್‌ಗಳಲ್ಲಿ ಇರಿಸುವ ಮೊದಲು ಅವರನ್ನು ಕ್ವಾರಂಟೈನ್‌ಗೊಳಪಡಿಸಬೇಕೆಂದು ಬೇಡಿಕೆಯನ್ನು ಕೂಡಾ ನಿರಶನನಿರತ ಕೈದಿಗಳು ಆಗ್ರಹಿಸಿದ್ದಾರೆ.

ನಿರಶನ ಗಂಭೀರ ರೂಪವನ್ನು ತಾಳುತ್ತಿದ್ದಂತೆಯೇ ಹಲವಾರು ಉನ್ನತ ಜೈಲು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕೈದಿಗಳ ಜೊತೆ ಸಂಧಾನ ನಡೆಸಿದರು.

   ‘ ಹೊಸ ಕೈದಿಗಳನ್ನು ಕೋವಿಡ್-19 ತಪಾಸಣೆಗೊಳಪಡಿಸಿಯೇ ಜೈಲಿಗೆ ಕರೆದುಕೊಂಡು ಬರಬೇಕೆಂದು ಕೈದಿಗಳು ಲಿಖಿತರೂಪದ ಮನವಿಯನ್ನು ಸಲ್ಲಿಸಿದ್ದರು. ಆದಾಗ್ಯೂ ಜೈಲು ಅದಿಕಾರಿಗಳು ಅದನ್ನು ಕಡೆಗಣಿಸಿ ಹೊಸ ಕೈದಿಗಳನ್ನು ಕರೆತರುತ್ತಿದ್ದು, ಇದರೊಂದಿಗೆ ಸೆರೆಮನೆಯಲ್ಲಿರುವ 1200ಕ್ಕೂ ಅಧಿಕ ಮಂದಿ ಕೈದಿಗಳನ್ನು ಆರೋಗ್ಯ ಸಂಚಕಾರ ತಂದಿದ್ದಾರೆ. ಇದರಿಂದ ತಮಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಜೂನ್ 25 ಹಾಗೂ 26ರಂದು ಕೈದಿಗಳು ನಿರಶನ ನಡೆಸಿದೆಂದು ‘ಆಮರ್ ಅಸೊಮ್’ ವರದಿ ಮಾಡಿದೆ.

   ಅಸ್ಸಾಂನ ಕೃಷಿಕ ಮುಕ್ತಿ ಸಂಗ್ರಾಮ ಸಮಿತಿ (ಕೆಎಂಎಸ್‌ಎಸ್)ಯ ಸ್ಥಾಪಕರೂ ಆಗಿರುವ ಗೊಗೊಯಿ 200 ದಿನಗಳ ಜೈಲು ವಾಸವನ್ನು ಸೋಮವಾರ ಪೂರ್ಣಗೊಳಿಸಿದ್ದಾರೆ. ಎಂಎಸ್‌ಎಸ್ ಜೊತೆ ನಂಟು ಹೊಂದಿವ ಬಿಟು ಸೊನೊವಾಲ್, ಧೈಜಿಯಾ ಕೊನ್ವಾರ್ ಹಾಗೂ ಮಾನಸ್ ಕೊನ್ವರ್ ಅವರನ್ನು ಕೂಡಾ ಗೊಗೊಯಿ ಜೊತೆ ಬಂಧಿಸಲಾಗಿತ್ತು. ಡಿಸೆಂಬರ್ ತಿಂಗಳ ಆರಂಭದಲ್ಲಿ ಅಸ್ಸಾಂನಲ್ಲಿ ಭುಗಿಲೆದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದ ಈ ಯುವನಾಯಕರು ವಹಿಸಿದ್ದರು. ಅಸ್ಸಾಂನ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಕಟುಟೀಕಾಕಾರರಾದ ಇವರನ್ನು ಮಾವೋವಾದಿಗಳೆಂಬ ಆರೋಪ ಹೊರಿಸಿ ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯಡಿ ಬಂಧಿಸಲಾಗಿತ್ತು

 ಈವರೆಗೆ ರಾಜ್ಯ ಸಭಾ ಸಂಸದ ಅಜಿತ್ ಭೂಯಾನ್ ಸೇರಿದಂತೆ ಹಲವಾರು ಮಂದಿ ಗಣ್ಯ ವ್ಯಕ್ತಿಗಳು ಮುಖ್ಯಮಂತ್ರಿ ಸರ್ಭಾನಂದ ಸೊನೊವಾಲ್ ಅವರನ್ನು ಭೇಟಿಯಾಗಿ ಗೊಗೊಯಿ ಬಿಡುಗಡೆಗೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X