Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ: ಉಯಿಘರ್ ಮುಸ್ಲಿಂ ಮಹಿಳೆಯರ ಮೇಲೆ...

ಚೀನಾ: ಉಯಿಘರ್ ಮುಸ್ಲಿಂ ಮಹಿಳೆಯರ ಮೇಲೆ ಗರ್ಭನಿರೋಧಕ ವಿಧಾನಗಳ ಬಲವಂತದ ಹೇರಿಕೆ

ತನಿಖಾ ವರದಿ

ವಾರ್ತಾಭಾರತಿವಾರ್ತಾಭಾರತಿ30 Jun 2020 9:39 PM IST
share
ಚೀನಾ: ಉಯಿಘರ್ ಮುಸ್ಲಿಂ ಮಹಿಳೆಯರ ಮೇಲೆ ಗರ್ಭನಿರೋಧಕ ವಿಧಾನಗಳ ಬಲವಂತದ ಹೇರಿಕೆ

ಬೀಜಿಂಗ್, ಜೂ. 30: ಉಯಿಘರ್ ಮುಸ್ಲಿಮರ ಜನಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಚೀನಾವು ಕ್ಸಿನ್‌ಜಿಯಾಂಗ್‌ನಲ್ಲಿ ಮಹಿಳೆಯರ ಮೇಲೆ ಗರ್ಭನಿರೋಧಕ ವಿಧಾನಗಳನ್ನು ಬಲವಂತವಾಗಿ ಹೇರುತ್ತಿದೆ ಎಂದು ತನಿಖಾ ವರದಿಯೊಂದು ಆರೋಪಿಸಿದೆ.

ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಅಥವಾ ಗರ್ಭನಿರೋಧಕ ಸಾಧನಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳು ಮಹಿಳೆಯರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಚೀನಾದ ವಿದ್ವಾಂಸ ಅಡ್ರಿಯಾನ್ ಝೆಂಝ್ ತನ್ನ ವರದಿಯಲ್ಲಿ ಹೇಳಿದ್ದಾರೆ.

ಅವರ ವರದಿಯ ಬೆನ್ನಿಗೇ, ಈ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ವಿಶ್ವಸಂಸ್ಥೆಗೆ ಕರೆ ನೀಡಲಾಗಿದೆ.

ಅದೇ ವೇಳೆ, ಈ ಆರೋಪಗಳನ್ನು ತಳ್ಳಿಹಾಕಿರುವ ಚೀನಾವು, ಆರೋಪಗಳು ಆಧಾರರಹಿತ ಎಂದಿದೆ.

ಲಕ್ಷಾಂತರ ಉಯಿಘರ್ ಮುಸ್ಲಿಮರನ್ನು ಬಂಧನ ಶಿಬಿರಗಳಲ್ಲಿ ಇರಿಸಿರುವುದಕ್ಕಾಗಿ ಚೀನಾವು ಈಗಾಗಲೇ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆಯನ್ನು ಎದುರಿಸುತ್ತಿದೆ.

ಅಧಿಕೃತ ಪ್ರಾದೇಶಿಕ ಅಂಕಿಸಂಖ್ಯೆಗಳು, ನೀತಿ ದಾಖಲೆಗಳು ಮತ್ತು ಕ್ಸಿನ್‌ಜಿಯಾಂಗ್‌ನಲ್ಲಿರುವ ಉಯಿಘರ್ ಜನಾಂಗೀಯ ಮಹಿಳೆಯರೊಂದಿಗೆ ನಡೆಸಿದ ಸಂದರ್ಶನಗಳ ಆಧಾರದಲ್ಲಿ ಝೆಂಝ್ ತನ್ನ ವರದಿಯನ್ನು ಬರೆದಿದ್ದಾರೆ.

ಅನುಮೋದಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವ ಉಯಿಘರ್ ಮಹಿಳೆಯರು ಹಾಗೂ ಇತರ ಜನಾಂಗೀಯ ಅಲ್ಪಸಂಖ್ಯಾತ ಮಹಿಳೆಯರು ಗರ್ಭಪಾತಕ್ಕೆ ಒಳಗಾಗಲು ನಿರಾಕರಿಸಿದರೆ ಅವರನ್ನು ಬಂಧನ ಶಿಬಿರಗಳಿಗೆ ಕಳುಹಿಸುವ ಬೆದರಿಕೆಯನ್ನು ಒಡ್ಡಲಾಗುತ್ತಿದೆ ಎಂದು ವರದಿ ಆರೋಪಿಸಿದೆ.

ಉಯಿಘರ್ ಮಹಿಳೆಯರು ‘ನಿರ್ದಯಿ’ ಜನನ ನಿಯಂತ್ರಣ ಕಾರ್ಯಕ್ರಮಗಳನ್ನು ಎದುರಿಸಿದ್ದಾರೆ ಎಂದು ವರದಿಯ ಲೇಖಕರು ಹೇಳಿದ್ದಾರೆ.

ಅಲ್ಲಿ ಕಾನೂನುಬದ್ಧವಾಗಿ ಎರಡು ಮಕ್ಕಳನ್ನು ಪಡೆಯಬಹುದಾಗಿದೆ. ಒಂದೇ ಮಕ್ಕಳನ್ನು ಹೊಂದಿರುವ ಮಹಿಳೆಯರಿಗೆ ಬಲವಂತವಾಗಿ ಗರ್ಭನಿರೋಧಕ ಸಾಧನಗಳನ್ನು ಅಳವಡಿಸಲಾಗುತ್ತಿದೆ ಹಾಗೂ ಎರಡು ಮಕ್ಕಳನ್ನು ಹೊಂದಿರುವ ಮಹಿಳೆಯರನ್ನು ಸಂತಾನಹರಣ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗುವಂತೆ ಬಲವಂತಪಡಿಸಲಾಗುತ್ತಿದೆ ಎಂದು ವರದಿ ಆರೋಪಿಸಿದೆ.

ಕ್ಸಿನ್‌ಜಿಯಾಂಗ್‌ನಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಹಜ ಜನಸಂಖ್ಯಾ ಬೆಳವಣಿಗೆಯು ನಾಟಕೀಯವಾಗಿ ಕಡಿಮೆಯಾಗಿದೆ ಎಂದು ಝೆಂಝ್ ಹೇಳಿದ್ದಾರೆ. 2015 ಮತ್ತು 2018ರ ನಡುವಿನ ಅವಧಿಯಲ್ಲಿ ಎರಡು ಅತಿ ದೊಡ್ಡ ಉಯಿಘರ್ ರಾಜ್ಯಗಳಲ್ಲಿ ಜನಸಂಖ್ಯೆ ಬೆಳವಣಿಗೆ ದರವು 84 ಶೇಕಡದಷ್ಟು ಕಡಿಮೆಯಾಗಿದೆ ಹಾಗೂ 2019ರಲ್ಲಿ ಅದು ಇನ್ನಷ್ಟು ಇಳಿಕೆ ಕಂಡಿದೆ ಎಂದು ವರದಿ ತಿಳಿಸಿದೆ.

ಬಲವಂತದ ಸಂತಾನಹರಣ ನಿಲ್ಲಿಸಿ: ಪಾಂಪಿಯೊ

ಉಯಿಘರ್ ಮಹಿಳೆಯರ ಮೇಲೆ ಸಂತಾನಹರಣ ಕ್ರಮಗಳನ್ನು ಬಲವಂತವಾಗಿ ಹೇರುವುದನ್ನು ನಿಲ್ಲಿಸುವಂತೆ ಅಮೆರಿಕದ ವಿದೇಶ ಕಾರ್ಯದರ್ಶಿ ಮೈಕ್ ಪಾಂಪಿಯೊ ಸೋಮವಾರ ಒತ್ತಾಯಿಸಿದ್ದಾರೆ.

‘‘ಈ ಭಯಾನಕ ಕ್ರಮಗಳನ್ನು ತಕ್ಷಣ ಕೊನೆಗೊಳಿಸುವಂತೆ ನಾವು ಚೀನಾ ಕಮ್ಯುನಿಸ್ಟ್ ಪಕ್ಷಕ್ಕೆ ಕರೆ ನೀಡುತ್ತೇವೆ ಹಾಗೂ ಅಮಾನವೀಯ ಶೋಷಣೆಗಳನ್ನು ಕೊನೆಗೊಳಿಸುವಂತೆ ಒತ್ತಾಯಿಸುವ ಅಮೆರಿಕದ ಪ್ರಯತ್ನಗಳಿಗೆ ಕೈಜೋಡಿಸುವಂತೆ ಎಲ್ಲ ದೇಶಗಳಿಗೆ ಮನವಿ ಮಾಡುತ್ತೇವೆ’’ ಎಂದು ಹೇಳಿಕೆಯೊಂದರಲ್ಲಿ ಪಾಂಪಿಯೊ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X