Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ತಡೆಗಟ್ಟುವಲ್ಲಿ ಬಿಬಿಎಂಪಿ ವಿಫಲ:...

ಕೊರೋನ ತಡೆಗಟ್ಟುವಲ್ಲಿ ಬಿಬಿಎಂಪಿ ವಿಫಲ: ವಿಪಕ್ಷ ಆರೋಪ

ಸೋಂಕು ನಿಯಂತ್ರಿಸುವುದಾಗಿ ಮೇಯರ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ30 Jun 2020 10:33 PM IST
share
ಕೊರೋನ ತಡೆಗಟ್ಟುವಲ್ಲಿ ಬಿಬಿಎಂಪಿ ವಿಫಲ: ವಿಪಕ್ಷ ಆರೋಪ

ಬೆಂಗಳೂರು, ಜೂ.30: ನಗರದಲ್ಲಿ ಕೊರೋನ ತಡೆಗಟ್ಟುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕರು ಕೌನ್ಸಿಲ್ ಆರೋಪಿಸಿದರೆ, ಸೋಂಕು ನಿಯಂತ್ರಿಸುವುದಾಗಿ ಮೇಯರ್ ಭರವಸೆ ನೀಡಿದರು.

ಮಂಗಳವಾರ ನಡೆಸ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಕೊರೋನ ತಡೆಗಟ್ಟಲು ಬಿಬಿಎಂಪಿ ವಿಫಲವಾಗಿದೆ ಎಂಬ ಪ್ರತಿಪಕ್ಷ ಸದಸ್ಯರ ಆರೋಪಕ್ಕೆ ಪ್ರತಿಕ್ರಿಯಿಸಿದ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ಸೋಂಕು ತಡೆಗಟ್ಟಲು ರಾಜ್ಯ ಸರಕಾರ ಬಿಬಿಎಂಪಿಗೆ 45 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಹಣವನ್ನು ಸೂಕ್ತವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ, ಇತರ ಜಿಲ್ಲೆಗಳಿಗೆ ಹೋಲಿಸಿ ಕೊಂಡರೆ ಉತ್ತಮವಾಗಿದೆ. ಅತಿ ಕಡಿಮೆ ಸೋಂಕು ಕಂಡುಬರುತ್ತಿದೆ. ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ 14 ದಿನಗಳಲ್ಲೇ ಗುಣಮುಖರಾಗುತ್ತಿರುವುದು ಕಂಡುಬರುತ್ತಿದೆ ಎಂದು ಸಭೆಗೆ ತಿಳಿಸಿದರು.

ನಗರದಲ್ಲಿ ಅಂಬ್ಯುಲೆನ್ಸ್ ಸಮಸ್ಯೆ ಇಲ್ಲ. ಕೋರ್ ಏರಿಯಾಗಳಲ್ಲಿ 10 ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. 100 ಬೆಡ್‍ಗಳಿಗಿಂತ ಹೆಚ್ಚಿರುವ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಿಕೊಳ್ಳ ಲಾಗಿದೆ. ಹಲವು ಕ್ರೀಡಾಂಗಣ, ಕಲ್ಯಾಣ ಮಂಟಪ, ಹಾಸ್ಟೆಲ್, ಹೊಟೇಲ್‍ಗಳಲ್ಲಿ ಸೋಂಕಿತರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. 22 ಕೋವಿಡ್ ಸೆಂಟರ್‍ಗಳಿದ್ದು, 16 ಸಾವಿರ ಬೆಡ್ ವ್ಯವಸ್ಥೆ ಇದೆ. ಇಸ್ಕಾನ್ ಸಂಸ್ಥೆಯಿಂದ ಸೋಂಕಿತರಿಗೆ ಆಹಾರ ಸರಬರಾಜು ಮಾಡಲಾಗುತ್ತಿದೆ ಎಂದರು.

ಕೆಲವು ಕಡೆ ಬೆಡ್‍ಗಳ ಸಮಸ್ಯೆಯಿದ್ದು ಕಂದಾಯ ಸಚಿವ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಹೆಲ್ಪ್ ಡೆಸ್ಕ್ ಕಡ್ಡಾಯ
ಸೋಂಕು ಬಂದಾಗ ಸದಸ್ಯರಿಗೆ ಮೊದಲ ಕರೆ ಬರಲಿದೆ. ಯಾವ ಅಧಿಕಾರಿಗಳು ನೋಡಲ್ ಅಧಿಕಾರಿ ಆಗಿರುತ್ತಾರೆ ಅವರ ದೂರವಾಣಿ ಸಂಪರ್ಕವನ್ನು 198 ಸದಸ್ಯರಿಗೆ ನೀಡಬೇಕು. ಎಲ್ಲಾ ಕೆಲಸ ವಲಯ ಜೆಸಿಗಳೇ ಮಾಡಲು ಸಾಧ್ಯವಿಲ್ಲ. ಎಲ್ಲಾ ವಲಯಗಳಲ್ಲಿ ಹೆಲ್ಪ್ ಡೆಸ್ಕ್ ಕಡ್ಡಾಯವಾಗಿ ಮಾಡಬೇಕು ಎಂದು ಮೇಯರ್ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X