Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "100 ತಪ್ಪು ಮಾಡು ಅಂದ್ರು ಸಚಿವರು, ನಾವು...

"100 ತಪ್ಪು ಮಾಡು ಅಂದ್ರು ಸಚಿವರು, ನಾವು 2 ಗೋರಿಗಳನ್ನು ಕಾರ್ಯಕರ್ತರಿಂದ ಒಡೆಸಿದೆವು"

ಫೇಸ್‌ಬುಕ್‌ನಲ್ಲಿ ಬಜರಂಗದಳದ ಮಾಜಿ ಮುಖಂಡನಿಂದ ಕಾಮೆಂಟ್

ವಾರ್ತಾಭಾರತಿವಾರ್ತಾಭಾರತಿ30 Jun 2020 11:19 PM IST
share
100 ತಪ್ಪು ಮಾಡು ಅಂದ್ರು ಸಚಿವರು, ನಾವು 2 ಗೋರಿಗಳನ್ನು ಕಾರ್ಯಕರ್ತರಿಂದ ಒಡೆಸಿದೆವು

►ಹಳೇ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಎಸ್ಪಿಗೆ ದೂರು
ಚಿಕ್ಕಮಗಳೂರು, ಜೂ.30: 2017ರಲ್ಲಿ ಜಿಲ್ಲೆಯ ಬಾಬಾಬುಡನ್ ಗಿರಿಯಲ್ಲಿ ದತ್ತ ಜಯಂತಿಯ ವೇಳೆ ನಡೆದ ಗೋರಿಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿಂತೆ ಬಜರಂಗದಳದ ಮಾಜಿ ಮುಖಂಡನೊಬ್ಬ ಫೇಸ್‌ಬುಕ್‌ನಲ್ಲಿ ಹಾಕಿರುವ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿಕ್ಕಮಗಳೂರಿನ ಬಜರಂಗದಳದ ಮಾಜಿ ಮುಖಂಡ ತುಡುಕೂರು ಮಂಜು ಎಂಬವರ ಫೇಸ್‌ಬುಕ್ ಖಾತೆಯಿಂದ ಈ ಕಮೆಂಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

'2017ರ ದತ್ತಜಯಂತಿ ಸಂದರ್ಭ ದತ್ತಪೀಠದಲ್ಲಿ 1 ತಪ್ಪಲ್ಲ, 100 ತಪ್ಪು ಮಾಡು, ನಾನು ತಲೆ ಕೊಡುತ್ತೀನಿ ಎಂದು ಇದೇ ಮಾನ್ಯ ಸಚಿವರು ಅಂದ್ರು, ನಾವು ಅಣ್ಣ ಹೇಳಿದ್ರಲ್ಲ ಅಂತ 2 ಗೋರಿಯನ್ನು ನಮ್ಮ ಕಾರ್ಯಕರ್ತರ ಕೈಯಿಂದ ಒಡೆಸಿದೆವು. ಪರಿಣಾಮ ಮಧ್ಯರಾತ್ರಿ 2 ಗಂಟೆಗೆ ಸುಮಾರು 20 ಪೊಲೀಸರು ನನ್ನ ಮನೆ ಸುತ್ತ ಸುತ್ತುವರೆದು ನನ್ನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳಿಸಿದ್ರು. ತಲೆ ಕೊಡುತ್ತೇನೆ ಎಂದು ಹೇಳಿದವರು ಮೂರು ವರ್ಷ ಕಳೆದರೂ ಇವತ್ತಿಗೂ ಅದರ ಬಗ್ಗೆ ಮಾತನಾಡಿಲ್ಲ. ನಾನು 2 ದಿನ ಜೈಲುವಾಸ ಅನುಭವಿಸಿ ಬೇಲ್ ಪಡೆದು ಹೊರಬಂದೆ' ಎಂದು ಮಂಜು ಫೇಸ್ಬುಕ್ ಖಾತೆಯಲ್ಲಿ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ.

ಮಂಜು ಅವರು ಮಾಡಿರುವ ಕಾಮೆಂಟ್‌ನ ಸ್ಕ್ರೀನ್ ಶಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವಂತೆಯೇ ಸಂವಿಧಾನ ಉಳಿವಿಗಾಗಿ ಹೋರಾಟ ಸಮಿತಿ ಮುಖಂಡ ಗೌಸ್ ಮೊಹಿದ್ದೀನ್ ಸಹಿತ ಹಲವು ಸಂಘ ಸಂಸ್ಥೆಗಳ ಮುಖಂಡರು, ತುಡುಕೂರು ಮಂಜು ಅವರ ಫೇಸ್‌ಬುಕ್ ಕಾಮೆಂಟ್‌ಗಳ ಆಧಾರದ ಮೇಲೆ 2017ರ ಪ್ರಕರಣವನ್ನು ಮರು ತನಿಖೆಗೊಳಪಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಮಂಜು ಹೇಳಿರುವಂತೆ ಪ್ರಕರಣದಲ್ಲಿ ಶಾಮೀಲಾಗಿರುವ ಸಚಿವರು ಯಾರು, ಅವರ ಪಾತ್ರ ಏನು ಎಂಬುದನ್ನು ಬಯಲಿಗೆಳೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಗಳವಾರ ದೂರು ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X