Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ವಾರಿಯರ್ಸ್‌ಗಳಿಗೆ ಸೋಂಕು ತಗಲದಂತೆ...

ಕೊರೋನ ವಾರಿಯರ್ಸ್‌ಗಳಿಗೆ ಸೋಂಕು ತಗಲದಂತೆ ಹೆಚ್ಚಿನ ತರಬೇತಿ: ವೈದ್ಯರ ದಿನಾಚರಣೆಯಲ್ಲಿ ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ1 July 2020 6:01 PM IST
share
ಕೊರೋನ ವಾರಿಯರ್ಸ್‌ಗಳಿಗೆ ಸೋಂಕು ತಗಲದಂತೆ ಹೆಚ್ಚಿನ ತರಬೇತಿ: ವೈದ್ಯರ ದಿನಾಚರಣೆಯಲ್ಲಿ ಉಡುಪಿ ಡಿಸಿ

‌ಉಡುಪಿ, ಜು.1: ಉಡುಪಿ ಜಿಲ್ಲೆಯ ಕೊರೋನ ವಾರಿಯರ್ಸ್‌ಗಳಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಅವರಿಗೆ ಕೊರೋನ ಸೋಂಕು ತಗಲ ದಂತೆ ತಡೆಯಬೇಕಾಗಿದೆ. ಈ ಮೂಲಕ ನಮ್ಮ ಜಿಲ್ಲೆ ಇಡೀ ದೇಶಕ್ಕೆ ಮಾದರಿ ಯಾಗಬೇಕು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಿದರೆ ಕೊರೋನ ವಾರಿಯರ್ಸ್ ಕೊರೋನ ಕೈಗೆ ಸಿಗದಂತೆ ಮಾಡಬಹುದು. ಇದು ನಮ್ಮ ಮುಂದಿರುವ ದೊಡ್ಡ ಸವಾಲು ಆಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ ವತಿಯಿಂದ ಭಾರತ ರತ್ನ ಡಾ.ಬಿ.ಸಿ.ರಾಯ್ ಸ್ಮರಣಾರ್ಥ ಬುಧವಾರ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ‘ವೈದ್ಯರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಕೊರೋನ ಸಮುದಾಯಕ್ಕೆ ಹರಡದಂತೆ ತಡೆಯಲು ನಾವು ಇಂದು ಹೆಚ್ಚು ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಕೊರೋನ ಸೋಂಕಿತರನ್ನು ಆದಷ್ಟು ಬೇಗ ಗುರುತಿಸಿ, ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡಿದರೆ ಸಾವು ಕಡಿಮೆ ಮಾಡಬಹುದು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಎಲ್ಲ ಸೋಂಕಿತರು ಬದುಕಿ ಬಂದಿರುವುದು ನಮ್ಮ ಜಿಲ್ಲೆಯಲ್ಲಿ ಮಾತ್ರ. ಇದಕ್ಕೆ ವೈದ್ಯರ ತಂಡದ ಶ್ರಮ ಮುಖ್ಯವಾಗಿದೆ. ಈ ಉಡುಪಿ ಮಾಡೆಲ್ ಅನ್ನು ಇತರ ಜಿಲ್ಲೆಯವರು ಕೂಡ ಈಗ ಅನುಸರಿಸುತ್ತಿದ್ದಾರೆ ಎಂದರು.

ಉಡುಪಿಯ ಶಸ್ತ್ರಚಿಕಿತ್ಸಾ ತಜ್ಞ ಡಾ.ವಾಸುದೇವ ಸೋಮಯಾಜಿ, ಕಟಪಾಡಿಯ ವೈದ್ಯ ಡಾ.ಶ್ರೀನಿವಾಸ ರಾವ್ ಕೊರಡ್ಕಲ್ ಅವರನ್ನು ಸಮ್ಮಾನಿಸ ಲಾಯಿತು. ಡಾ.ಬಿ.ಸಿ.ರಾಯ್ ಪ್ರಶಸ್ತಿ ಪುರಸ್ಕೃತ ಡಾ.ಪ್ರಭಾಕರ ಶೆಟ್ಟಿ ಕಾಪು ಹಾಗೂ ಹಿರಿಯ ಸಾಧಕ ವೈದ್ಯ ಡಾ.ರವೀಂದ್ರನಾಥ ಶೆಟ್ಟಿ ಅವರನ್ನು ಅಭಿನಂದಿಸ ಲಾಯಿತು.

ಕೊರೊನಾ ಕೋವಿಡ್-19ರ ವಿರುದ್ಧ ಹೋರಾಡುತ್ತಿರುವ 16 ಮಂದಿ ಐಎಂಎ ಸದಸ್ಯ ವೈದ್ಯರನ್ನು ಗೌರವಿಸಲಾಯಿತು. ಐಎಂಎ ಅಧ್ಯಕ್ಷ ಡಾ. ಉಮೇಶ್ ಪ್ರಭು ಸ್ವಾಗತಿಸಿದರು. ಡಾ.ವಿನಾಯಕ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಡಾ.ಪ್ರಕಾಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

‘ವಾರಿಯರ್ಸ್‌ಗಳಿಗೆ ಸನ್ಮಾನಿಸುವ ಸಮಯ ಇದಲ್ಲ’ಜಿಲ್ಲೆಯ ಕೆಲವು ಕಡೆಗಳಲ್ಲಿ ಕೊರೋನ ವಾರಿಯರ್ಸ್‌ಗಳಿಗೆ ನಿಯಮಗಳನ್ನು ಗಾಳಿಗೆ ತೂರಿ ಸನ್ಮಾನಿಸುವ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗುತ್ತಿದೆ. ಅದು ನಿಜವಾದ ಸನ್ಮಾನ ಅಲ್ಲ. ಮುಂದೆ ಇಂತಹ ಸನ್ಮಾನ ನಡೆಯಬಾರದು. ನಾವು ಈಗ ಹೋರಾಟದ ಪ್ರಾರಂಭದ ಹಂತದಲ್ಲಿರುವುದರಿಂದ ಕೊರೋನ ವಾರಿಯರ್ಸ್‌ಗಳಿಗೆ ಸನ್ಮಾನ ಮಾಡಲು ಇದು ಸೂಕ್ತ ಸಮಯ ಅಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಕೊರೋನ ವಿರುದ್ಧದ ಹೋರಾಟ ಮುಗಿದ ನಂತರ ಜಿಲ್ಲಾಡಳಿತವೇ ವಾರಿ ಯರ್ಸ್‌ಗಳನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಸಲಿದೆ. ಪ್ರಸ್ತುತ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ಇಲ್ಲದಿರುವಾಗ ಕೊರೋನ ವಾರಿಯರ್ಸ್ ಗಳ ಸನ್ಮಾನ ಸಮಾರಂಭ ಕೂಡ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X