ಪ್ರಸಾದ್ ರಾವ್ಗೆ ಡಾಕ್ಟರೇಟ್ ಪದವಿ
ಉಡುಪಿ, ಜು.1: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಂಗ್ಲೀಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರಸಾದ್ ರಾವ್ ಎಂ., ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಇಂಗ್ಲೀಷ್ ಸ್ನಾತಕೋತ್ತರ ಕೋರ್ಸುಗಳ ಪ್ರಾಧ್ಯಾಪಕ ರಾದ ಡಾ. ನಾಗ್ಯ ನಾಯ್ಕಾ ಬಿ.ಹೆಚ್. ಇವರ ಮಾರ್ಗದರ್ಶನದಲ್ಲಿ ‘1960-2010ರ ಅವಧಿಯ ಕನ್ನಡ ನಾಟಕಗಳಲ್ಲಿ ರಾಜಕೀಯ ಮತ್ತು ಧರ್ಮ ಒಂದು ಅಧ್ಯಯನ’ ಎಂಬ ಸಂಶೋಧನ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ಪ್ರಧಾನಿಸಿದೆ.
ಡಾ.ಪ್ರಸಾದ್ ರಾವ್ 2011ರಿಂದ ತೆಂಕನಿಡಿಯೂರು ಕಾಲೇಜಿನಲ್ಲಿ ಎಂ.ಎ ಇಂಗ್ಲೀಷ್ ಸ್ನಾತಕೋತ್ತರ ಕೋರ್ಸಿನ ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕೆ ಮುನ್ನ ಉಡುಪಿಯ ಪೂರ್ಣಪ್ರಜ್ಞ ಕಾಲೇಜು, ಸರಕಾರಿ ಕಾಲೇಜು ಕೊಪ್ಪ, ಸರಕಾರಿ ಕಾಲೇಜು ಕಾಪು ಇಲ್ಲಿ ಪ್ರಾಧ್ಯಾಪಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಪ್ರಸ್ತುತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಯಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ.