Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನ್‍ಲಾಕ್ 2: ಮುಂದಿನ ಆದೇಶದವರೆಗೆ...

ಅನ್‍ಲಾಕ್ 2: ಮುಂದಿನ ಆದೇಶದವರೆಗೆ ಕೊಡಗಿನಲ್ಲೂ ನಿರ್ಬಂಧ ಜಾರಿ

ವಾರ್ತಾಭಾರತಿವಾರ್ತಾಭಾರತಿ1 July 2020 7:14 PM IST
share

ಮಡಿಕೇರಿ ಜು.1: ಕೊಡಗು ಜಿಲ್ಲೆಯಲ್ಲಿ ಕೊರೊನ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.   

ಸರ್ಕಾರದ ಮಾರ್ಗಸೂಚಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ಅನ್‍ಲಾಕ್ 2 ಅವಧಿಯ ನಿರ್ಬಂಧಾಜ್ಞೆಯನ್ನು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಂಟೈನ್‍ಮೆಂಟ್ ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆ ನಡೆಸಬಾರದು. ಶಾಲೆ, ಕಾಲೇಜು, ಶೈಕ್ಷಣಿಕ, ತರಬೇತಿ, ಕೋಚಿಂಗ್ ಕೇಂದ್ರಗಳು, ಸಿನಿಮಾ ಹಾಲ್, ಶಾಪಿಂಗ್ ಮಾಲ್‍ಗಳು, ಜಿಮ್ನಾಸಿಯಂ, ಕ್ರೀಡಾ ಸಮುಚ್ಚಯ, ಈಜು ಕೊಳ, ಮನೋರಂಜನಾ ಪಾರ್ಕ್, ಥಿಯೇಟರ್‍ಗಳು, ಬಾರ್ ಮತ್ತು ಅಡಿಟೋರಿಯಂ, ಅಸೆಂಬ್ಲಿ ಹಾಲ್ ಮತ್ತು ಇಂತಹ ಸ್ಥಳಗಳು. ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ,  ಸಾಂಸ್ಕೃತಿಕ, ಧಾರ್ಮಿಕ ಮುಂತಾದ ಒಗ್ಗೂಡುವಿಕೆಗಳು, ಈ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ಅನುಮತಿಸಲಾದ ಎಲ್ಲಾ ಚಟುವಟಿಕೆಗಳನ್ನು ಸೋಮವಾರದಿಂದ ಶನಿವಾರದವರೆಗೆ ನಡೆಸಬಹುದಾಗಿದೆ

ಉಳಿದಂತೆ ಎಲ್ಲಾ ರೀತಿಯ ಚಟುವಟಿಕೆ ಮತ್ತು ವ್ಯಕ್ತಿಗಳ ಸಂಚಾರವನ್ನು ಜಿಲ್ಲೆಯಾದ್ಯಂತ ವಾರದ ಎಲ್ಲಾ ದಿನಗಳಲ್ಲಿಯೂ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕಡ್ಡಾಯವಾಗಿ ನಿರ್ಬಂಧಿಸಿದೆ. ಜು.5 ರಿಂದ ಆ.2 ರ ವರೆಗೆ 4 ರವಿವಾರ ಅವಶ್ಯ ಚಟುವಟಿಕೆ, ತುರ್ತು,  ವೈದ್ಯಕೀಯ ಹಿನ್ನಲೆ ಹೊರತುಪಡಿಸಿ ಉಳಿದಂತೆ ಪೂರ್ಣ ಪ್ರಮಾಣದಲ್ಲಿ ದಿನ ಪೂರ್ತಿ ಲಾಕ್‍ಡೌನ್ ಇರುತ್ತದೆ. ಪೂರ್ವ ನಿಯೋಜಿತ ಮದುವೆ ಕಾರ್ಯಕ್ರಮಗಳಿದ್ದಲ್ಲಿ ಷರತ್ತುಬದ್ಧವಾಗಿ ನಡೆಸಬಹುದಾಗಿದೆ. 

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಕಚೇರಿಗಳು, ಬೋರ್ಡ್‍ಗಳು ಮತ್ತು ಕಾರ್ಪೋರೇಷನ್ನುಗಳು (ತುರ್ತು ಮತ್ತು ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳು, ಕಚೇರಿಗಳು, ಬೋರ್ಡ್‍ಗಳು ಮತ್ತು ಕಾರ್ಪೋರೇಷನ್ನುಗಳನ್ನು ಹೊರತುಪಡಿಸಿ) ಜುಲೈ, 10 ರಿಂದ ಆಗಸ್ಟ್, 2 ನೇ ವಾರದ ವರೆಗೆ ಎಲ್ಲಾ ಶನಿವಾರ ಮುಚ್ಚಲ್ಪಡುತ್ತದೆ. 

65 ವರ್ಷ ಮೇಲ್ಪಟ್ಟವರು, ಗರ್ಭಿಣಿ ಮಹಿಳೆಯರು, 10 ವರ್ಷದ ಒಳಗಿನ ಮಕ್ಕಳು ತಮ್ಮ ಮನೆಯಿಂದ ಹೊರಬರಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮೂಗು ಮತ್ತು ಬಾಯಿಯನ್ನು ಮುಚ್ಚುವಂತೆ ಮುಖಗವಸು ಧರಿಸಬೇಕು. ಮತ್ತೊಬ್ಬರಿಂದ ಕನಿಷ್ಟ 2 ಮೀಟರ್ (6 ಅಡಿ) ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉಲ್ಲಂಘನೆಗೆ ಸ್ಥಳದಲ್ಲೇ ರೂ.100 ದಂಡ ವಿಧಿಸಿ ವಸೂಲಿಸಲಾಗುವುದು. ಮದುವೆ ಕಾರ್ಯಕ್ರಮಗಳಲ್ಲಿ ಗರಿಷ್ಟ 50 ಮತ್ತು ಅಂತ್ಯ ಸಂಸ್ಕಾರಗಳಂತಹ ಕಾರ್ಯಕ್ರಮಗಳಲ್ಲಿ ಗರಿಷ್ಟ 20 ಕ್ಕಿಂತ ಹೆಚ್ಚಿಗೆ ಜನ ಸೇರುವಂತಿಲ್ಲ. 

 ಅಂಗಡಿ ಮುಂಗಟ್ಟುಗಳಲ್ಲಿ ಮತ್ತು ವ್ಯಾಪಾರ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ನಿಷೇಧಿಸಿದೆ. ಉಲ್ಲಂಘನೆಯು ದಂಡನೀಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಬೀಡ, ಗುಟ್ಕಾ ಹಾಗೂ ತಂಬಾಕು ಸೇವನೆ ನಿಷೇಧಿಸಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಆದೇಶ ಹೊರಡಿಸಲಾಗಿದ್ದು. ವಿನಾಕಾರಣ ತಿರುಗಾಡುವುದು, ಗುಂಪುಗೂಡುವುದು ಮಾಡತಕ್ಕದ್ದಲ್ಲ. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಆದೇಶದ ಉಲ್ಲಂಘನೆಯು ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X