Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ 22 ಮಂದಿಯಲ್ಲಿ ಕೋವಿಡ್...

ಉಡುಪಿ ಜಿಲ್ಲೆಯ 22 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ವಾರ್ತಾಭಾರತಿವಾರ್ತಾಭಾರತಿ1 July 2020 8:51 PM IST
share
ಉಡುಪಿ ಜಿಲ್ಲೆಯ 22 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ಉಡುಪಿ, ಜು.1: ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕಿಗೆ ಬುಧವಾರ ಉಡುಪಿ ಜಿಲ್ಲೆಯ 22 ಮಂದಿ ತುತ್ತಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 22 ಮಂದಿಯಲ್ಲಿ ಮುಂಬೈ, ಮಹಾರಾಷ್ಟ್ರ ದಿಂದ ಬಂದ ಐವರು, ಅಬುಧಾಬಿ, ಬೆಂಗಳೂರು ಮತ್ತು ತೆಲಂಗಾಣದಿಂದ ತಲಾ ಒಬ್ಬರು ಹಾಗೂ ಜಿಲ್ಲೆಯ ಸ್ಥಳೀಯ ಪ್ರಾಥಮಿಕ ಸಂಪರ್ಕಿತರು 14 ಮಂದಿ ಸೇರಿದ್ದಾರೆ. ಉಡುಪಿ ತಾಲೂಕಿನ ಐದು ಮಂದಿ, ಕುಂದಾಪುರದ 11 ಹಾಗೂ ಕಾರ್ಕಳ 6 ಮಂದಿ ಇವರಲ್ಲಿ ಸೇರಿದ್ದಾರೆ. 10 ಮಂದಿ ಪುರುಷರು, 11 ಮಂದಿ ಮಹಿಳೆಯರು ಹಾಗೂ ಒಂದು ವರ್ಷ ಪ್ರಾಯದ ಒಂದು ಗಂಡು ಮಗು ಪಾಸಿಟಿವ್ ಬಂದವರಲ್ಲಿದ್ದಾರೆ. 85 ವರ್ಷ ಪ್ರಾಯದ ವೃದ್ಧೆಯು ಸೇರಿದಂತೆ 60 ವರ್ಷ ಪ್ರಾಯದ ಮೂವರು ಹಿರಿಯ ನಾಗರಿಕರು ಪಾಸಿಟಿವ್ ಬಂದವರಲ್ಲಿದ್ದಾರೆ ಎಂದು ಅವರು ತಿಳಿಸಿದರು.

ಮಂಗಳವಾರ ಪಾಸಿಟಿವ್ ಬಂದ ಬಟ್ಟೆ ಅಂಗಡಿಯೊಂದರ ಮಾಲಕರು ಬೈಂದೂರು ತಾಲೂಕಿನ ಉಪ್ಪುಂದವರಾಗಿದ್ದು, ಹೆಜಮಾಡಿ ಸಮೀಪದವರಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಬುಧವಾರದ 22 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಒಟ್ಟು ಸಂಖ್ಯೆ 1228ಕ್ಕೇರಿದೆ. ಉಡುಪಿ ಜಿಲ್ಲೆಯು ಈಗಲೂ ಬೆಂಗಳೂರು (5290) ಹಾಗೂ ಕಲಬುರಗಿ ಜಿಲ್ಲೆ (1450) ಜಿಲ್ಲೆಗಳ ಬಳಿಕ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಯಾದಗಿರಿ 949 ಕೇಸುಗಳೊಂದಿಗೆ ನಾಲ್ಕನೇ, ಬಳ್ಳಾರಿ 919 ಪ್ರಕರಣಗಳೊಂದಿಗೆ ಐದನೇ ಹಾಗೂ ದಕ್ಷಿಣ ಕನ್ನಡ ಜಿಲ್ಲೆ (825) ಆರನೇ ಸ್ಥಾನದಲ್ಲಿವೆ.

ಸ್ಥಳೀಯರು 14 ಮಂದಿ: ಜಿಲ್ಲೆಯಲ್ಲಿ ಈಗಾಗಲೇ ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕಿತರು 14 ಮಂದಿ ಇಂದು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ ಹೆಬ್ರಿ, ಕಾಪುವಿನ ತಲಾ ಇಬ್ಬರು, ತಲ್ಲೂರು, ಬೈಂದೂರಿನ ತಲಾ ಒಬ್ಬರಿದ್ದಾರೆ. ಅಲ್ಲದೇ ಕಳೆದ ರವಿವಾರ ಪಾಸಿಟಿವ್ ಬಂದ ಉಡುಪಿ ನಗರ ಬನ್ನಂಜೆ ರಸ್ತೆಯಲ್ಲಿರುವ ಹೊಟೇಲ್ ಒಂದರ ಬಾಣಸಿಗನ ಸಂಪರ್ಕದಿಂದ ಒಬ್ಬರು ಇಂದು ಪಾಸಿಟಿವ್ ಬಂದಿದ್ದಾರೆ. ಎಲ್ಲರೂ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಪಾಸಿಟ್ ಬಂದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಳಿಕ ಗುಣಮುಖರಾದ ಇಬ್ಬರನ್ನು ಇಂದು ಬಿಡುಗಡೆಗೊಳಿಸಿ ಮನೆಗೆ ಕಳುಹಿಸ ಲಾಗಿದೆ. ಇವರಲ್ಲಿ ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆ ಹಾಗೂ ಕಾರ್ಕಳ ಸರಕಾರಿ ಆಸ್ಪತ್ರೆಯ ತಲಾ ಒಬ್ಬರಿದ್ದಾರೆ. ಈ ಮೂಲಕ ಬಿಡುಗಡೆ ಗೊಂಡವರ ಒಟ್ಟು ಸಂಖ್ಯೆ ಜಿಲ್ಲೆಯಲ್ಲಿ 1069ಕ್ಕೇರಿದೆ. ಇನ್ನು 156 ಮಂದಿ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ. ನಗರದ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಹಿರಿಯ ನಾಗರಿಕರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಡಿಎಚ್‌ಓ ವಿವರಿಸಿದರು.

218 ನೆಗೆಟಿವ್: ಬುಧವಾರ 218 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿವೆ. ಅಲ್ಲದೇ ಇಂದು ಇನ್ನೂ ಒಟ್ಟು 263 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಸೋಂಕಿನ ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 17 ಮಂದಿ, ಕೋವಿಡ್ ಸಂಪರ್ಕಿತರು 19, ಉಸಿರಾಟ ತೊಂದರೆಯ ಆರು ಮಂದಿ, ಶೀತಜ್ವರದಿಂದ ಬಳಲುವ 20 ಹಾಗೂ ಕೋವಿಡ್ ಹಾಟ್‌ಸ್ಪಾಟ್ ಗಳಿಂದ ಬಂದ 201 ಮಂದಿಯ ಸ್ಯಾಂಪಲ್‌ಗಳು ಸೇರಿವೆ.

ಇಂದು ಪಡೆದ 263 ಮಂದಿ ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 14,819ಕ್ಕೇರಿದೆ. ಇವುಗಳಲ್ಲಿ ಈವರೆಗೆ 13,194 ನೆಗೆಟಿವ್, 1228 ಪಾಸಿಟಿವ್ ಬಂದಿದ್ದು,ಮೂವರು ಮೃತಪಟ್ಟಿದ್ದಾರೆ. ಇನ್ನು ಒಟ್ಟು 397 ಸ್ಯಾಂಪಲ್ ಗಳ ಪರೀಕ್ಷಾ ವರದಿ ಬರಬೇಕಿದೆ. ಬುಧವಾರ 20 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಕೋವಿಡ್ ಸಂಪರ್ಕಿತರು ನಾಲ್ವರು, ಉಸಿರಾಟ ತೊಂದರೆಯವರು ಆರು ಮಂದಿ ಹಾಗೂ ಶೀತಜ್ವರದಿಂದ ಬಳಲುವ 10 ಮಂದಿ ಸೇರಿದ್ದಾರೆ.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗಳಿಂದ ಇಂದು 15 ಮಂದಿ ಬಿಡುಗಡೆಗೊಂಡಿದ್ದು, 82 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಡೆಯು ತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 20 ಮಂದಿ ಸೇರಿದಂತೆ ಒಟ್ಟು 5875 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 961 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ. ಸೂಡ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X