Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾಂಕಾಂಗ್: ರಾಷ್ಟ್ರೀಯ ಭದ್ರತಾ ಕಾನೂನಿಡಿ...

ಹಾಂಕಾಂಗ್: ರಾಷ್ಟ್ರೀಯ ಭದ್ರತಾ ಕಾನೂನಿಡಿ ಮೊದಲ ಬಂಧನ

ವಾರ್ತಾಭಾರತಿವಾರ್ತಾಭಾರತಿ1 July 2020 10:46 PM IST
share
ಹಾಂಕಾಂಗ್: ರಾಷ್ಟ್ರೀಯ ಭದ್ರತಾ ಕಾನೂನಿಡಿ ಮೊದಲ ಬಂಧನ

ಹಾಂಕಾಂಗ್, ಜು. 1: ಹಾಂಕಾಂಗ್‌ಗಾಗಿ ಚೀನಾ ಮಂಗಳವಾರ ಜಾರಿಗೊಳಿಸಿದ ನೂತನ ರಾಷ್ಟ್ರೀಯ ಭದ್ರತಾ ಕಾನೂನಿನಡಿ ಮೊದಲ ಬಂಧನವನ್ನು ಮಾಡಲಾಗಿದೆ ಎಂದು ಹಾಂಕಾಂಗ್ ಪೊಲೀಸರು ಬುಧವಾರ ಹೇಳಿದ್ದಾರೆ. ಹಾಂಕಾಂಗ್ ಸ್ವತಂತ್ರ ಧ್ವಜವನ್ನು ಹೊಂದಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ.

‘‘ರಾಷ್ಟ್ರೀಯ ಭದ್ರತಾ ಕಾನೂನನ್ನು ಉಲ್ಲಂಸಿ ಹಾಂಕಾಂಗ್‌ನ ಕಾಸ್‌ವೇ ಬೇ ಎಂಬಲ್ಲಿ ‘ಹಾಂಕಾಂಗ್ ಸ್ವತಂತ್ರ ಧ್ವಜ’ವನ್ನು ಹೊಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ’’ ಎಂಬುದಾಗಿ ಹಾಂಕಾಂಗ್ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದಿದ್ದಾರೆ. ಅದರಲ್ಲಿ ಬಂಧಿತ ಮತ್ತು ಧ್ವಜದ ಚಿತ್ರವನ್ನೂ ಹಾಕಿದ್ದಾರೆ.

‘‘ಕಾನೂನು ಅನುಷ್ಠಾನಕ್ಕೆ ಬಂದ ಬಳಿಕ ಮಾಡಲಾದ ಮೊದಲ ಬಂಧನ ಇದಾಗಿದೆ’’ ಎಂದು ಪೊಲೀಸರು ಹೇಳಿದ್ದಾರೆ.

ಪ್ರತಿಭಟನಕಾರರ ಮೇಲೆ ಜಲಫಿರಂಗಿ ಧಾರೆ

ಪ್ರತಿಭಟನಾ ಸಭೆಗಳ ಮೇಲೆ ವಿಧಿಸಲಾಗಿರುವ ನಿಷೇಧವನ್ನು ಧಿಕ್ಕರಿಸಿ, ಬುಧವಾರ ವಾಣಿಜ್ಯ ಮಳಿಗೆಯೊಂದರ ಸಮೀಪ ಜಮಾಯಿಸಿದ ಪ್ರತಿಭಟನಕಾರರ ಸಣ್ಣ ಗುಂಪೊಂದನ್ನು ಚದುರಿಸಲು ಹಾಂಕಾಂಗ್ ಪೊಲೀಸರು ಜಲಫಿರಂಗಿ ಧಾರೆಯನ್ನು ಬಳಸಿದ್ದಾರೆ. ಹಾಂಕಾಂಗ್‌ಗಾಗಿ ಕಠಿಣ ರಾಷ್ಟ್ರೀಯ ಭದ್ರತಾ ಕಾನೂನನ್ನು ಚೀನಾ ಸಂಸತ್ತು ಅಂಗೀಕರಿಸಿದ ಒಂದು ದಿನದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

ಕಾಸ್‌ವೇ ಬೇ ಎಂಬಲ್ಲಿ ಜಲಫಿರಂಗಿಯನ್ನು ಹೊತ್ತ ಟ್ರಕ್ಕೊಂದು ಪ್ರತಿಭಟನಕಾರರು ಮತ್ತು ಪತ್ರಕರ್ತರ ಮೇಲೆ ಮೆಣಸಿನಹುಡಿಯ ದ್ರಾವಣ ಬೆರೆಸಿದ ನೀರನ್ನು ಹಲವು ಬಾರಿ ಸಿಡಿಸಿತು ಎಂದು ಎಎಫ್‌ಪಿ ವರದಿಗಾರರು ವರದಿ ಮಾಡಿದ್ದಾರೆ.

ಇದು ನಿಮಗೆ ಸಂಬಂಧವಿಲ್ಲದ್ದು: ಚೀನಾ

ಹಾಂಕಾಂಗ್‌ಗಾಗಿ ತಾನು ಅಂಗೀಕರಿಸಿದ ನೂತನ ವಿವಾದಾಸ್ಪದ ರಾಷ್ಟ್ರೀಯ ಭದ್ರತಾ ಕಾನೂನಿಗೆ ವ್ಯಕ್ತವಾದ ಅಂತರ್‌ರಾಷ್ಟ್ರೀಯ ಟೀಕೆಗಳನ್ನು ಚೀನಾ ತಿರಸ್ಕರಿಸಿದೆ ಹಾಗೂ ಇದರಲ್ಲಿ ಇತರ ದೇಶಗಳು ಮೂಗು ತೂರಿಸಬಾರದು ಎಂದು ಬುಧವಾರ ಹೇಳಿದೆ.

ಹಾಂಕಾಂಗ್‌ಗೆ ಅನ್ವಯಿಸುವ ಚೀನಾದ ನೂತನ ಕಾನೂನು ಹಾಂಕಾಂಗ್‌ನ ಸ್ವಾತಂತ್ರ್ಯಗಳನ್ನು ಮೊಟಕುಗೊಳಿಸುತ್ತದೆ ಎಂದು ಪಾಶ್ಚಾತ್ಯ ದೇಶಗಳು ಮತ್ತು ಟೀಕಾಕಾರರು ಎಚ್ಚರಿಸಿದ್ದಾರೆ.

‘‘ಇದಕ್ಕೂ ನಿಮಗೂ ಏನು ಸಂಬಂಧ? ಇದರಲ್ಲಿ ಮೂಗು ತೂರಿಸಬೇಡಿ’’ ಎಂಬುದಾಗಿ ಚೀನಾದ ಸ್ಟೇಟ್ ಕೌನ್ಸಿಲ್‌ನ ಹಾಂಕಾಂಗ್ ಮತ್ತು ಮಕಾವ್ ವ್ಯವಹಾರಗಳ ಕಚೇರಿಯ ವಕ್ತಾರ ಝಾಂಗ್ ಕ್ಸಿಯಾವೊಮಿಂಗ್ ಪತ್ರಿಕಾಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X