Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದ ಎನ್‌ಡಿಎ ಮೈತ್ರಿಕೂಟದಲ್ಲಿ ಒಡಕು

ಬಿಹಾರದ ಎನ್‌ಡಿಎ ಮೈತ್ರಿಕೂಟದಲ್ಲಿ ಒಡಕು

ವಾರ್ತಾಭಾರತಿವಾರ್ತಾಭಾರತಿ2 July 2020 2:58 PM IST
share
ಬಿಹಾರದ ಎನ್‌ಡಿಎ ಮೈತ್ರಿಕೂಟದಲ್ಲಿ ಒಡಕು

ಹೊಸದಿಲ್ಲಿ, ಜು.2:ಬಿಹಾರದಲ್ಲಿ ಎರಡು ಪ್ರಮುಖ ಪಕ್ಷಗಳಾದ ಸಂಯುಕ್ತ ಜನತಾದಳ(ಜೆಡಿಯು) ಹಾಗೂ ಲೋಕಜನಶಕ್ತಿ ಪಕ್ಷಗಳ ನಡುವೆ ಭಿನ್ನಮತ ಬಿಗಡಾಯಿಸುತ್ತಿದ್ದು, ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಎರಡೂ ಪಕ್ಷಗಳ ಭಿನ್ನಮತ ಶಮನಗೊಳಿಸಲು ಪರದಾಡುತ್ತಿದೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಲೋಕ ಜನಶಕ್ತಿ ಪಾರ್ಟಿಯ ಚಿರಾಗ್ ಪಾಸ್ವಾನ್ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದೆ.

 ಚಿರಾಗ್ ಪಾಸ್ವಾನ್ ಅವರ ತಂದೆ ರಾಮವಿಲಾಸ್ ಪಾಸ್ವಾನ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದಾರೆ. ಆದರೆ,ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಒಗ್ಗಟ್ಟಾಗಿದೆ ಎಂದು ಹೇಳಿಕೆ ನೀಡಿದ್ದ ಮುಂಗೇರ್ ಜಿಲ್ಲಾಧ್ಯಕ್ಷನನ್ನು ವಜಾಗೊಳಿಸಿದ ಚಿರಾಗ್ ಪಾಸ್ವಾನ್ ಎರಡು ಸ್ಥಳೀಯ ಪಕ್ಷಗಳ ನಡುವಿನ ಬಿಕ್ಕಟ್ಟನ್ನು ಹೆಚ್ಚಿಸಿದರು.

ಜಿಲ್ಲಾಧ್ಯಕ್ಷರ ಹೇಳಿಕೆ ಪಕ್ಷಕ್ಕೆ ವಿರುದ್ಧವಾದುದು. ಕೇವಲ ಲೋಕಜನಶಕ್ತಿ ಪಕ್ಷದ ಅಧ್ಯಕ್ಷರು ಮಾತ್ರ ಇಂತಹ ಹೇಳಿಕೆ ನೀಡಬೇಕು ಎಂದು ಜಿಲ್ಲಾಧ್ಯಕ್ಷನ ವಜಾಗೊಳಿಸಿದ ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯಪಾಲರ ಕೋಟಾದಿಂದ ಭರ್ತಿ ಮಾಡಲ್ಪಡುವ 12 ಶಾಸಕಾಂಗ ಪರಿಷತ್ತಿನ ಸ್ಥಾನಗಳಲ್ಲಿ ಎರಡನ್ನು ತನ್ನ ಪಕ್ಷಕ್ಕೆ ನೀಡಬೇಕೆಂದು ಚಿರಾಗ್ ಪಾಸ್ವಾನ್ ಬೇಡಿಕೆ ಇಟ್ಟಿದ್ದಾರೆ ಎಂದು ಎಲ್‌ಜೆಪಿ ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ರಚಿಸಿದ ಸೀಟು ಹಂಚಿಕೆ ಸೂತ್ರದಂತೆ 5,5,2 ಸೀಟುಗಳನ್ನು ನೀಡಬೇಕೆಂದು ಬಿಜೆಪಿ ನಾಯಕರಿಗೆ ಚಿರಾಗ್ ಮನವರಿಕೆ ಮಾಡಿದ್ದಾರೆ.

12 ಸೀಟುಗಳ ಪೈಕಿ 7 ಸೀಟುಗಳು ನಿತೀಶ್‌ಕುಮಾರ್ ನೇತೃತ್ವದ ಸಂಯುಕ್ತ ಜನತಾದಳ ಹಾಗೂ ಉಳಿದ ಸೀಟುಗಳು ಬಿಜೆಪಿಯ ಪಾಲಾಗಲಿದೆ ಎಂದು ತಿಳಿದು ಬಂದಿದೆ.

ಜೆಡಿಯು ತನ್ನ ನಿಲುವಿಗೆ ಬದ್ಧವಾಗಿದ್ದು, ಅಸೆಂಬ್ಲಿ ಚುನಾವಣೆಯಲ್ಲ್ಲಿ ಯಾವುದೇ ಸೀಟು ಹಂಚಿಕೆ ಸೂತ್ರ ಇರುವುದಿಲ್ಲ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X