Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯ ಕಾರ್ಮಿಕರಿಗೆ ಪರಿಹಾರ...

ದ.ಕ. ಜಿಲ್ಲೆಯ ಕಾರ್ಮಿಕರಿಗೆ ಪರಿಹಾರ ಘೋಷಣೆಯಾಗಿಲ್ಲ: ಬಿ.ಕೆ. ಇಮ್ತಿಯಾಝ್

ವಾರ್ತಾಭಾರತಿವಾರ್ತಾಭಾರತಿ2 July 2020 8:09 PM IST
share
ದ.ಕ. ಜಿಲ್ಲೆಯ ಕಾರ್ಮಿಕರಿಗೆ ಪರಿಹಾರ ಘೋಷಣೆಯಾಗಿಲ್ಲ: ಬಿ.ಕೆ. ಇಮ್ತಿಯಾಝ್

ಮಂಗಳೂರು, ಜು. 2: ದ.ಕ. ಜಿಲ್ಲೆಯ ಸಾವಿರಾರು ಕಾರ್ಮಿಕರಿಗೆ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರ ಘೋಷಣೆಯಾಗಿಲ್ಲ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ತಿಳಿಸಿದ್ದಾರೆ.

ಕೊರೋನ ನಿಗ್ರಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣ ವಿಫಲವಾಗಿರುವುದನ್ನು ವಿರೋಧಿಸಿ ಸಿಪಿಎಂನಿಂದ ಹಮ್ಮಿಕೊಂಡ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ನಗರದ ಬಂದರು ಬೈತಧಕ್ಕೆಯಲ್ಲಿ ಜರುಗಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಆರ್ಥಿಕತೆಯ ಜೀವನಾಡಿ ಬೀಡಿ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಈಗಲೂ ಅದನ್ನೇ ನಂಬಿಕೊಂಡು ಜೀವನ ಸಾಗಿಸುವ ಮೂರು ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ.ಹೋಟೆಲ್ ಉದ್ಯಮದಲ್ಲೂ ಮುಂಚೂಣಿಯಲ್ಲಿರುವ ಜಿಲ್ಲೆಯಲ್ಲಿ ಸಾವಿರಾರು ಹೋಟೆಲ್ ಕಾರ್ಮಿಕರಿದ್ದಾರೆ. ಶೈಕ್ಷಣಿಕ ಕೇಂದ್ರವಾದ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಯಥೇಚ್ಛವಾಗಿದ್ದು, ಅಲ್ಲಿ ದುಡಿಯುವ ಸಾವಿರಾರು ಶಿಕ್ಷಕರಿದ್ದಾರೆ ಎಂದರು.

ಸಾಂಸ್ಕೃತಿಕ ಕೇಂದ್ರವಾದ ಕರಾವಳಿ ಜಿಲ್ಲೆಯಲ್ಲಿ ಸಾವಿರಾರು ಕಲಾವಿದರು ತಮ್ಮ ಕಲಾಪ್ರತಿಭೆಯನ್ನು ನಂಬಿ ಜೀವನ ಸಾಗಿಸುತ್ತಿದ್ದಾರೆ. ಹೀಗೆ ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೆ ಸರಕಾರದಿಂದ ಯಾವುದೇ ಪರಿಹಾರ ಘೋಷಣೆಯಾಗಿಲ್ಲ. ಕೇಂದ್ರ ಸರಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಯಾರಿಗಾಗಿ, ಯಾರ ಕಲ್ಯಾಣಕ್ಕಾಗಿ ಎಂದು ಅವರು ಕೇಂದ್ರ ಸರಕಾರದ ಜನವಿರೋಧಿ ಕ್ರಮಗಳನ್ನು ತೀವ್ರವಾಗಿ ಖಂಡಿಸಿದರು.

ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್‌ಕುಮಾರ್ ಬಜಾಲ್ ಮಾತನಾಡಿ, ಕಳೆದ ಮೂರು ತಿಂಗಳ ಲಾಕ್‌ಡೌನ್‌ನಿಂದಾಗಿ ಜನಸಾಮಾನ್ಯರ ಬದುಕು ತತ್ತರಗೊಂಡಿದೆ. ಈ ಮೊದಲೇ ದೇಶದ ಜಿಡಿಪಿ ಕುಸಿದಿದ್ದು, ಇದರಿಂದಾಗಿ ಮತ್ತಷ್ಟು ಪಾತಾಳಕ್ಕೆ ಕುಸಿತ ಕಂಡಿದೆ ಎಂದರು.

ಕಾರ್ಮಿಕ ವರ್ಗ ಕೆಲಸವಿಲ್ಲದೆ, ಕೈಯಲ್ಲಿ ಕಾಸಿಲ್ಲದೆ ಕಂಗಾಲಾಗಿದೆ. ಲಾಕ್‌ಡೌನ್ ಸಂದರ್ಭದ ವೇತನ ಪಾವತಿಸಬೇಕು. ಪ್ರತೀ ಕುಟುಂಬಕ್ಕೆ 7,500 ರೂ.ನ್ನು ನೇರ ನಗದು ವರ್ಗಾವಣೆ ಮಾಡಬೇಕು. ಆಹಾರ ಧಾನ್ಯಗಳನ್ನು ನೀಡಬೇಕು. ಹೀಗೆ ಜನರಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಮೂಲಕ ಆತ್ಮಸ್ಥೈರ್ಯವನ್ನು ತುಂಬಿಸಬೇಕಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಮಂಗಳೂರು ನಗರಾಧ್ಯಕ್ಷ ನವೀನ್ ಕೊಂಚಾಡಿ, ಬಂದರು ಶ್ರಮಿಕ ಸಂಘದ ಮುಖಂಡರಾದ ಹಸನ್ ಮೋನು, ಹರೀಶ್ ಕೆರೆಬೈಲ್, ಚಂದ್ರಹಾಸ, ಫಾರೂಕ್, ಎಲ್ಲಪ್ಪ, ಮಜೀದ್, ಮೊಹಿಯುದ್ದೀನ್, ಹಂಝ, ಡಿವೈಎಫ್‌ಐ ನಾಯಕರಾದ ಪಿ.ಜಿ. ರಫೀಕ್, ಯಾಹ್ಯಾ ಬೆಂಗರೆ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X