Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಚ್ಚುತ್ತಿರುವ ಕೊರೋನ ಪ್ರಕರಣ :...

ಹೆಚ್ಚುತ್ತಿರುವ ಕೊರೋನ ಪ್ರಕರಣ : ದ.ಕ.ಜಿಲ್ಲೆಯ ಹಲವೆಡೆ ಸ್ವಯಂ ಪ್ರೇರಿತ ನಿರ್ಬಂಧ

ಅಂಗಡಿ ಮುಂಗಟ್ಟು ಬಂದ್, ಬಸ್‌ಗಳ ಟ್ರಿಪ್ ಕಡಿತ

ವಾರ್ತಾಭಾರತಿವಾರ್ತಾಭಾರತಿ2 July 2020 8:34 PM IST
share
ಹೆಚ್ಚುತ್ತಿರುವ ಕೊರೋನ ಪ್ರಕರಣ : ದ.ಕ.ಜಿಲ್ಲೆಯ ಹಲವೆಡೆ ಸ್ವಯಂ ಪ್ರೇರಿತ ನಿರ್ಬಂಧ

ಮಂಗಳೂರು, ಜು. 2: ದ.ಕ.ಜಿಲ್ಲೆಯಲ್ಲಿ ಕೊರೋನ ಸೋಂಕು ಹೆಚ್ಚುತ್ತಿವೆ. ಮಾ. 22ಕ್ಕೆ ದ.ಕ.ಜಿಲ್ಲೆಯಲ್ಲಿ ಪ್ರಥಮ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ (ಜು.2)ಗುರುವಾರದವರೆಗೆ ಬೆಳಕಿಗೆ ಬಂದ ಪ್ರಕರಣಗಳ ಸಂಖ್ಯೆ 923. ಆ ಪೈಕಿ 18 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಾಗ ಲಾಕ್‌ಡೌನ್ ಪ್ರಕ್ರಿಯೆ ಆರಂಭಗೊಂಡಿತ್ತು. ಜೂನ್ ಮೊದಲ ವಾರದವರೆಗೂ ಇದು ನಿಯಂತ್ರಣದಲ್ಲಿತ್ತು. ಆದರೆ, ಲಾಕ್‌ಡೌನ್ ಸಡಿಲಿಕೆಯಾಗಿ ಹೊರ ರಾಜ್ಯ ಮತ್ತು ವಿದೇಶದಿಂದ ಜನರ ಪ್ರವೇಶಕ್ಕೆ ಅನುಮತಿ ನೀಡುತ್ತಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಿತ್ತು. ಆ ಪೈಕಿ ಹೆಚ್ಚಿನವುಗಳು ಕ್ವಾರಂಟೈನ್ ಕೇಂದ್ರದಿಂದ ವರದಿಯಾದ ಕಾರಣ ಜನರು ಹೆಚ್ಚು ಆತಂಕಿತರಾಗಿಲ್ಲ. ಇತ್ತೀಚಿಗೆ ದಿನಂಪ್ರತಿ ಸುಮಾರು 90ರಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ.

ಆರಂಭದಲ್ಲಿ ಒಂದು ವಲಯಾದ್ಯಂತ ಸೀಲ್‌ಡೌನ್ ಮಾಡಲಾಗುತ್ತಿದ್ದರೆ ಇದೀಗ ಪಾಸಿಟಿವ್ ಪ್ರಕರಣ ಬೆಳಕಿಗೆ ಬರುವ ಮನೆಗಳಲ್ಲಿ ಮಾತ್ರ ಸೀಲ್‌ಡೌನ್ ಮಾಡಲಾಗುತ್ತದೆ. ಸದ್ಯ ಲಾಕ್‌ಡೌನ್ ಇಲ್ಲ. ಮುಂಜಾಗ್ರತಾ ಕ್ರಮವಾಗಿ ರಾತ್ರಿ 8ರಿಂದ ಮುಂಜಾನೆ 5ರವರೆಗೆ ಕರ್ಫ್ಯೂ ವಿಧಿಸಲಾಗಿದೆ.

ದ.ಕ.ಜಿಲ್ಲಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಕಚೇರಿ ಹಾಗೂ ಲೇಡಿಗೋಷನ್ ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಾಕ್‌ಡೌನ್ ಹೇರಬಹುದು ಎಂದು ನಿರೀಕ್ಷಿಸಿದ್ದ ಸಾರ್ವಜನಿಕರು, ಸಂಘಸಂಸ್ಥೆಗಳು ಇದೀಗ ಸ್ವಯಂ ಪ್ರೇರಿತರಾಗಿ ನಿರ್ಬಂಧಕ್ಕೊಳಗಾಗುತ್ತಿದ್ದಾರೆ.

ಜೂ.29ರಿಂದ ಕೆಲವು ಮಂದಿ ಆರಂಭಿಸಿದ್ದ ಸ್ವಯಂ ಪ್ರೇರಿತ ನಿರ್ಬಂಧವು ಇದೀಗ ಸಾಮೂಹಿಕವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಜಾಗೃತಿ, ಮನವಿ ಮಾಡಲಾಗುತ್ತಿದೆ. ಮಂಗಳೂರು ನಗರ ಮಾತ್ರವಲ್ಲ ಜಿಲ್ಲೆಯ ವಿವಿಧ ಜಂಕ್ಷನ್, ತಾಲೂಕು ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗುತ್ತಿವೆ. ಜಿಲ್ಲೆಯಲ್ಲಿ ಸುಮಾರು 150ರಷ್ಟು ಬಸ್‌ಗಳು ಓಡಾಟ ಆರಂಭಿಸಿದ್ದರೂ ಕೂಡ ಸಂಜೆಯ ಬಳಿಕ ಟ್ರಿಪ್ ಕಡಿತಗೊಳಿಸುತ್ತಿದೆ. ಬಾಡಿಗೆ ರಿಕ್ಷಾಗಳ ಸಂಚಾರವೂ ಕಡಿಮೆಯಾಗಿದೆ. ಕೆಲವು ಜವುಳಿ-ಚಪ್ಪಲಿ ಮಳಿಗೆಗಳು, ಚಿನ್ನ-ವಜ್ರದ ಆಭರಣ ಮಳಿಗೆಗಳು ಮುಚ್ಚಲ್ಪಡುತ್ತಿವೆ. ಖಾಸಗಿ ಕಚೇರಿಗಳಲ್ಲಿ ಕೂಡ ಉದ್ಯೋಗಿಗಳ ಸಂಖ್ಯೆಯಲ್ಲಿ ಕಡಿಮೆ ಕಂಡು ಬರುತ್ತಿವೆ. ತೆರೆಯಲ್ಪಟ್ಟ ಪ್ರಾರ್ಥನಾ ಕೇಂದ್ರಗಳು ಕೂಡ ಬಾಗಿಲೆಳೆಯುತ್ತಿವೆ. ಕೊರೋನ ಸೋಂಕು ಸಮಾಜಕ್ಕೆ ಹಬ್ಬಿದ ಕಾರಣ ಮನೆಯಲ್ಲೇ ಇರುವುದು ಕ್ಷೇಮ ಎಂದು ಬಗೆದ ಸಾರ್ವಜನಿಕರು ಸರಕಾರದ ಆದೇಶಕ್ಕೆ ಕಾಯದೆ ಸ್ವಯಂ ಆಗಿ ನಿರ್ಬಂಧಗೊಳಗಾಗುತ್ತಿದ್ದಾರೆ. ಒಟ್ಟಿನಲ್ಲಿ ಜಿಲ್ಲೆಯ ಜನರಲ್ಲಿ ಒಂದೆಡೆ ಆತಂಕ, ಇನ್ನೊಂದೆಡೆ ಜಾಗೃತಿ, ಮತ್ತೊಂದೆಡೆ ನಿರ್ಲಕ್ಷವೂ ಎದ್ದು ಕಾಣುತ್ತಿವೆ.

ಜನರ ನಿರ್ಲಕ್ಷ-ಮಾಸ್ಕ್ ಧರಿಸದೆ ಓಡಾಟ

ಕೊರೋನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ಕೂಡ ಕೆಲವು ಮಂದಿಯ ನಿರ್ಲಕ್ಷವೂ ಆಶ್ಚರ್ಯ ಹುಟ್ಟಿಸುತ್ತಿವೆ. ಮಾಸ್ಕ್ ಧರಿಸುವುದನ್ನು ಸರಕಾರ ಕಡ್ಡಾಯಗೊಳಿಸಿದ್ದರೂ ಕೂಡ ಜನರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪ್ರಕರಣ ಹೆಚ್ಚುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಮುನ್ನೆಚ್ಚರಿಕೆ ವಹಿಸಿದಷ್ಟು ಸಾಕಾಗದು. ಮಾಸ್ಕ್ ಧರಿಸುವುದರಿಂದ ಎದುರಿರುವ ವ್ಯಕ್ತಿಗೆ ಕೊರೋನ ಹರಡುವುದು ಅಥವಾ ಆ ವ್ಯಕ್ತಿಯಿಂದ ಮಾಸ್ಕ್ ಧರಿಸಿದ ವ್ಯಕ್ತಿಗೆ ಹರಡುವ ಸಾಧ್ಯತೆ ತೀರಾ ಕಡಿಮೆಯಾಗಿದೆ. ಆದರೆ ನಗರ ಸಹಿತ ಎಲ್ಲೆಡೆ ಜನರು ಮಾಸ್ಕ್‌ನ ಅಗತ್ಯತೆಯನ್ನು ಮನಗಂಡಂತಿಲ್ಲ.

''ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂಬುದನ್ನು ಸರಕಾರವೇ ಹೇಳಿದೆ. ಕೊರೋನ ಹರಡುವುದನ್ನು ತಡೆಯುವಲ್ಲಿ ಮಾಸ್ಕ್ ಪ್ರಮುಖ ಪಾತ್ರ ವಹಿಸುತ್ತದೆ. ಮಾಸ್ಕ್ ಧರಿಸದೆ ಯಾರೂ ಹೊರ ಬರಬಾರದು. ದಂಡ ಹಾಕಿ ಸರಿ ದಾರಿಗೆ ತರುವಂತಹ ಪ್ರಕ್ರಿಯೆ ಅಲ್ಲ ಇದು. ಜನರೇ ಅರಿತುಕೊಂಡು ಸ್ವಯಂ ಜಾಗೃತಿ ಮೆರೆಯಬೇಕು''.
- ಡಾ. ರಾಮಚಂದ್ರ ಬಾಯರಿ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X