Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮತ್ತೊಮ್ಮೆ ಲಾಕ್‍ಡೌನ್‍ಗೆ...

ಬೆಂಗಳೂರು: ಮತ್ತೊಮ್ಮೆ ಲಾಕ್‍ಡೌನ್‍ಗೆ ಉದ್ಯಮಿಗಳಿಂದ ವಿರೋಧ

ವಾರ್ತಾಭಾರತಿವಾರ್ತಾಭಾರತಿ2 July 2020 11:30 PM IST
share

ಬೆಂಗಳೂರು, ಜು.2: ಕೊರೋನ ಸೋಂಕು ನಿವಾರಣೆಗಾಗಿ ಸರಕಾರ ಘೋಷಿಸಿದ್ದ ಲಾಕ್‍ಡೌನ್‍ ಅನ್ನು ಅನ್‍ಲಾಕ್ ತೀರ್ಮಾನ ಹೊರಬಿದ್ದ ಬಳಿಕ ನಾನಾ ಉದ್ಯಮಗಳು ಚೇತರಿಕೆಯ ಹಾದಿ ಹಿಡಿದಿವೆ. ಮನೆಯಲ್ಲಿಯೇ ಬಂಧಿಯಾಗಿದ್ದ ಲಕ್ಷಾಂತರ ಕಾರ್ಮಿಕರು ಮರಳಿ ಉದ್ಯೋಗ ಕೈಗೊಂಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಹಿತ ಸ್ವಯಂ ಉದ್ಯೋಗಿಗಳು ನಿಧಾನವಾಗಿ ಆದಾಯ ಕಂಡುಕೊಳ್ಳುತ್ತಿದ್ದಾರೆ. ಸರಕಾರಿ ಕಚೇರಿಗಳು ಕೂಡ ಪೂರ್ಣವಾಗಿ ಸಾರ್ವಜನಿಕರಿಗೆ ತೆರೆದಿವೆ. ಈ ಹಂತದಲ್ಲಿ ಮತ್ತೆ ಲಾಕ್‍ಡೌನ್ ಮಾಡುವುದು ತರವಲ್ಲ ಎಂಬುದು ಎಲ್ಲ ಉದ್ಯಮಿಗಳ ಅಭಿಮತವಾಗಿದೆ.

ಬೆಂಗಳೂರು ಉತ್ಪಾದನಾ ಹಬ್ ಆಗಿರುವ ಜತೆಗೆ ಸರಕಾರಕ್ಕೆ ಆದಾಯದ ಮೂಲವೂ ಆಗಿದೆ. ರಾಜ್ಯದ ಒಟ್ಟು ಆದಾಯದಲ್ಲಿ ಶೇ.65ರಷ್ಟು ಬೆಂಗಳೂರಿನಿಂದಲೇ ಬೊಕ್ಕಸ ಸೇರುತ್ತಿದೆ. ಲಾಕ್‍ಡೌನ್‍ನಿಂದ ಆದಾಯದ ಪ್ರಮಾಣ ಕುಸಿದಿದೆ. ಇದು ಸರಕಾರದ ಗಮನಕ್ಕೂ ಬಂದಿದೆ.

ರಿಯಲ್‍ ಎಸ್ಟೇಟ್, ಆಸ್ತಿ ನೋಂದಣಿ ಮೂಲಕ ಒಂದಿಷ್ಟು ಚೇತರಿಕೆ ಕಂಡಿದೆ. ಉದ್ಯೋಗ ಸ್ಥಳದಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿಯೇ ಕೆಲಸ ಕೈಗೊಳ್ಳಲಾಗುತ್ತಿದೆ. ಇದಕ್ಕೆ ತದ್ವಿರುದ್ಧವಾಗಿ ಸಾರ್ವಜನಿಕ ಸ್ಥಳ ಹಾಗೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು, ಮಾಸ್ಕ್ ಧರಿಸದಿರುವುದು, ನೈರ್ಮಲ್ಯಕ್ಕೆ ಕಾಳಜಿ ವಹಿಸದಿರುವುದು ರೋಗ ಉಲ್ಭಣಕ್ಕೆ ಕಾರಣವಾಗಿದೆ. ಇದಕ್ಕೆ ಕಾರಣರಾದವರ ಮೇಲೆ ಕಠಿಣಕ್ರಮ ಕೈಗೊಳ್ಳಬೇಕೇ ಹೊರತು ಜನರ ಆರ್ಥಿಕಾಭಿವೃದ್ಧಿಗೆ ಬೆನ್ನೆಲುಬಾಗಿರುವ ಉದ್ಯಮದ ಮೇಲೆ ಪ್ರಹಾರ ಅನಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕಠಿಣ ನಿಯಮದಿಂದ ಉದ್ಯೋಗ ನಷ್ಟ: ಕೋವಿಡ್-19 ಸೋಂಕು ತಡೆಯಲು ಕೈಗೊಂಡಿರುವ ಲಾಕ್‍ಡೌನ್ ಅವಧಿ ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಇನ್ನಷ್ಟು ಲಾಕ್‍ಡೌನ್ ಬೇಡವೇ ಬೇಡ. ಕಠಿಣ ನಿಯಮಗಳಿಂದಾಗಿ ಈಗಾಗಲೇ ಕೆಲ ಉದ್ಯಮಗಳು ಪುನರಾರಂಭವಾಗಿದ್ದರೂ, ಹಿಂದಿನಷ್ಟು ಲಾಭ ಗಳಿಸಲಾಗುತ್ತಿಲ್ಲ ಎಂಬುದೇ ಬಹುತೇಕ ಉದ್ಯಮಿಗಳ ಅಳಲಾಗಿದೆ.

ಈಗಿನ ಸ್ಥಿತಿಯಲ್ಲಿ ಲಾಕ್‍ಡೌನ್ ಅನಗತ್ಯ. ಬಹುತೇಕ ಉದ್ಯಮಿಗಳು ನಷ್ಟಕ್ಕೆ ಒಳಗಾಗಿದ್ದಾರೆ. ಘಟಕಗಳ ಬಾಡಿಗೆ, ಇಎಂಐ ಪಾವತಿ, ಬ್ಯಾಂಕ್ ಸಾಲದಿಂದ ಕಂಗೆಟ್ಟಿದ್ದೇವೆ. ಉದ್ಯಮ ಸೊರಗಿರುವ ಸಮಯದಲ್ಲಿ ಉತ್ಪಾದನಾ ಚಟುವಟಿಕೆಗೆ ಸರಕಾರ ಬೆಂಬಲ ನೀಡುವುದು ಸೂಕ್ತ ಎಂದು ಎಫ್‍ಕೆಸಿಸಿಐ ಅಧ್ಯಕ್ಷ ಸಿ.ಆರ್.ಜನಾರ್ದನ ಹೇಳಿದ್ದಾರೆ.

ರಾತ್ರಿ ಕಫ್ರ್ಯೂಗೆ ಬೆಂಬಲ: ಸೋಂಕು ತಡೆ ಹಿನ್ನೆಲೆಯಲ್ಲಿ ಸರಕಾರ ಮತ್ತೆ ಜಾರಿಗೊಳಿಸಿರುವ ರಾತ್ರಿಕಫ್ರ್ಯೂಗೆ ಉದ್ಯಮರಂಗ ಬೆಂಬಲ ವ್ಯಕ್ತಪಡಿಸಿದೆ. ಅಗತ್ಯ ವಸ್ತುಗಳ ಕಾಯಿದೆ ಅಡಿ ಬರುವ ಚಟುವಟಿಕೆ ಹೊರತುಪಡಿಸಿ ಇನ್ನುಳಿದವುಗಳನ್ನು ನಿರ್ಬಂಧಿಸುವುದು ಸರಿ. ಇದು ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕುತ್ತದೆ. ಸೋಂಕು ಹರಡದಿರಲು ಈ ನಿಯಮವೇ ಉತ್ತಮ ನಡೆ ಎಂದು ಕೈಗಾರಿಕೆಗಳ ಸಂಘಟನೆ ಪ್ರತಿಪಾದಿಸಿವೆ.

ಸೋಂಕು ಹೆಚ್ಚುತ್ತಿದೆ ಎಂಬ ಕಾರಣಕ್ಕೆ ಸರಕಾರ ಏಕಾಏಕಿ ನಿರ್ಧಾರಗಳನ್ನು ಕೈಗೊಳ್ಳಬಾರದು. ಬೇಕಿದ್ದರೆ ರಾತ್ರಿಕಫ್ರ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿ. ವಾರಾಂತ್ಯ ಕೈಗಾರಿಕೆಗಳಿಗೆ ರಜೆಘೋಷಣೆ ಮಾಡಲಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಸಮಂಜಸ ಕ್ರಮ ಕೈಗೊಳ್ಳಲಿ ಎಂದು ಕಾಸಿಯಾ ಮಾಜಿ ಅಧ್ಯಕ್ಷ ಆರ್.ರಾಜು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X