Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ : ​ರೌಡಿಗಳಿಂದ ಗುಂಡಿನ...

ಉತ್ತರ ಪ್ರದೇಶ : ​ರೌಡಿಗಳಿಂದ ಗುಂಡಿನ ದಾಳಿ ; 8 ಪೊಲೀಸರ ಬರ್ಬರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ3 July 2020 9:27 AM IST
share
ಉತ್ತರ ಪ್ರದೇಶ : ​ರೌಡಿಗಳಿಂದ ಗುಂಡಿನ ದಾಳಿ ; 8 ಪೊಲೀಸರ ಬರ್ಬರ ಹತ್ಯೆ

ಲಕ್ನೋ,ಜು.3: ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಕುಖ್ಯಾತ ಗ್ಯಾಂಗ್‌ ಸ್ಟರ್‌ ನನ್ನು ಬಂಧಿಸಲು ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಡಿವೈಎಸ್‌ಪಿ ಹಾಗೂ ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಎಂಟು ಮಂದಿಯನ್ನು ಕ್ರಿಮಿನಲ್‌ಗಳು ಹತ್ಯೆಗೈದಿದ್ದಾರೆ.

  ಗ್ರಾಮಸ್ಥನ ಕೊಲೆ ಯತ್ನ ಪ್ರಕರಣದ ಆರೋಪಿಯಾದ ಕಾನ್ಪುರದ ಕುಖ್ಯಾತ ಗ್ಯಾಂಗ್‌ ಸ್ಟರ್ ವಿಕಾಸ್‌ ದುಬೆಯನ್ನು ಸೆರೆಹಿಡಿಯಲು ಪೊಲೀಸರ ತಂಡವೊಂದು ಕಾರ್ಯಾಚರಣೆಗಿಳಿದಿತ್ತು. ವಿಕಾಸ್ ದುಬೆ ಕಾನ್ಪುರ ಜಿಲ್ಲೆಯ ಚೌಬೇಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಕ್ರೂ ಗ್ರಾಮದಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಪಡೆದ ಬಳಿಕ ಪೊಲೀಸರು ಅಲ್ಲಿಗೆ ಧಾವಿಸಿದ್ದರು.

  ಬಿಎಸ್ಪಿ ನಾಯಕ ಪಿಂಟೂ ಸೆನೆಗರ್ ಹತ್ಯೆ ಪ್ರಕರಣದಲ್ಲಿ ಭಾಗಿಗಳಾಗಿದ್ದ ವಿಕಾಸ್ ದುಬೆನ ಬಾಡಿಗೆ ಶೂಟರ್‌ ಗಳನ್ನು ಕೂಡಾ ಸೆರೆಹಿಡಿಯಲು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಪಿಂಟೂ ಸೆನೆಗರ್ ಜೂನ್ 18ರಂದು ಕಾನ್ಪುರದ ಚಕೇರಿ ಎಂಬಲ್ಲಿ ಬಾಡಿಗೆ ಶೂಟರ್‌ಗಳ ಗುಂಡಿಗೆ ಬಲಿಯಾಗಿದ್ದರು.

ಈ ಪ್ರಕರಣದ ಇತರ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಗುರುವಾರ ಮಧ್ಯಪ್ರದೇಶದ ಚಿಂದ್ವಾರಾದಲ್ಲಿ ಬಂಧಿಸಿದ್ದರು.

  ಉಪಪೊಲೀಸ್ ನಿರೀಕ್ಷಕ ದೇವೇಂದ್ರ ಮಿಶ್ರಾ, ಸಬ್‌ಇನ್ಸ್‌ಪೆಕ್ಟರ್ ಗಳಾದ ಶಿವರಾಜ್‌ಪುರದ ಠಾಣಾಧಿಕಾರಿ ಮಹೇಶ್ ಯಾದವ್. ಅನೂಪ್ ಕುಮಾರ್, ಬಾಬುಲಾಲ್ ಹಾಗೂ ಕಾನ್ಸ್‌ ಟೇಬಲ್‌ ಗಳಾದ ಸುಲ್ತಾನ್‌ಸಿಂಗ್, ರಾಹುಲ್, ಜಿತೇಂದ್ರ ಹಾಗೂ ಬಬ್ಲೂ ಗುಂಡಿನ ಚಕಮಕಿಯ ಸಂದರ್ಭ ಸಾವನ್ನಪ್ಪಿದರು. ಗುಂಡಿನ ಘರ್ಷಣೆಯಲ್ಲಿ ಇತರ ಐವರು ಪೊಲೀಸರಿಗೂ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

 ತಾವು ತಲೆಮರೆಸಿಕೊಂಡಿರುವ ಹಳ್ಳಿಗೆ ಪೊಲೀಸ್ ಪಡೆಗಳು ಆಗಮಿಸದಂತೆ ತಡೆಯಲು ವಿಕಾಸ್‌ದುಬೆ ಹಾಗೂ ಆತನ ಅನುಚರರು, ಬಿಕ್ರು ಗ್ರಾಮದ ರಸ್ತೆ ಮಧ್ಯೆ ಬೃಹತ್‌ಗಾತ್ರದ ಅರ್ತ್‌ಮೂವರ್‌ನ್ನು ನಿಲ್ಲಿಸಿದ್ದರು. ಪೊಲೀಸರು ಅಲ್ಲಿಗೆ ತಲುಪಿದಾಗ ಅವರ ಮೇಲೆ ಆಸುಪಾಸಿನ ಮನೆಗಳ ಮೇಲ್ಛಾವಣಿಗಳಲ್ಲಿ ಹೊಂಚುಹಾಕಿ ನಿಂತಿದ್ದ ಪಾತಕಿಗಳು ಮನಬಂದಂತೆ ಗುಂಡುಹಾರಿಸಿದರು.

 ಪೊಲೀಸರು ಪ್ರತಿ ದಾಳಿಯನ್ನು ನಡೆಸಿದರಾದರೂ, ಕ್ರಿಮಿನಲ್‌ಗಳ ಎತ್ತರದಿಂದ ಗುಂಡು ಹಾರಿಸಿದ್ದರಿಂದ 8 ಮಂದಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆಂದು ಉತ್ತರಪ್ರದೇಶದ ಪೊಲೀಸ್ ಮಹಾನಿರ್ದೇಶಕ ಎಚ್.ಸಿ. ಆವಸ್ತಿ ತಿಳಿಸಿದ್ದಾರೆ.ಪಾತಕಿಗಳು ಗುಂಡುಹಾರಾಟ ನಡೆಸಿದ ಮನೆಗಳ ಮೇಲ್ಛಾವಣಿಯಿಂದ ಎಕೆ47 ರೈಫಲ್‌ನ ಕಾಡತೂಸುಗಳ ಖಾಲಿ ಶೆಲ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

   60ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಕಾಸ್ ದುಬೆ ಬಿಜೆಪಿ ನಾಯಕ ಸಂತೋಷ್ ಶುಕ್ಲಾ ಅವರನ್ನು 2001ರಲ್ಲಿ ಪೊಲೀಸ್ ಠಾಣೆಯಲ್ಲಿ ಹತ್ಯೆಗೈದ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪವನ್ನು ಎದುರಿಸುತ್ತಿದ್ದಾನೆ.

    ಗುಂಡಿನ ಕಾಳಗದ ಬಳಿಕ ಉತ್ತರಪ್ರದೇಶದ ಕಾನೂನು, ಸುವ್ಯವಸ್ಥೆ ಕುರಿತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್, ಕಾನ್ಪುರದ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಹಾಗೂ ಕಾನ್ಪುರ ವಲಯದ ಮಹಾನಿರೀಕ್ಷಕ ಮೋಹಿತ್ ಅಗರ್‌ವಾಲ್ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದು, ಪಾತಕಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಪಾತಕಿಗಳು ಪರಾರಿಯಾಗದಂತೆ ನೋಡಿಕೊಳ್ಳಲು ಕಾನ್ಪುರ ವಿಭಾಗದ ಅರು ಜಿಲ್ಲೆಗಳನ್ನ ಸೀಲ್‌ಡೌನ್ ಮಾಡಲಾಗಿದೆಯೆಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X