Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ...

ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಕೊಲೆಗೈದ ಪತಿ

ಬಜ್ಪೆ ಸಮೀಪದ ಕರಂಬಾರ್‌ನಲ್ಲಿ ನಡೆದ ಘಟನೆ

ವಾರ್ತಾಭಾರತಿವಾರ್ತಾಭಾರತಿ3 July 2020 1:05 PM IST
share
ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಕೊಲೆಗೈದ ಪತಿ

ಮಂಗಳೂರು: ಕಾವೂರಿನ ಟಿಪ್ಪರ್ ಚಾಲಕ ಗಣೇಶ್ (40) ತನ್ನ ಪತ್ನಿ ಶಾಂತಾ (30) ಅವರನ್ನು ಬಜಪೆ ಸಮೀಪದ ಕರಂಬಾರು ಅಂತೋಣಿಕಟ್ಟೆಯ ಕಲ್ಲಿನ ಕೋರೆಗೆ ದೂಡಿ ಹಾಕಿ ಕೊಲೆ ಮಾಡಿ ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. 

ಗಣೇಶ್ ಹಾಸನ ಮೂಲದ ನಿವಾಸಿಯಾಗಿದ್ದು, ಕಾವೂರು ಪರಿಸರದಲ್ಲಿ ಟಿಪ್ಪರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಪತ್ನಿ ಶಾಂತಾ ಕಾಸರಗೋಡು ಮೂಲದವರು. ದಂಪತಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾಳೆ. ಈ ಹಿಂದೆ ಕಾವೂರು ಸಮೀಪದ ಮರಕಡದಲ್ಲಿ ಹಾಗೂ ಇತ್ತೀಚೆಗೆ ಕಾವೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಪತಿ- ಪತ್ನಿ ಮಧ್ಯೆ ವಿರಸ ಉಂಟಾದ ಕಾರಣ ಪತ್ನಿ ಮಕ್ಕಳನ್ನು ಕರೆದುಕೊಂಡು ತವರಿಗೆ ಹೋಗಿದ್ದು, ಕೆಲವು ಸಮಯ ಪ್ರತ್ಯೇಕವಾಗಿ ವಾಸವಾಗಿದ್ದರು. ಇತ್ತೀಚೆಗೆ ಆತ ಆಕೆಯ ಮನೆಗೆ ತೆರಳಿ ಮಾತುಕತೆ ನಡೆಸಿ ಕಾವೂರಿಗೆ ಕರೆಸಿಕೊಂಡಿದ್ದನು ಎನ್ನಲಾಗಿದೆ.

ಜು. 1 ರಂದು ಸಂಜೆ ಗಣೇಶ್ ಪತ್ನಿ ಶಾಂತಾಳನ್ನು ಕರೆದುಕೊಂಡು ಹೊರಗೆ ಹೋಗಿದ್ದು, ವಾಪಸ್ ಬಂದಿರಲಿಲ್ಲ. ಮನೆಯಲ್ಲಿ ಮಕ್ಕಳು ಮತ್ತು ಅಜ್ಜಿ (ಶಾಂತಾ ಅವರ ತಾಯಿ) ಇದ್ದರು. ಜು. 2 ರಂದು ಸಂಜೆ ಗಣೇಶ್ ತನ್ನ ಮನೆಗೆ ಫೋನ್ ಮಾಡಿ ಪತ್ನಿಯನ್ನು ತಾನು ಕೊಲೆ ಮಾಡಿರುವುದಾಗಿ ಅತ್ತೆಗೆ ತಿಳಿಸಿದ್ದಾನೆ. ಅತ್ತೆ ಬಳಿಕ ಕಾವೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಆರೋಪಿ ಗಣೇಶ್ ತನ್ನ ಪತ್ನಿಯನ್ನು ತಾನು ಟಿಪ್ಪರ್‌ನಲ್ಲಿ ಕಲ್ಲು ಸಾಗಾಟ ಕೆಲಸ ಮಾಡುತ್ತಿದ್ದ ಕರಂಬಾರಿನ ಕಲ್ಲಿನ ಕೋರೆಗೆ ದೂಡಿ ಹಾಕಿದ್ದು ಕಾವೂರು ಪೊಲೀಸರು ಗುರುವಾರ ರಾತ್ರಿ ಕರಂಬಾರಿಗೆ ತೆರಳಿ ಶಾಂತಾ ಅವರ ಶವವನ್ನು ಪತ್ತೆ ಮಾಡಿ ಅದನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆಗೆ ನೈಜ ಕಾರಣ ತಿಳಿದು ಬಂದಿಲ್ಲ. 

ಆರೋಪಿ ಗಣೇಶನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X