Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2 ವರ್ಷಗಳ ಹಿಂದೆ ದೇಶ ಬಿಟ್ಟ ಉದ್ಯಮಿಯಿಂದ...

2 ವರ್ಷಗಳ ಹಿಂದೆ ದೇಶ ಬಿಟ್ಟ ಉದ್ಯಮಿಯಿಂದ ಬ್ಯಾಂಕ್ ಗಳಿಗೆ 350 ಕೋಟಿ ರೂ. ವಂಚನೆ: ವರದಿ

ಪ್ರಕರಣ ದಾಖಲಿಸಿದ ಸಿಬಿಐ

ವಾರ್ತಾಭಾರತಿವಾರ್ತಾಭಾರತಿ3 July 2020 5:44 PM IST
share
2 ವರ್ಷಗಳ ಹಿಂದೆ ದೇಶ ಬಿಟ್ಟ ಉದ್ಯಮಿಯಿಂದ ಬ್ಯಾಂಕ್ ಗಳಿಗೆ 350 ಕೋಟಿ ರೂ. ವಂಚನೆ: ವರದಿ

ಹೊಸದಿಲ್ಲಿ: ಪಂಜಾಬ್ ಬಾಸ್ಮತಿ ರೈಸ್ ಲಿಮಿಟೆಡ್‍ನ ನಿರ್ದೇಶಕ ಮಂಜೀತ್ ಸಿಂಗ್ ಮಖ್ನಿ, ಕೆನರಾ ಬ್ಯಾಂಕ್ ನೇತೃತ್ವದ ಆರು ಬ್ಯಾಂಕ್‍ ಗಳ ಒಕ್ಕೂಟಕ್ಕೆ 350 ಕೋಟಿ ರೂಪಾಯಿ ವಂಚಿಸಿ ದೇಶದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಆಪಾದಿಸಿದ್ದಾರೆ ಎಂದು ndtv.com ವರದಿ ಮಾಡಿದೆ. ಮಂಜೀತ್ ಈಗ ಕೆನಡಾದಲ್ಲಿದ್ದಾರೆ ಎನ್ನಲಾಗಿದೆ.

ಬ್ಯಾಂಕ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಸಿಬಿಐ ಅಧಿಕಾರಿಗಳು ಅಮೃತಸರ ಮೂಲದ ಉದ್ಯಮಿ ಮಂಜೀತ್ ಸಿಂಗ್ ಮಖ್ನಿ, ಮಗ ಕುಲ್ವೀಂದರ್ ಸಿಂಗ್ ಮಖ್ನಿ, ಸೊಸೆ ಜಸ್ಮೀತ್ ಕೌರ್ ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಆರು ಬ್ಯಾಂಕ್‍ಗಳಿಗೆ ವಂಚಿಸಿದ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಎಫ್‍ಐಆರ್ ಪ್ರಕಾರ ಕೆನರಾ ಬ್ಯಾಂಕ್‍ ಗೆ 175 ಕೋಟಿ, ಆಂಧ್ರ ಬ್ಯಾಂಕ್‍ ಗೆ 53 ಕೋಟಿ, ಯುಬಿಐಗೆ 44ಕೋಟಿ, ಓಬಿಸಿಗೆ 25 ಕೋಟಿ, ಐಡಿಬಿಐಗೆ 14 ಕೋಟಿ ಮತ್ತು ಯೂಕೊ ಬ್ಯಾಂಕ್‍ ಗೆ 41 ಕೋಟಿ ರೂಪಾಯಿ ಬಾಕಿ ಇದೆ.

2003ರಿಂದ ಪಂಜಾಬ್ ಬಾಸ್ಮತಿ ರೈಸ್ ಲಿಮಿಟೆಡ್ ಸಾಲ ಸೌಲಭ್ಯ ಪಡೆದಿತ್ತು ಎಂದು ಕೆನರಾ ಬ್ಯಾಂಕ್ ನೀಡಿದ ದೂರಿನಲ್ಲಿ ವಿವರಿಸಿದೆ. ಬಳಿಕ ಒಕ್ಕೂಟ ವ್ಯವಸ್ಥೆಯನ್ನು ಅವರು ಆಯ್ಕೆ ಮಾಡಿಕೊಂಡಿದ್ದರು. ಬಾಕಿಯನ್ನು ಪಾವತಿಸದ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ 2018ರ ಏಪ್ರಿಲ್ 25ರಂದು, ಆಂಧ್ರ ಬ್ಯಾಂಕ್ 31.03.2018ರಂದು, ಓಬಿಸಿ 27.06.2018ರಂದು, ಐಡಿಬಿಐ 31.03.2018ರಂದು, ಯುಬಿಐ 30.04.2018ರಂದು ಮತ್ತು ಯೂಕೊ ಬ್ಯಾಂಕ್ 31.03.2018ರಂದು ಇದನ್ನು ಅನುತ್ಪಾದಕ ಆಸ್ತಿ ಎಂದು ವರ್ಗೀಕರಿಸಿದ್ದವು ಎಂದು ಎಫ್‍ಐಆರ್ ಹೇಳಿದೆ. ಕಳೆದ ಮಾರ್ಚ್‍ನಲ್ಲಿ ಈ ಬಗ್ಗೆ ಸ್ವಯಂ ತನಿಖೆ ನಡೆಸಿದ ಬ್ಯಾಂಕ್ ಇದನ್ನು ಆರ್ ಬಿಐ ಗಮನಕ್ಕೆ ತಂದಿತ್ತು. ಕಳೆದ ಮಾರ್ಚ್‍ ನಲ್ಲಿ ಸಿಬಿಐಗೆ ದೂರು ನೀಡುವಂತೆ ಸೂಚಿಸಲಾಗಿತ್ತು ಎಂದು ndtv.com ವರದಿ ಮಾಡಿದೆ.

ತನಿಖೆ ಆರಂಭವಾಗುವ ಮುನ್ನವೇ 2018ರ ಆರಂಭದಲ್ಲಿ ಮಂಜೀತ್ ಸಿಂಗ್ ಕೆನಡಾಗೆ ತೆರಳಿದ್ದಾರೆ. ಕೆನರಾ ಬ್ಯಾಂಕ್ ನೀಡಿದ ದೂರಿನ ಮೇರೆಗೆ 2018ರ ಸೆಪ್ಟೆಂಬರ್‍ನಲ್ಲಿ ಎಲ್ಲ ಮೂವರು ಆರೋಪಿಗಳ ಪಾಸ್‍ ಪೋರ್ಟ್ ರದ್ದುಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X