Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9 ಮಂದಿಯನ್ನು ಹತ್ಯೆಗೈಯುವ ಮುನ್ನ ‘ಜೈ...

9 ಮಂದಿಯನ್ನು ಹತ್ಯೆಗೈಯುವ ಮುನ್ನ ‘ಜೈ ಶ್ರೀ ರಾಂ’ ಹೇಳುವಂತೆ ಬಲವಂತಪಡಿಸಿದ್ದ ಗಲಭೆಕೋರರು

ದಿಲ್ಲಿ ಹಿಂಸಾಚಾರ

ವಾರ್ತಾಭಾರತಿವಾರ್ತಾಭಾರತಿ3 July 2020 10:34 PM IST
share
9 ಮಂದಿಯನ್ನು ಹತ್ಯೆಗೈಯುವ ಮುನ್ನ ‘ಜೈ ಶ್ರೀ ರಾಂ’ ಹೇಳುವಂತೆ ಬಲವಂತಪಡಿಸಿದ್ದ ಗಲಭೆಕೋರರು

ಹೊಸದಿಲ್ಲಿ: ದಿಲ್ಲಿ ಹಿಂಸಾಚಾರದ ವೇಳೆ 9 ಮಂದಿಯನ್ನು ಹತ್ಯೆಗೈಯುವ ಮುನ್ನ ದುಷ್ಕರ್ಮಿಗಳು ಅವರಿಂದ ‘ಜೈ ಶ್ರೀ ರಾಮ್’ ಎಂದು ಹೇಳಲು ಬಲವಂತಪಡಿಸಿದ್ದರು ಎಂದು ದಿಲ್ಲಿ ಪೊಲೀಸರು ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಿಂದ ತಿಳಿದುಬಂದಿದೆ.

ಗಲಭೆಯ ಮಾಹಿತಿಗಳನ್ನು ಹಂಚಿಕೊಳ್ಳಲು ದುಷ್ಕರ್ಮಿಗಳು ವಾಟ್ಸ್ಯಾಪ್ ಗ್ರೂಪ್ ಒಂದನ್ನು ಬಳಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಮುಸ್ಲಿಮರ ವಿರುದ್ಧ ಪ್ರತೀಕಾರಗೈಯುವ ಸಲುವಾಗಿ ಫೆಬ್ರವರಿ 25ರಂದು ‘ಕಟ್ಟರ್ ಹಿಂದುತ್ ಏಕತಾ’ ಎನ್ನುವ ವಾಟ್ಸ್ಯಾಪ್ ಗ್ರೂಪ್ ಒಂದನ್ನು ರಚಿಸಲಾಗಿತ್ತು. ಪರಸ್ಪರ ಮಾತನಾಡಲು, ಜನರನ್ನು ಕಳುಹಿಸಿಕೊಡಲು, ಶಸ್ತ್ರಾಸ್ತ್ರಗಳ ವ್ಯವಸ್ಥೆ ಮಾಡಲು ಈ ಗ್ರೂಪ್ ಅನ್ನು ಬಳಸಲಾಗಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ತಿಳಿಸಲಾಗಿದೆ.

“ಜತಿನ್ ಶರ್ಮಾ, ರಿಷಬ್ ಚೌಧರಿ, ವಿವೇಕ್ ಪಂಚಾಲ್, ಲೋಕೇಶ್ ಸೋಲಂಕಿ, ಪಂಕಜ್ ಶರ್ಮಾ, ಪ್ರಿನ್ಸ್, ಸುಮಿತ್ ಚೌಧರಿ, ಅಂಕಿತ್ ಚೌಧರಿ ಮತ್ತು ಹಿಮಾಂಶು ಠಾಕೂರ್ ಎಂಬವರು ಫೆಬ್ರವರಿ 25ರಿಂದ 25ರವರೆಗೆ ಗಂಗಾ ವಿಹಾರದಲ್ಲಿ ಸಕ್ರಿಯರಾಗಿದ್ದರು. ಇವರು ಭಗೀರಥಿ ವಿಹಾರ್ ಮತ್ತು ಇತರ ಕಡೆಗಳಲ್ಲಿ 9 ಮುಸ್ಲಿಮರನ್ನು ಹತ್ಯೆಗೈದಿದ್ದರು ಮತ್ತು ಹಲವರಿಗ ಗಾಯಗೊಳಿಸಿದ್ದರು. ಅವರು ಗಲಭೆಯಲ್ಲಿ ಸಕ್ರಿಯರಾಗಿದ್ದರು ಮತ್ತು ಮತ್ತೊಂದು ಸಮುದಾಯಕ್ಕೆ ಸೇರಿದ ಜನರ ಮೇಲೆ ದಾಳಿ ನಡೆಸುವುದರಲ್ಲಿ ಸಕ್ರಿಯರಾಗಿದ್ದರು. ಹಲವರ ಮೇಲೆ ದಾಳಿ ನಡೆಸಿ ಅವರನ್ನು ಕೊಂದರು. ಜನರನ್ನು ಹಿಡಿದು ಹೆಸರು, ವಿಳಾಸ ಮತ್ತು ದಾಖಲೆಗಳನ್ನು ಕೇಳಿ ಅವರ ಧರ್ಮವನ್ನು ಗುರುತಿಸುವುದು , ಹಲವು ಬಾರಿ ‘ಜೈಶ್ರೀ ರಾಮ್’ ಎಂದು ಹೇಳಲು ಬಲವಂತಪಡಿಸುವುದು ಅವರ ಅಪರಾಧದ ವಿಧಾನವಾಗಿತ್ತು” ಎಂದು ಚಾರ್ಜ್ ಶೀಟ್ ನಲ್ಲಿ ತಿಳಿಸಲಾಗಿದೆ.

“ಜೈ ಶ್ರೀ ರಾಮ್ ಎಂದು ಹೇಳದವರನ್ನು ಮತ್ತು ಮುಸ್ಲಿಂ ಎಂದು ಸಾಬೀತಾದವರನ್ನು ಕೊಂದು ಚರಂಡಿಗೆ ಎಸೆಯುತ್ತಿದ್ದರು” ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X