Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಧರಣಿ

ಆದಾಯ ರಹಿತರಿಗೆ ಮಾಸಿಕ 7500 ರೂ. ನೀಡಿ: ಬಾಲಕೃಷ್ಣ ಶೆಟ್ಟಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 July 2020 11:47 PM IST
share
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಧರಣಿ

ಉಡುಪಿ, ಜು.3: ಕೊರೋನ ಲಾಕ್‌ಡೌನ್ ಪರಿಣಾಮವಾಗಿ ಇಂದು ಎಲ್ಲ ಉದ್ಯಮಗಳು ನಷ್ಟದಲ್ಲಿವೆ. ಜನರಿಗೆ ಯಾವುದೇ ಆದಾಯ ಇಲ್ಲವಾಗಿದೆ. ಆದುದರಿಂದ ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಜನರಿಗೆ ಆರು ತಿಂಗಳು ಮಾಸಿಕ 7500 ರೂ. ನೇರ ನಗದು ವರ್ಗಾವಣೆ ಮಾಡಬೇಕು ಎಂದು ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಅಶ್ವಥಕಟ್ಟೆ ಎದುರು ಹಮ್ಮಿಕೊಳ್ಳಲಾದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೊರೋನ ಮುಂಚೂಣಿಯಲ್ಲಿರುವ ವಾರಿಯರ್ಸ್ ‌ಗಳನ್ನು ಖಾಯಂ ಗೊಳಿಸಿ, ಸಂರಕ್ಷಿಸಬೇಕು. ಯೋಜನಾ ನೌಕರರಿಗೆ ಕೊರೋನ ಕೆಲಸದ ಪ್ರೋತ್ಸಾಹಧನವನ್ನು ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು 200 ದಿನಗಳಿಗೆ ನಗರಗಳಿಗೂ ವಿಸ್ತರಿಸಿ, ವಲಸೆ ಕಾರ್ಮಿಕರಿಗೂ ಅನ್ವಯವಾಗುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಲಾಕ್‌ಡೌನ್ ಸಂದರ್ಭದ ವೇತನವನ್ನು ಸಂಪೂರ್ಣ ಪಾವತಿಸಿ, ಪೂರ್ಣ ವೇತನದೊಂದಿಗೆ ಕೆಲಸ ಕೊಡಬೇಕು. ಎಲ್ಲ ಕಾರ್ಮಿಕರಿಗೆ ಕನಿಷ್ಠ ಆರು ತಿಂಗಳ ವರೆಗೆ ಪಡಿತರ ಒದಗಿಸಬೇಕು. ಕೋವಿಡ್-19ನ್ನು ವೈದ್ಯಕೀಯ ತುರ್ತು ಸ್ಥಿತಿ ಎಂಬುದಾಗಿ ಪರಿಗಣಿಸಬೇಕೆ ಹೊರತು ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗಿ ಅಲ್ಲ. ಖಾಸಗೀಕರಣದ ಕ್ರಮಗಳನ್ನು ಕೈಬಿಡಬೇಕು. ವಿದ್ಯುತ್ ತಿದ್ದುಪಡಿ ಮಸೂದೆ 2020ನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಮತ್ತು ಕೇಂದ್ರ ಸರಕಾರಿ ಪಿಂಚಣಿದಾರರಿಗೆ ತುಟ್ಟಿಭತ್ಯೆ ಪರಿಹಾರವನ್ನು ಪುನರ್ ನೀಡಬೇಕು. ಕಾರ್ಮಿಕ ಕಾನೂನುಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು. ಬಸ್ ನೌಕರರು, ಬೀಡಿ ಕಾರ್ಮಿಕರು, ಟೈಲರ್‌ಗಳು, ಬೀದಿಬದಿ ವ್ಯಾಪಾರಿ ಗಳು, ಹೊಟೇಲು ಕಾರ್ಮಿಕರು ಮತ್ತಿತ್ತರ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ನೀಡಬೇಕು. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹಿಂತೆಗೆಯಬೇಕು ಎಂದು ಅವು ಸರಕಾರವನ್ನು ಒತ್ತಾಯಿಸಿದರು.

ಧರಣಿಯಲ್ಲಿ ಎಐಟಿಯುಸಿ ಮುಖಂಡರಾದ ಕೆ.ವಿ.ಭಟ್, ಸಂಜೀವ, ಸಿಐಟಿಯು ಮುಖಂಡರಾದ ಶಶಿಧರ ಗೊಲ್ಲ. ಉಮೇಶ್ ಕುಂದರ್, ಕವಿರಾಜ್ ಎಸ್., ನಳಿನಿ ಮೊದಲಾದವರು ಉಪಸ್ಥಿತರಿದ್ದರು.

ಕೆಲಸದ ಸ್ಥಳದಲ್ಲಿಯೇ ಪ್ರತಿಭಟಿಸಿದ ಕಾರ್ಮಿಕರು
ಗಂಗೊಳ್ಳಿ, ಕಂಡ್ಲೂರು, ಶಂಕರನಾರಾಯಣ, ಹಾಲಾಡಿ, ಹೆಮ್ಮಾಡಿ, ಗುಲ್ವಾಡಿ, ಮಾವಿನಕಟ್ಟೆ, ತಲ್ಲೂರು ಸುಪ್ರಿಮ್, ಗುಲ್ವಾಡಿ ಪ್ರಭಾಕಿರಣ, ನೆಲ್ಲಿಕಟ್ಟೆ, ಪ್ರಭಾಕರ ಟೈಲ್ ಕಾರ್ಖಾನೆ, ಮೂಕಾಂಬಿಕ ಟೈಲ್ ಕಾರ್ಖಾನೆ, ಗುಜ್ಜಾಡಿ ಕಟ್ಟಡ ಕಾರ್ಮಿಕರು ಮಂಗಳೂರು ಟೈಲ್ ಕಾರ್ಖಾನೆ, ನೇರಳಕಟ್ಟೆ, ಕಟ್ಟಡ ಕಾರ್ಮಿಕರು, ಅಸೋಡು, ವಂಡ್ಸೆ ಕಟ್ಟಡ ಕಾರ್ಮಿಕರು, ಕರ್ಕಿ ರಿಕ್ಷಾ ಚಾಲಕರು, ಕುಂದಾಪುರ ಶಾಸ್ತ್ರಿವೃತ್ತ ರಿಕ್ಷಾ ಚಾಲಕರು, ಕುಂಭಾಶಿ ಕಟ್ಟಡ ಕಾರ್ಮಿಕರು, ಗುಲ್ವಾಡಿ, ಮದ್ದುಗುಡ್ಡೆ, ಆನಗಳ್ಳಿ, ಹಟ್ಟಿಯಂಗಡಿ, ಶೆಟ್ರಕಟ್ಟೆ ಬೀಡಿ ಕಾರ್ಮಿಕರು ತಾವು ಕೆಲಸ ಮಾಡುವ ಸ್ಥಳಗಳಲ್ಲಿಯೇ ಪ್ರತಿಭಟನೆ ನಡೆಸಿದರು.

ಕುಂದಾಪುರ ಹಂಚು ಕಾರ್ಮಿಕ ಭವನದ ಎದುರುಗಡೆ ಜೆಸಿಟಿಯು, ಸಿಐಟಿಯು ಸಂಘಟನೆಯಿಂದ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಕೆ.ಶಂಕರ್, ಎಚ್.ನರಸಿಂಹ, ಮಹಾಬಲ ವಡೇರಹೋಬಳಿ, ಸುರೇಶ್ ಕಲ್ಲಾಗರ, ವಿ.ನರಸಿಂಹ, ರಾಜು ದೇವಾಡಿಗ, ಬಲ್ಕೀಸ್ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X