Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೋಂ ಐಸೊಲೇಶನ್ ಗೆ ಮಾರ್ಗಸೂಚಿಗಳನ್ನು...

ಹೋಂ ಐಸೊಲೇಶನ್ ಗೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಸರಕಾರ

ರೋಗಲಕ್ಷಣಗಳಿಲ್ಲದೆ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ4 July 2020 9:42 PM IST
share
ಹೋಂ ಐಸೊಲೇಶನ್ ಗೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಸರಕಾರ

ಹೊಸದಿಲ್ಲಿ,ಜು.4: ಯಾವುದೇ ರೋಗಲಕ್ಷಣಗಳಿಲ್ಲದ ಭಾರೀ ಸಂಖ್ಯೆಯ ಜನರು ಕೋವಿಡ್-19ಗೆ ಪಾಸಿಟಿವ್ ಆಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಇಂತಹವರನ್ನು ಸೌಮ್ಯ ಅಥವಾ ಕಡಿಮೆ ಕೊರೋನ ವೈರಸ್ ಸೋಂಕಿನ ಪ್ರಕರಣಗಳ ಪಟ್ಟಿಯಲ್ಲಿ ಸೇರಿಸಲು ಹೋಂ ಐಸೊಲೇಷನ್ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.

 ಪರಿಷ್ಕೃತ ಮಾರ್ಗಸೂಚಿಗಳಂತೆ ಎಚ್‌ಐವಿ, ಅಂಗಾಂಗ ಕಸಿಗೊಳಗಾದವರು ಮತ್ತು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವವರು ಸೇರಿದಂತೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರು ಹೋಂ ಐಸೊಲೇಷನ್‌ಗೆ ಅರ್ಹರಾಗುವುದಿಲ್ಲ. 60 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು ಮತ್ತು ಅಧಿಕ ರಕ್ತದೊತ್ತಡ,ಮಧುಮೇಹ,ಹೃದಯರೋಗ,ದೀರ್ಘಕಾಲೀನ ಶ್ವಾಸಕೋಶ/ಯಕೃತ್ತು /ಮೂತ್ರಪಿಂಡ ರೋಗ ಮತ್ತು ಪಾರ್ಶ್ವವಾಯುವಿನಂತಹ ಮಸ್ತಿಷ್ಕ ರೋಗ ಇತ್ಯಾದಿ ಕಾಯಿಲೆ ಪೀಡಿತರನ್ನು ಚಿಕಿತ್ಸೆ ನೀಡುತ್ತಿರುವ ವೈದ್ಯಾಧಿಕಾರಿಯಿಂದ ಸೂಕ್ತ ಪರಿಶೀಲನೆಯ ಬಳಿಕವೇ ಹೋಂ ಐಸೊಲೇಷನ್‌ನಲ್ಲಿ ಇರಲು ಅವಕಾಶ ನೀಡಲಾಗುವುದು.

ಹೋಂ ಐಸೊಲೇಷನ್‌ನಲ್ಲಿರುವ ರೋಗಿಗಳನ್ನು ಲಕ್ಷಣಗಳು ಕಾಣಿಸಿಕೊಂಡ 10 ದಿನಗಳ ಬಳಿಕ, ಹಿಂದಿನ ಮೂರು ದಿನಗಳಲ್ಲಿ ಜ್ವರವಿದ್ದಿರದಿದ್ದರೆ ಬಿಡುಗಡೆಗೊಳಿಸಲಾಗುವುದು. ನಂತರ ರೋಗಿಗಳು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಮತ್ತು ಮುಂದಿನ ಏಳು ದಿನಗಳ ಕಾಲ ತಮ್ಮ ಆರೋಗ್ಯದ ಮೇಲೆ ಸ್ವಯಂ ನಿಗಾಯಿರಿಸಬೇಕು. ಹೋಂ ಐಸೊಲೇಷನ್ ಅವಧಿಯ ಬಳಿಕ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ.

ಯಾವುದೇ ಲಕ್ಷಣಗಳಿಲ್ಲದ ರೋಗಿಗಳು ತಮ್ಮ ಮನೆಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಸಂಪರ್ಕವನ್ನು ನಿವಾರಿಸಲು ಸಾಧ್ಯವಾಗುವಂತೆ ತಮಗಾಗಿ ಪ್ರತ್ಯೇಕ ಕೋಣೆಯನ್ನು ಹೊಂದಿದ್ದರೆ ಹೋಂ ಐಸೊಲೇಷನ್ ಆಯ್ಕೆ ಮಾಡಿಕೊಳ್ಳಬಹುದು.

24x 7 ಆಧಾರದಲ್ಲಿ ರೋಗಿಯ ಆರೈಕೆಯನ್ನು ನೋಡಿಕೊಳ್ಳುವ ಮೇಲ್ವಿಚಾರಕನಿದ್ದು, ಆತ ಹೋಂ ಐಸೊಲೇಷನ್‌ನ ಇಡೀ ಅವಧಿಯಲ್ಲಿ ಆಸ್ಪತ್ರೆಯೊಂದಿಗೆ ಸಂಪರ್ಕವನ್ನು ಹೊಂದಿರಬೇಕು. ಮೇಲ್ವಿಚಾರಕ ಮತ್ತು ರೋಗಿಯ ನಿಕಟ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಾಧಿಕಾರಿಯ ಶಿಫಾರಸಿನಂತೆ ಹೈಡ್ರಾಕ್ಸಿಕ್ಲೋರೊಕ್ವಿನ್ ಅನ್ನು ಸೇವಿಸಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯು ತಿಳಿಸಿದೆ.

ಹೋಂ ಐಸೊಲೇಷನ್‌ನಲ್ಲಿರುವ ರೋಗಿಗಳು ಆರೋಗ್ಯ ಸೇತು ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡಿರಬೇಕು ಮತ್ತು ಅದು ಸದಾ ಕಾಲ ಸಕ್ರಿಯವಾಗಿರಬೇಕು ಎಂದೂ ಅದು ಸೂಚಿಸಿದೆ.

 ಉಸಿರಾಟದಲ್ಲಿ ತೊಂದರೆ, ರಕ್ತದಲ್ಲಿಯ ಆಮ್ಲಜನಕದ ಶುದ್ಧತೆಯಲ್ಲಿ ಕುಸಿತ, ಎದೆಯಲ್ಲಿ ನಿರಂತರ ನೋವು/ಒತ್ತಡ, ಮಾನಸಿಕ ಗೊಂದಲ, ತೊದಲು ಮಾತು/ಸೆಳೆತಗಳು, ನಿಶ್ಶಕ್ತಿ ಅಥವಾ ಕೈಕಾಲು ಮತ್ತು ಮುಖದಲ್ಲಿ ಮರಗಟ್ಟುವಿಕೆ ಹಾಗೂ ತುಟಿ/ಮುಖದ ಚರ್ಮ ನೀಲಿ ಬಣ್ಣಕ್ಕೆ ತಿರುಗುವುದು ಇತ್ಯಾದಿ ಗಂಭೀರ ಲಕ್ಷಣಗಳು ಅಥವಾ ತೊಂದರೆಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯಕೀಯ ನೆರವನ್ನು ಪಡೆದುಕೊಳ್ಳಬೇಕು ಇತ್ಯಾದಿಗಳು ಪರಿಷ್ಕೃತ ಮಾರ್ಗಸೂಚಿಯಲ್ಲಿ ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X