ಬಿಹಾರ: ಸಿಡಿಲಿನ ಹೊಡೆತಕ್ಕೆ ಕನಿಷ್ಠ 20 ಬಲಿ
ಪಾಟ್ನಾ,ಜು.4: ಬಿಹಾರದ ವಿವಿಧೆಡೆ ಶನಿವಾರ ಸಿಡಿಲಿನ ಹೊಡೆತಕ್ಕೆ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಈ ಸಾವುಗಳು ಸಂಭವಿಸಿದ್ದು, ಈ ಪೈಕಿ ಭೋಜಪುರದಲ್ಲಿ ಗರಿಷ್ಠ 9 ಮಂದಿ ಮೃತಪಟ್ಟಿದ್ದಾರ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಎಳಿಸಿದೆ.
ಉಳಿದಂತೆ ಸಾರಣ್ನಲ್ಲಿ ಐವರು, ಪಟ್ನಾದಲ್ಲಿ ಇಬ್ಬರು ಹಾಗೂ ಬಕ್ಸಾರ್ ಜಿಲ್ಲೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಶುಕ್ರವಾರದಂದು ಬಿಹಾರದ ಐದು ಜಿಲ್ಲೆಗಳಲ್ಲಿ ಎಂಟು ಮಂದಿ ಸಿಡಿಲಿನ ಹೊಡೆತಕ್ಕೆ ಬಲಿಯಾಗಿದ್ದರು
ಮೃತಪಟ್ಟವರ ಸಂತ್ರಸ್ತ ಕುಟುಂಬಗಳಿಗೆ ತಲಾ4 ಲಕ್ಷ ರೂ.ಗಳ ಪರಿಹಾರಧವನ್ನು ಉಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರತಿಕೂಲ ಹವಾಮಾನವಿರುವ ಹಿನ್ನೆಲೆಯಲ್ಲಿ ಜನತೆ ಜಾಗೃತೆ ವಹಿಸಬೇಕು ಹಾಗೂ ಮನೆಯೊಳಗೆ ಉಳಿದುಕೊಳ್ಳುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರದ ಜನತೆಗೆ ಮನಿವಿ ಮಾಡಿದ್ದಾರೆ.
Next Story