Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಂದೂರ್ ಒಲೆ ಹೊತ್ತಿಸುವಂತೆ ನನಗೆ...

ತಂದೂರ್ ಒಲೆ ಹೊತ್ತಿಸುವಂತೆ ನನಗೆ ಹೇಳಿದ್ದರು: ಸೌದಿ ಕಾನ್ಸುಲೇಟ್ ಕಚೇರಿ ಸಿಬ್ಬಂದಿಯ ಸಾಕ್ಷ್ಯ

ಜಮಾಲ್ ಖಶೋಗಿ ಹತ್ಯೆ ವಿಚಾರಣೆ ಟರ್ಕಿ ನ್ಯಾಯಾಲಯದಲ್ಲಿ ಆರಂಭ

ವಾರ್ತಾಭಾರತಿವಾರ್ತಾಭಾರತಿ4 July 2020 10:58 PM IST
share

ಇಸ್ತಾಂಬುಲ್ (ಟರ್ಕಿ), ಜು. 4: ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿ ಇಸ್ತಾಂಬುಲ್‌ ನಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿ ಪ್ರವೇಶಿಸಿದ ಬಳಿಕ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ, ತಂದೂರ್ ಒಲೆ ಹೊತ್ತಿಸುವಂತೆ ನನಗೆ ಸೂಚಿಸಲಾಯಿತು ಎಂದು ಕೌನ್ಸುಲೇಟ್‌ನ ಸಿಬ್ಬಂದಿಯೊಬ್ಬರು ಶುಕ್ರವಾರ ಇಲ್ಲಿನ ನ್ಯಾಯಾಲಯಕ್ಕೆ ತಿಳಿಸಿದರು.

2018 ಅಕ್ಟೋಬರ್ 2ರಂದು ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಯಲ್ಲಿ ‘ವಾಶಿಂಗ್ಟನ್ ಪೋಸ್ಟ್’ನ ಅಂಕಣಕಾರರೂ ಆಗಿದ್ದ ಖಶೋಗಿಯನ್ನು ಹತ್ಯೆಗೈಯ್ಯಲಾಗಿತ್ತು. ಇದಕ್ಕಾಗಿ ಆ ದಿನ ಕೌನ್ಸುಲೇಟ್‌ಗೆ ವಿಶೇಷ ವಿಮಾನವೊಂದರಲ್ಲಿ ಸೌದಿ ಅರೇಬಿಯದ 20 ಅಧಿಕಾರಿಗಳ ತಂಡ ಆಗಮಿಸಿತ್ತು ಎನ್ನುವುದು ಬಳಿಕ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಹತ್ಯೆಗೆ ಸಂಬಂಧಿಸಿ ಆ 20 ಮಂದಿಯ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆ ಅವರ ಅನುಪಸ್ಥಿತಿಯಲ್ಲಿ ಇಸ್ತಾಂಬುಲ್‌ನಲ್ಲಿ ಶುಕ್ರವಾರ ಆರಂಭಗೊಂಡಿತು.

ವಿಚಾರಣೆಯ ಮೊದಲ ದಿನದಂದು, ಕೌನ್ಸುಲೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯ ತಂತ್ರಜ್ಞ ಝೆಕಿ ಡೆಮಿರ್ ಸಾಕ್ಷ್ಯ ನುಡಿದರು. ಖಶೋಗಿ ಕೌನ್ಸುಲೇಟ್ ಪ್ರವೇಶಿಸಿದ ಬಳಿಕ ಸಮೀಪದಲೇ ಇದ್ದ ಕೌನ್ಸುಲ್‌ರ ನಿವಾಸಕ್ಕೆ ನನ್ನನ್ನು ಕರೆಯಲಾಯಿತು ಎಂದು ಅವರು ಹೇಳಿದರು.

‘‘ಅಲ್ಲಿ ಐದರಿಂದ ಆರು ಮಂದಿ ಇದ್ದರು. ತಂದೂರ್ ಒಲೆಯನ್ನು ಹೊತ್ತಿಸುವಂತೆ ಅವರು ನನಗೆ ಸೂಚಿಸಿದರು. ಅಲ್ಲಿ ಗಾಬರಿಯ ವಾತಾವರಣವಿತ್ತು’’ ಎಂದು ಅವರು ನುಡಿದರು.

ತನ್ನ ಟರ್ಕಿಯ ಗೆಳತಿಯನ್ನು ಮದುವೆಯಾಗುವುದಕ್ಕಾಗಿ ದಾಖಲೆಪತ್ರಗಳನ್ನು ತರಲು ಖಶೋಗಿ ಕೌನ್ಸುಲೇಟ್ ಕಚೇರಿಗೆ ಹೋಗಿದ್ದರು. ಆ ಬಳಿಕ ಅವರು ಪತ್ತೆಯಾಗಿಲ್ಲ. ಅವರ ಕೊಲೆಗೆ ಸ್ವತಃ ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಆದೇಶಿಸಿದ್ದರು ಎಂಬುದಾಗಿ ಕೆಲವು ಪಾಶ್ಚಾತ್ಯ ದೇಶಗಳು ಮತ್ತು ಅಮೆರಿಕದ ಬೇಹುಗಾರಿಕಾ ಸಂಸ್ಥೆ ಸಿಐಎ ಆರೋಪಿಸಿದೆ.

ಸೌದಿಯಲ್ಲಿ ಆರೋಪಿಗಳ ರಹಸ್ಯ ವಿಚಾರಣೆ

ವಿಚಾರಣೆಗಾಗಿ 20 ಆರೋಪಿಗಳನ್ನು ಗಡಿಪಾರು ಮಾಡುವಂತೆ ಟರ್ಕಿ ಸೌದಿ ಅರೇಬಿಯಕ್ಕೆ ಮನವಿ ಮಾಡಿತ್ತು. ಆದರೆ, ಅವರನ್ನು ಗಡಿಪಾರು ಮಾಡಲು ನಿರಾಕರಿಸಿದ ಸೌದಿ, ಅವರನ್ನು ದೇಶದಲ್ಲೇ ವಿಚಾರಣೆಗೆ ಗುರಿಪಡಿಸುವುದಾಗಿ ಹೇಳಿತ್ತು.

ಅಂತಿಮವಾಗಿ 11 ಮಂದಿಯನ್ನು ಆರೋಪಿಗಳು ಎಂದು ಹೆಸರಿಸಿದ ಸೌದಿ ಸರಕಾರವು ಅವರನ್ನು ರಹಸ್ಯ ವಿಚಾರಣೆಗೆ ಗುರಿಪಡಿಸಿತು. ಸೌದಿ ನ್ಯಾಯಾಲಯವು ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್‌ರ ಆಪ್ತ ಸಲಹೆಗಾರರನ್ನು ದೋಷಮುಕ್ತಗೊಳಿಸಿತು. ಐವರಿಗೆ ಮರಣ ದಂಡನೆ ವಿಧಿಸಿತು ಹಾಗೂ ಮೂವರಿಗೆ ಒಟ್ಟು 24 ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಇತ್ತೀಚೆಗೆ, ಜಮಾಲ್ ಖಶೋಗಿಯ ಪುತ್ರರು ತಮ್ಮ ತಂದೆಯ ಹಂತಕರನ್ನು ಕ್ಷಮಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಮರಣ ದಂಡನೆಗೆ ಒಳಗಾಗಿರುವವರ ಶಿಕ್ಷೆಯ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X