ಎಂಸಿಎಫ್ ವತಿಯಿಂದ ಸ್ಯಾನಿಟೈಸರ್ ವಿತರಣೆ
ಮಂಗಳೂರು, ಜು.4: ಕೊರೋನ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಗೃಹರಕ್ಷಕ ದಳದ ಸಿಬ್ಬಂದಿ ವರ್ಗಕ್ಕೆ ಪಣಂಬೂರಿನ ಎಂಸಿಎಫ್ ಕಂಪೆನಿಯು ಕೊಡಮಾಡಲ್ಪಟ್ಟ ಸ್ಯಾನಿಟೈಸರ್ನ್ನು ಗೃಹರಕ್ಷಕ ದಳದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಎಂಸಿಎಫ್ನ ಪ್ರಧಾನ ವೈದ್ಯಾಧಿಕಾರಿ ಡಾ. ಯೋಗೀಶ್ ಭಟ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಅವಿನಂದನ್ 500 ಸ್ಯಾನಿಟೈಸರ್ಗಳನ್ನು ವಿತರಿಸಿದರು.
ಈ ಸಂದರ್ಭ ದ.ಕ.ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ. ಮುರಲಿ ಮೋಹನ ಚೂಂತಾರು ಹಾಗೂ ಗೃಹರಕ್ಷಕ-ಗೃಹರಕ್ಷಕಿಯರು ಉಪಸ್ಥಿತರಿದ್ದರು.
Next Story