Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶೇಷ ಪ್ಯಾಕೇಜ್: ಸಹಾಯಧನಕ್ಕಾಗಿ...

ವಿಶೇಷ ಪ್ಯಾಕೇಜ್: ಸಹಾಯಧನಕ್ಕಾಗಿ ಇದುವರೆಗೂ 1.16 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ

ಜು.4 ರವರೆಗೆ 58,061 ಕ್ಷೌರಿಕರು ಹಾಗೂ 57,411 ಅಗಸರಿಂದ ಅರ್ಜಿ

-ಬಾಬುರೆಡ್ಡಿ ಚಿಂತಾಮಣಿ-ಬಾಬುರೆಡ್ಡಿ ಚಿಂತಾಮಣಿ5 July 2020 11:51 PM IST
share
ವಿಶೇಷ ಪ್ಯಾಕೇಜ್: ಸಹಾಯಧನಕ್ಕಾಗಿ ಇದುವರೆಗೂ 1.16 ಲಕ್ಷ ಜನರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು, ಜು.5: ರಾಜ್ಯದಲ್ಲಿ ಕೊರೋನ ನಿಯಂತ್ರಿಸುವ ಸಲುವಾಗಿ ಲಾಕ್‍ಡೌನ್ ಘೋಷಿಸಿದ್ದ ಸರಕಾರ ಅನ್‍ಲಾಕ್ ಘೋಷಿಸಿದ ನಂತರ ಆದಾಯವಿಲ್ಲದೇ ಕಂಗೆಟ್ಟಿದ್ದ ವಿವಿಧ ಸಮುದಾಯದವರಿಗೆ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಅದರಲ್ಲಿ ಸಹಾಯಧನಕ್ಕಾಗಿ ರಾಜ್ಯಾದ್ಯಂತ ಸುಮಾರು 1.16 ಲಕ್ಷಕ್ಕೂ ಅಧಿಕ ಜನರು ಅರ್ಜಿ ಸಲ್ಲಿಸಿದ್ದಾರೆ. ಜುಲೈ ಅಂತ್ಯದೊಳಗೆ ಅಂತ್ಯದೊಳಗೆ ಅರ್ಹ ಫಲಾನುಭವಿಗಳಿಗೆ ಸಹಾಯಧನ ಸಿಗಲಿದೆ.

ಜೂ. 10ರಿಂದ ಜು. 4 ರವರೆಗೆ 58,061 ಕ್ಷೌರಿಕರು, 57,411 ಅಗಸರು ಸಹಾಯಧನಕ್ಕಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಗುರುತಿಸಿದಂತೆ ರಾಜ್ಯದಲ್ಲಿ ಸುಮಾರು 2.30 ಲಕ್ಷ ಕ್ಷೌರಿಕರು ಹಾಗೂ 60 ಸಾವಿರ ಅಗಸರಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಸುಮಾರು 2 ಲಕ್ಷ ಇದ್ದಾರೆ ಎಂದು ಅಂದಾಜಿಸಲಾಗಿದೆ. ಈಗಾಗಲೇ 1.16 ಲಕ್ಷ ಅರ್ಜಿಗಳು ಬಂದಿದ್ದು, ಜು. 10ರೊಳಗೆ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಲಿವೆ ಎಂದು ಕಾರ್ಮಿಕ ಇಲಾಖೆ ನಿರೀಕ್ಷಿಸಿದೆ.

ಕೊರೋನ ವೈರಸ್ ಲಾಕ್‍ಡೌನ್‍ನಿಂದ ಕಾರ್ಮಿಕವರ್ಗ ಸಂಕಷ್ಟಕ್ಕೆ ಸಿಲುಕಿತ್ತು. ಸುಮಾರು ಎರಡೂವರೆ ತಿಂಗಳು ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದರಿಂದ ಶ್ರಮಿಕವರ್ಗ ಆದಾಯವಿಲ್ಲದೇ ಕಷ್ಟ ಅನುಭವಿಸಿದರು. ಈ ಹಿನ್ನೆಲೆ ರಾಜ್ಯ ಸರಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸಿತ್ತು.

ಜಿಲ್ಲಾವಾರು ಅರ್ಜಿಗಳ ಮಾಹಿತಿ:

ಬೆಳಗಾವಿ 7558, ಬೆಂಗಳೂರು ಗ್ರಾಮಾಂತರ 7952, ಕಲಬುರಗಿ 5231, ವಿಜಯಪುರ 4007, ಬಳ್ಳಾರಿ 9551, ಮೈಸೂರು 6252, ರಾಯಚೂರು 7438, ತುಮಕೂರು 6343, ಕೊಪ್ಪಳ 4317, ಬಾಗಲಕೋಟೆ 2994, ಚಿಕ್ಕಬಳ್ಳಾಪುರ 4671, ಮಂಡ್ಯ 5045, ಕೋಲಾರ 3841, ಹಾವೇರಿ 3671, ಧಾರವಾಡ 3585, ಗದಗ 2877, ಬೀದರ್ 3358, ಚಿತ್ರದುರ್ಗ 4441, ಹಾಸನ 2547, ದಾವಣಗೆರೆ 3387, ಶಿವಮೊಗ್ಗ 2173, ಯಾದಗಿರಿ 3178, ಬೆಂಗಳೂರು ನಗರ 4726, ಚಾಮರಾಜನಗರ 2887, ಚಿಕ್ಕಮಗಳೂರು 1343, ರಾಮನಗರ 1956, ಉತ್ತರ ಕನ್ನಡ 1366, ಉಡುಪಿ 1071, ದಕ್ಷಿಣ ಕನ್ನಡ 1023, ಕೊಡಗು 548 ಜನರು ಜುಲೈ 4 ರವರೆಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆ ಬೇಕು?: 18ರಿಂದ 65 ವರ್ಷದೊಳಗಿನ, ಬಡತನ ರೇಖೆಗಿಂತ ಕೆಳಗಿರುವವರು ವಿಳಾಸ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‍ಬುಕ್, ಬಿಪಿಎಲ್ ದಾಖಲೆ, ಉದ್ಯೋಗ ಪ್ರಮಾಣಪತ್ರದೊಂದಿಗೆ ಮೊಬೈಲ್ ನಂಬರ್ ಅನ್ನು ಕಡ್ಡಾಯವಾಗಿ ಅಪ್‍ಲೋರ್ಡ್ ಮಾಡಬೇಕು. ಉದ್ಯೋಗ ಪ್ರಮಾಣಪತ್ರವನ್ನು ತಹಶೀಲ್ದಾರ್, ಉಪ ತಹಶೀಲ್ದಾರ್, ಕಂದಾಯಾಧಿಕಾರಿ, ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆ ಅಧಿಕಾರಿಗಳು, ಪಿಡಿಒಗಳಿಂದ ಪಡೆಯಬಹುದು. ಪರವಾನಗಿ ಪಡೆದು ವೃತ್ತಿ ನಡೆಸುತ್ತಿರುವ ಸಂಸ್ಥೆಯ ನಾಲ್ಕು ಕಾರ್ಮಿಕರು ಹಾಗೂ ಪರವಾನಗಿ ಪಡೆಯದ ಸಂಸ್ಥೆಯ ಇಬ್ಬರು ಕಾರ್ಮಿಕರು ಅರ್ಜಿ ಸಲ್ಲಿಸಬಹುದು.

ಜಿಲ್ಲಾ ಕೇಂದ್ರಗಳಲ್ಲಿ ಅರ್ಜಿಗಳ ಪರಿಶೀಲನೆ ಕಾರ್ಯ ಆರಂಭ

ಪರಿಹಾರ ಕೋರಿ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಮಟ್ಟದ ಸಮಿತಿ ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಂಡು ಕಾರ್ಮಿಕ ಇಲಾಖೆಗೆ ಕಳುಹಿಸಲಿದೆ. ಈಗಾಗಲೇ ಪರಿಶೀಲನಾ ಕಾರ್ಯ ಆರಂಭವಾಗಿದ್ದು, 1.14 ಲಕ್ಷ ಅರ್ಜಿಗಳಲ್ಲಿ 13820 ಅರ್ಜಿಗಳನ್ನು ಆಯ್ಕೆ ಮಾಡಲಾಗಿದೆ. 404 ಅರ್ಜಿಗಳನ್ನು  ರದ್ದುಗೊಳಿಸಲಾಗಿದೆ. ಉಳಿದ 1.01 ಲಕ್ಷ ಅರ್ಜಿಗಳು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂ. 10 ರಿಂದ ಕ್ಷೌರಿಕರು ಹಾಗೂ ಅಗಸರು ಸಹಾಯಧನಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ. 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ಅರ್ಜಿಗಳ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಈ ತಿಂಗಳಾಂತ್ಯದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನ ಜಮೆಯಾಗಲಿದೆ.

-ಅಕ್ರಂ ಪಾಷ, ಕಾರ್ಮಿಕ ಇಲಾಖೆಯ ಆಯುಕ್ತ

share
-ಬಾಬುರೆಡ್ಡಿ ಚಿಂತಾಮಣಿ
-ಬಾಬುರೆಡ್ಡಿ ಚಿಂತಾಮಣಿ
Next Story
X