Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: 44 ವೈದ್ಯರಿದ್ದ...

ಬೆಂಗಳೂರು: 44 ವೈದ್ಯರಿದ್ದ ಆಸ್ಪತ್ರೆಯಲ್ಲಿ ಈಗ ಕೇವಲ 5 ವೈದ್ಯರು!

ಎಲ್ಲಾ ಸೌಕರ್ಯಗಳಿದ್ದರೂ ಚಿಕಿತ್ಸೆ ನೀಡುವವರೇ ಇಲ್ಲ; ವಿಡಿಯೋ ಮೂಲಕ ಅಳಲು ತೋಡಿಕೊಂಡ ಆಡಳಿತ ನಿರ್ದೇಶಕ

ವಾರ್ತಾಭಾರತಿವಾರ್ತಾಭಾರತಿ6 July 2020 10:25 PM IST
share
ಬೆಂಗಳೂರು: 44 ವೈದ್ಯರಿದ್ದ ಆಸ್ಪತ್ರೆಯಲ್ಲಿ ಈಗ ಕೇವಲ 5 ವೈದ್ಯರು!

ಬೆಂಗಳೂರು: ಬೆಂಗಳೂರಿನ ಹಲವು ಖಾಸಗಿ ಆಸ್ಪತ್ರೆಗಳು ಕೋವಿಡ್-19 ಸಮಸ್ಯೆಯ ನಡುವೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಕೊರತೆ ಎದುರಿಸುತ್ತಿವೆ ಹಾಗೂ ಈ ವಿಚಾರವನ್ನು ಸರಕಾರದ ಜತೆಗಿನ ಸಭೆಯಲ್ಲಿ ಉಪಮುಖ್ಯಮಂತ್ರಿಯ ಗಮನಕ್ಕೆ ತರಲಾಗಿದೆ ಎಂದು  ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳ ಸಂಘದ ಅಧ್ಯಕ್ಷ ಡಾ ಆರ್ ರವೀಂದ್ರ ಹೇಳಿದ್ದಾರೆ.

ನಗರದ ಶಿವಾಜಿನಗರದಲ್ಲಿರುವ ಎಚ್‍ ಬಿಎಸ್ ಆಸ್ಪತ್ರೆಯಲ್ಲಿ ಈ ಹಿಂದೆ 44 ವೈದ್ಯರು ಹಾಗೂ 20 ದಾದಿಯರು ಸೇವೆ ಸಲ್ಲಿಸುತ್ತಿದ್ದರೆ ಈಗ ಕೇವಲ 5 ವೈದ್ಯರು ಹಾಗೂ 12 ದಾದಿಯರ ಜತೆ ಅದು ಕರ್ತವ್ಯ ನಿರ್ವಹಿಸುವಂತಾಗಿ ಕೋವಿಡ್-19 ರೋಗಿಗಳ ಆರೈಕೆಗೆ ಸಮಸ್ಯೆ ಎದುರಿಸುತ್ತಿದೆ.

“ವೈದ್ಯರು ಎಲ್ಲಿದ್ದಾರೆ? ಎಲ್ಲರೂ ವಾಟ್ಸ್ಯಾಪ್‍ ನಲ್ಲಿದ್ದಾರೆ. ಎಲ್ಲಾ ವೈದ್ಯರೂ ಬಂದು ತಮ್ಮ ಕರ್ತವ್ಯ ನಿಭಾಯಿಸಬೇಕೆಂದು ಕೇಳಿಕೊಳ್ಳುತ್ತೇನೆ'' ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ತಾಹಾ ಮತೀನ್ ಅವರು ಐಸಿಯುವಿನಿಂದ ಮಾಡಲಾದ ವೀಡಿಯೋ ಮನವಿಯಲ್ಲಿ ತಿಳಿಸಿದ್ದು ಅವರ ಮನವಿಯನ್ನು ರವಿವಾರ ವಾಟ್ಸ್ಯಾಪ್, ಟ್ವಿಟರ್ ಹಾಗೂ ಇನ್‍ ಸ್ಟಾಗ್ರಾಂನಲ್ಲಿ ಅಪ್‍ ಲೋಡ್ ಮಾಡಲಾಗಿದೆ.

ಐಸಿಯುವಿನಲ್ಲಿರುವ ರೋಗಿಗಳ ಆರೈಕೆಗೆ ಆಸ್ಪತ್ರೆ ಹರಸಾಹಸ ಪಡುತ್ತಿದೆ. ಶ್ವಾಸಕೋಶದ ತೀವ್ರ ಸೋಂಕಿಗೆ ಒಳಗಾಗಿರುವ ಎಂಟು ರೋಗಿಗಳು ಆಸ್ಪತ್ರೆಯಲ್ಲಿದ್ದು ಅವರೆಲ್ಲರ ಕೋವಿಡ್ ವರದಿಗಾಗಿ ಕಾಯಲಾಗುತ್ತಿದೆ. ಈ 80 ಬೆಡ್ ಸಾಮರ್ಥ್ಯದ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಸಾಮರ್ಥ್ಯವಿದ್ದರೂ ಕೇವಲ ಐದು ವೈದ್ಯರಿರುವುದರಿಂದ ಇನ್ನೂ ಹೆಚ್ಚು ರೋಗಿಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ'' ಎಂದು ಅವರು ಹೇಳುತ್ತಾರೆ.

ಕರ್ತವ್ಯಕ್ಕೆ ಗೈರು ಹಾಜರಾಗಿರುವ ವೈದ್ಯರು ತಮ್ಮ ಗೈರಿಗೆ ತಲೆ ನೋವಿನಿಂದ ಹಿಡಿದು ವಯಸ್ಸಿನ ತನಕ ಎಲ್ಲಾ ನೆಪಗಳನ್ನು ಮುಂದೊಡ್ಡಿದ್ದಾರೆ, ಅದರೆ ಕೆಲವರು ಜ್ವರದಿಂದ ಬಳಲುತ್ತಿದ್ದಾರೆ ಎಂದು ಡಾ ಮತೀನ್ ಹೇಳಿದ್ದಾರೆ.

“ಈಗ ಬೆಳಿಗ್ಗೆ 7.30 ಆದರೆ ರಾತ್ರಿಯಂತೆ ಭಾಸವಾಗುತ್ತಿದೆ. ನಾನು ಬಿಟ್ಟರೆ ಇಲ್ಲಿ ಬೇರೆ ಯಾರೂ ಸಿಬ್ಬಂದಿಯಿಲ್ಲ.  ತಮ್ಮ ತಂದೆ, ತಾಯಿ, ಸೋದರನಿಗೆ  ಆಸ್ಪತ್ರೆಗಳಲ್ಲಿ ಬೆಡ್ ದೊರೆಯುತ್ತಿಲ್ಲ ಎಂದು ಹಲವರು ಕರೆ ಮಾಡುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ ಆಮ್ಲಜನಕ, ಬೆಡ್‍ ಗಳು ಹಾಗೂ ವೆಂಟಿಲೇಟರ್‍ ಗಳೂ ಇವೆ. ಇನ್ನೂ 30 ರೋಗಿಗಳನ್ನು ದಾಖಲಿಸಬಹುದು ಆದರೆ ವೈದ್ಯರೆಲ್ಲಿ ?, ನಿಮ್ಮ ದಿನದ ಸಮಯದ ಆರು ಗಂಟೆಗಳಷ್ಟೇ ಬೇಕು'' ಎಂದು ಅವರು ತಮ್ಮ ವೀಡಿಯೋ ಮನವಿಯಲ್ಲಿ  ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X