Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಗದಿತ ಕಾಲಾವಧಿಯ ಉದ್ಯೋಗ ಪದ್ಧತಿ ಜಾರಿ:...

ನಿಗದಿತ ಕಾಲಾವಧಿಯ ಉದ್ಯೋಗ ಪದ್ಧತಿ ಜಾರಿ: ಸರಕಾರದ ಆದೇಶವನ್ನು ಖಂಡಿಸಿದ ಎಐಟಿಯುಸಿ

ವಾರ್ತಾಭಾರತಿವಾರ್ತಾಭಾರತಿ6 July 2020 11:45 PM IST
share

ಬೆಂಗಳೂರು, ಜು.6: ರಾಜ್ಯ ಸರಕಾರವು ಅಧಿಸೂಚನೆಯನ್ನು ಹೊರಡಿಸಿ ಮಾದರಿ ಸ್ಥಾಯಿ ಆದೇಶಗಳಿಗೆ ತಿದ್ದುಪಡಿ ತಂದಿದ್ದು, ಈ ತಿದ್ದುಪಡಿಯಿಂದ ಉದ್ಯೋಗ ಭದ್ರತೆ ಹಾಗೂ ಕಾಯಂ ನೌಕರಿಗೆ ಮಾರಣಾಂತಿಕವಾಗಿ ಪರಿಣಮಿಸಲಿದೆ. ಹೀಗಾಗಿ, ಈ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಎಐಟಿಯುಸಿ ಒತ್ತಾಯಿಸಿದೆ.

ರಾಜ್ಯ ಸರಕಾರವು ಮಾಲಕರ ಒತ್ತಡಕ್ಕೆ ಮಣಿದು ಹಿಂಬಾಗಿಲಿನಿಂದ ಬಳಸಿ ಬಿಸಾಡುವ ನೀತಿಯನ್ನು ಜಾರಿಗೊಳಿಸಿದೆ. ಇಂಥ ದೂರಗಾಮಿ ಪರಿಣಾಮವಿರುವ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೊದಲು ರಾಜ್ಯದ ವಿಧಾನಸಭೆಯಲ್ಲಾಗಲಿ, ರಾಜಕೀಯ ಪಕ್ಷಗಳ ಜೊತೆಯಾಗಲಿ ಅಥವಾ ಕಾರ್ಮಿಕ ಸಂಘಟನೆಗಳ ಜೊತೆಯಲ್ಲಾಗಲಿ ಚರ್ಚಿಸದೆ ಜಾರಿಮಾಡಿರುವುದನ್ನು ಎಐಟಿಯುಸಿ ತೀವ್ರವಾಗಿ ಖಂಡಿಸಿದೆ.

ರಾಜ್ಯ ಸರಕಾರದ ಈ ಪ್ರತಿಗಾಮಿ ಕ್ರಮದ ಪರಿಣಾಮವಾಗಿ ಕೈಗಾರಿಕೆಗಳಲ್ಲಿ ನಿಗದಿತ ಕಾಲಾವಧಿಯ ಉದ್ಯೋಗಗಳು ಜಾರಿಯಲ್ಲಿದ್ದು, 30-35 ವರ್ಷ ಸೇವೆ ಸಲ್ಲಿಸುವ ಕಾರ್ಮಿಕನೊಬ್ಬ ಇದರ ಪರಿಣಾಮವಾಗಿ ತನ್ನ ಸೇವಾವಧಿಯಲ್ಲೇ 10-20 ಬಾರಿ ಉದ್ಯೋಗ ಬದಲಾಯಿಸಬೇಕಾಗುತ್ತದೆ.

ಇಂಥ ನೀತಿ ಜಾರಿಯಿಂದಾಗಿ ನಿರುದ್ಯೋಗ ಹೆಚ್ಚಲಿದೆ. ಕೆಲಸಗಾರರು ನಿಗದಿತ ಕಾಲಾವಧಿ ಒಪ್ಪಂದದ ತೂಗುಗತ್ತಿಯ ಕೆಳಗೆ ನಿರಂತರ ಭೀತಿಯಿಂದ ಕೆಲಸ ನಿರ್ವಹಿಸಬೇಕಿದ್ದು, ಹೆಚ್ಚಿನ ಕೂಲಿ ಮತ್ತು ಉತ್ತಮ ಸೇವಾ ಷರತ್ತುಗಳನ್ನು ಒತ್ತಾಯಿಸುವ ಅವರ ಸಾಮೂಹಿಕ ಚೌಕಾಸಿ ಹಕ್ಕುಗಳು ಕುಂಠಿತಗೊಳ್ಳಲಿದೆ. ಸರಕಾರದ ಈ ಕ್ರಮದಿಂದ ನಿರುದ್ಯೋಗ ಹೆಚ್ಚುವುದರ ಜೊತೆಗೆ ದುಡಿಯುವ ಕಾರ್ಮಿಕರ ಮತ್ತು ನೌಕರರ ಕೊಳ್ಳುವ ಶಕ್ತಿಯು ಕಡಿಮೆಯಾಗಲಿದೆ. ರಾಜ್ಯ ಸರಕಾರದ ಈ ಕ್ರಮವನ್ನು ಎಐಟಿಯುಸಿ ತೀವ್ರವಾಗಿ ಖಂಡಿಸಿ, ಒಂದು ವೇಳೆ ರಾಜ್ಯ ಸರಕಾರ ತನ್ನ ಕಾರ್ಮಿಕ-ವಿರೋಧಿ ಧೋರಣೆಯನ್ನು ಮುಂದುವರಿಸಿದರೆ, ಮುಂಬರುವ ದಿನಗಳಲ್ಲಿ ಕಾರ್ಮಿಕ ವರ್ಗವನ್ನು ಸಂಘಟಿಸಿ ತೀವ್ರ ಹೋರಾಟಕ್ಕೆ ಮುಂದಾಗಲಿದೆ ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ ಅವರು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X