ಜು.12ಕ್ಕೆ ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಜು.7: ಮುಂಬರುವ ರವಿವಾರ(ಜು.12)ದಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಮುಂದೂಡಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆದೇಶಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಜುಲೈ ತಿಂಗಳ ರವಿವಾರಗಳನ್ನು ಲಾಕ್ಡೌನ್ ದಿನಗಳನ್ನಾಗಿ ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಹಾಗೂ ತಾಂತ್ರಿಕ ಕಾರಣಗಳಿಗಾಗಿ ರಜಾ ದಿನಗಳನ್ನು ಹೊರತುಪಡಿಸಿ ಪರೀಕ್ಷೆ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮುಂದಿನ ದಿನಗಳ ಪರಿಸ್ಥಿತಿಯನ್ನು ಆಧರಿಸಿ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story