ಮಂಗಳೂರು: ಶರವು ದೇವಳ ಪ್ರವೇಶಕ್ಕೆ ನಿರ್ಬಂಧ
ಮಂಗಳೂರು, ಜು.8: ನಗರದಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶರವು ಮಹಾಗಣಪತಿ ದೇವಸ್ಥಾನಕ್ಕೆ ಜು.8ರಿಂದ ಭಕ್ತಾದಿಗಳಿಗೆ ಪ್ರವೇಶವಕಾಶ ನಿರಾಕರಿಸಲಾಗಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.
ಮಾರ್ಚ್ನಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾದಾಗ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಬಳಿಕ ಅನ್ ಲಾಕ್ ಘೋಷಣೆಯಾಗುತ್ತಿದ್ದಂತೆ ಜೂ.14ರಿಂದ ಶರವು ದೇವಳ ಭಕ್ತರ ದರ್ಶನಕ್ಕೆ ತೆರೆದುಕೊಂಡಿತ್ತು. ಇದೀಗ ನಗರ ಪ್ರದೇಶದಲ್ಲಿ ಕೊರೋನ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮುಂದಿನ ಸೂಚನೆಯ ತನಕ ಶರವು ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಸಂದರ್ಭ ಭಕ್ತರ ಪರವಾಗಿ ಎಂದಿನಂತೆ ತ್ರಿಕಾಲ ಪೂಜೆ, ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆ ನೆರವೇರಲಿದೆ ಎಂದು ದೇವಸ್ಥಾನದ ಶಿಲೆ ಶಿಲೆ ಆಡಳಿತ ಮೊಕ್ತೇಸರ ಶರವು ರಾಘವೇಂದ್ರ ಶಾಸಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story