Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೃತೀಯ ಲಿಂಗ ಸಮುದಾಯಕ್ಕೆ ‘ಭರವಸೆಯ...

ತೃತೀಯ ಲಿಂಗ ಸಮುದಾಯಕ್ಕೆ ‘ಭರವಸೆಯ ಯೋಜನೆ' ಆಶಾಕಿರಣ: ಕೆ.ರತ್ನಪ್ರಭಾ

ವಾರ್ತಾಭಾರತಿವಾರ್ತಾಭಾರತಿ8 July 2020 11:52 PM IST
share

ಬೆಂಗಳೂರು, ಜು.8: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯಲ್ಲಿ ತೃತೀಯ ಲಿಂಗದ ಸಮುದಾಯಕ್ಕೆ ‘ಭರವಸೆಯ ಯೋಜನೆ’ (ಪ್ರಾಜೆಕ್ಟ್ ಹೋಪ್) ಮೂಲಕ ಡೈರಿ ಫಾರ್ಮಿಂಗ್ ನಡೆಸಲು ಕೌಶಲ್ಯ ತರಬೇತಿ ನೀಡಿ, ಸೌಲಭ್ಯ ಒದಗಿಸಿಕೊಡಲಾಗಿದೆ.

ಇಂದು ಈ ಯೋಜನೆಯ ಸಮ್ಮೇಳನ ಸಮಾರಂಭವನ್ನು ಆನ್‍ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು. ಈ  ಕಾನ್ಫರೆನ್ಸ್ ನಲ್ಲಿ ಕೆಎಸ್‍ಡಿಎ ಅಧ್ಯಕ್ಷೆ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಈ ವಿನೂತನ ಯೋಜನೆಗೆ ತೃತೀಯ ಲಿಂಗದ ಸಮುದಾಯವನ್ನು ಆಯ್ಕೆ ಮಾಡಿಕೊಂಡಿದ್ದು ಅವರಿಗೆ ಗೌರವಯುತ ಜೀವನ ನಡೆಸಲು ಡೈರಿ ಫಾರ್ಮಿಂಗ್ ಕುರಿತ ತರಬೇತಿ ನೀಡಲಾಗಿದೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ‘ಕಾಲಿನ್ಸ್ ಏರೋಸ್ಪೇಸ್ ಇಂಡಿಯಾ’ ಹೊತ್ತಿದ್ದು, ಆರೆಂಜ್ ಟೆಕ್ ವತಿಯಿಂದ ಈ ಸಮುದಾಯಕ್ಕೆ ಕೌಶಲ್ಯ ತರಬೇತಿ ನೀಡಲಾಗಿದೆ.

ಇಂದು ಈ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ರತ್ನಪ್ರಭಾ, ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ತೃತೀಯ ಲಿಂಗದ ಸಮುದಾಯದವರು ಇಚ್ಚಿಸುತ್ತಾರೆ. ಆದರೆ ಅವರಿಗೆ ಶಿಕ್ಷಣ ಹಾಗೂ ಕೌಶಲ್ಯದ ಕೊರತೆಯಿಂದ ಅವರು ಉದ್ಯೋಗ ವಂಚಿತರಾಗುತ್ತಿದ್ದಾರೆ ಎಂದರು.

ಕಾಲಿನ್ಸ್ ಏರೋಸ್ಪೇಸ್ ಹಾಗೂ ಆರೆಂಜ್ ಟೆಕ್ ಅವರ ಈ ಹೆಜ್ಜೆ ಅತ್ಯಂತ ಶ್ಲಾಘನೀಯ. ಸಮಾಜದಲ್ಲಿ ತೃತೀಯ ಲಿಂಗದ ಸಮುದಾಯದವರೂ ಗೌರವಯುತವಾದ ಜೀವನ ನಡೆಸಲು ಇವರು ಅನುವು ಮಾಡಿಕೊಟ್ಟಿದ್ದಾರೆ. ಅದಕ್ಕಾಗಿ ಕೋಲಾರದಲ್ಲಿರುವ ಸಂಕಲ್ಪ ಎಂಬ ಟ್ರಸ್ಟ್ ನನ್ನು ಆಯ್ಕೆ ಮಾಡಿಕೊಂಡು ಅವರಿಗೆ ಜಾನುವಾರುಗಳ ಸಾಕಾಣಿಕೆ ಸಂಬಂಧ ತರಬೇತಿ ನೀಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈಗ ಈ ಸಮುದಾಯದ ಕೆಲವರು ಜಾನುವಾರುಗಳನ್ನು ಸಾಕುವ ಮೂಲಕ ಡೈರಿಗಳಿಗೆ ಹಾಲು ಪೂರೈಕೆ ಮಾಡುವುದು, ಹಾಲಿನಿಂದ ಇತರೆ ಉತ್ಪನ್ನ ತಯಾರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಕಾರ್ಪೋರೇಟ್ ಸಂಸ್ಥೆಗಳು ಇಂಥ ಉಪಯುಕ್ತ ಯೋಜನೆಗಳಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಸಹಾಯ ಹಸ್ತ ಚಾಚಬೇಕು. ಸರಕಾರ ಇಂಥವರಿಗೆ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ರತ್ನಪ್ರಭಾ ಭರವಸೆ ನೀಡಿದರು.

ಕಾಲಿನ್ಸ್ ಏರೋಸ್ಪೇಸ್ ಇಂಡಿಯಾದ ಹಾಗೂ ಸಿಎಸ್‍ಆರ್ ಮುಖ್ಯಸ್ಥ ಅಮಿತ್ ಸಾವರ್ಕರ್, ಎನ್‍ಎಸ್‍ಡಿಸಿ ಎಂಗೇಜ್ಮೆಂಟ್ ಸೌತ್‍ನ ಮುಖ್ಯಸ್ಥ ಗೌರವ್ ಕಪೂರ್, ಕಾಲಿನ್ಸ್ ಏರೋಸ್ಪೇಸ್ ಇಂಡಿಯಾದ ಎಂಡಿ ಪರಾಗ್ ವಾಧಾವಾ, ಯುಎಸ್‍ಎ ಗ್ಲೋಬಲ್ ಡೈರೆಕ್ಟರ್ ಹಾಗೂ ಸಿಎಸ್‍ಆರ್ ಕಾಲಿನ್ಸ್ ಏರೋಸ್ಪೇಸ್‍ನ ಕ್ಯಾರಿ ರೀಡರ್ ಹಾಗೂ ಸಂಕಲ್ಪ ಟ್ರಸ್ಟ್‍ನ ಫಲಾನುಭವಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X