Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಳ್ಳಿಗಳಿಗೆ ತೆರಳಬೇಡಿ, ತಾಳ್ಮೆಯಿಂದ...

ಹಳ್ಳಿಗಳಿಗೆ ತೆರಳಬೇಡಿ, ತಾಳ್ಮೆಯಿಂದ ಸರಕಾರದೊಂದಿಗೆ ಸಹಕರಿಸಿ: ಜನತೆಗೆ ಸಿಎಂ ಯಡಿಯೂರಪ್ಪ ಮನವಿ

ವಾರ್ತಾಭಾರತಿವಾರ್ತಾಭಾರತಿ9 July 2020 8:40 PM IST
share
ಹಳ್ಳಿಗಳಿಗೆ ತೆರಳಬೇಡಿ, ತಾಳ್ಮೆಯಿಂದ ಸರಕಾರದೊಂದಿಗೆ ಸಹಕರಿಸಿ: ಜನತೆಗೆ ಸಿಎಂ ಯಡಿಯೂರಪ್ಪ ಮನವಿ

ಬೆಂಗಳೂರು, ಜು. 9: `ಎಲ್ಲ ಶಾಸಕರು ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಜಿಲ್ಲೆ, ತಾಲೂಕು ಆಸ್ಪತ್ರೆ, ಕೋವಿಡ್ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳು ಸರಿಯಿದೆಯೇ ಎಂದು ಪರಿಶೀಲಿಸಿ. ಏನಾದರೂ ಲೋಪದೋಷಗಳಿದ್ದರೆ ನನ್ನ ಗಮನಕ್ಕೆ ತನ್ನಿ, ಸರಿಪಡಿಸಲು ಕ್ರಮ ವಹಿಸಲಾಗುವುದು' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಎಲ್ಲ ಶಾಸಕರಿಗೆ ಮನವಿ ಮಾಡಿದ್ದಾರೆ.

ಗುರುವಾರ ಸಂಪುಟ ಸಭೆ ಬಳಿಕ ತುಮಕೂರು ರಸ್ತೆಯಲ್ಲಿ ಬೆಂಗಳೂರು ಅಂತರ್‍ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಿರುವ 10,100 ಹಾಸಿಗೆಗಳ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಕೊರೋನ ಸೋಂಕು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಹಾಗೂ ಅಗತ್ಯವುಳ್ಳವರಿಗೆ ಸೂಕ್ತ ಚಿಕಿತ್ಸೆಯನ್ನು ಸಕಾಲದಲ್ಲಿ ಒದಗಿಸಿ, ಜೀವರಕ್ಷಣೆ ಮಾಡುವುದು ಹಾಗೂ ಕೋವಿಡ್ ನಿಯಂತ್ರಿಸುವುದು ನಮ್ಮ ಆದ್ಯತೆ ಆಗಬೇಕು ಎಂದರು.

ಹಳ್ಳಿಗಳಿಗೆ ತೆರಳಬೇಡಿ: ಜನರು ಅನಗತ್ಯವಾಗಿ ಬೆಂಗಳೂರಿನಿಂದ ಹಳ್ಳಿಗಳತ್ತ ತೆರಳಬಾರದು. ಹಳ್ಳಿಗಳಲ್ಲಿ ಸೋಂಕು ಹಬ್ಬದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜನತೆ ಯಾವುದೇ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬಾರದು. ಸ್ವಲ್ಪ ತಾಳ್ಮೆಯಿಂದ ಸರಕಾರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ ಎಂದ ಅವರು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟ ಕೂಡಲೇ ಆಂಬ್ಯುಲೆನ್ಸ್ ಬರುವುದು ವಿಳಂಬವಾದಲ್ಲಿ, ಅಥವಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ವಿನಾಕಾರಣ ನಿರಾಕರಿಸಿದಲ್ಲಿ ನಮ್ಮ ಗಮನಕ್ಕೆ ತನ್ನಿ. ಕ್ರಮ ಕೈಗೊಳ್ಳುತ್ತೇವೆ ಎಂದರು.

ಒಗ್ಗಟ್ಟು ಅಗತ್ಯ: ನಾವೆಲ್ಲರೂ ಒಟ್ಟಾಗಿ ಕೋವಿಡ್ ಸೋಂಕು ನಿಯಂತ್ರಿಸೋಣ. ಇದು ಒಂದೆರಡು ದಿನದ ಹೋರಾಟವಲ್ಲ. ಸತತ ಪ್ರಯತ್ನ, ನಿಮ್ಮೆಲ್ಲರ ಸಹಕಾರ, ಬೆಂಬಲ, ಹಾಗೂ ಸಾಮೂಹಿಕ ಇಚ್ಛಾಶಕ್ತಿಯೊಂದಿಗೆ ಕೋವಿಡ್ ವಿರುದ್ಧ ಜಯಿಸೋಣ ಎಂದ ಯಡಿಯೂರಪ್ಪ, ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದರು.

ಬೆಂಗಳೂರು ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. 10,100 ಹಾಸಿಗೆ ಸಾಮರ್ಥ್ಯದ ಈ ಕೋವಿಡ್ ಕೇರ್ ಸೆಂಟರ್‍ನಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ರತಿ ನೂರು ಮಂದಿಗೆ ಒಬ್ಬ ವೈದ್ಯ, ಇಬ್ಬರು ನರ್ಸ್ ಗಳು, ಒಬ್ಬ ಸಹಾಯಕ, ಒಬ್ಬರು ಸ್ವಚ್ಛತಾ ಸಿಬ್ಬಂದಿ ಮತ್ತು ಇಬ್ಬರು ಬಿಬಿಎಂಪಿ ಮಾರ್ಷಲ್‍ಗಳನ್ನು ನಿಯೋಜಿಸಲಾಗುತ್ತಿದೆ.

ವೈದ್ಯರು, ನರ್ಸ್, ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಬಿಬಿಎಂಪಿ ಮಾರ್ಷಲ್ ಮತ್ತು ಪೊಲೀಸರು ಸೇರಿದಂತೆ ಒಟ್ಟು 2,200 ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು. ಸೊಂಕಿತರಿಗೆ ಉತ್ತಮ ಊಟೋಪಚಾರದ ವ್ಯವಸ್ಥೆ, ಮನರಂಜನೆಗಾಗಿ ಟಿವಿ, ಕೇರಂ ಬೋರ್ಡ್, ಚೆಸ್ ಮತ್ತಿತರ ಅನುಕೂಲಗಳನ್ನು ಸಹ ಕಲ್ಪಿಸಲಾಗುತ್ತಿದೆ. ಇವರ ಆರೈಕೆ ಹಾಗೂ ಮೇಲ್ವಿಚಾರಣೆಗೆ ನಿಯೋಜಿಸುವ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಸಾಮಗ್ರಿ, ತುರ್ತು ಚಿಕಿತ್ಸಾ ಸೌಲಭ್ಯಗಳು, ಐಸಿಯು ಘಟಕ, ಇಸಿಜಿ, ಆಕ್ಸಿಜನ್ ಸಪೋರ್ಟ್, ಪ್ರಥಮ ಚಿಕಿತ್ಸೆ, ಫಾರ್ಮಸಿ ಮೊದಲಾದ ಸೌಲಭ್ಯಗಳನ್ನು ಒದಗಿಸಲಾಗುವುದು.

ಜೊತೆಗೆ ಸಮೀಪದ ಆಸ್ಪತ್ರೆಯೊಂದಿಗೆ ಸಂಯೋಜನೆ ಹಾಗೂ ದಿನದ 24 ಗಂಟೆಯೂ ಇವುಗಳನ್ನು ಮೇಲ್ವಿಚಾರಣೆ ನಡೆಸುವ ನಿಯಂತ್ರಣಾ ಕೊಠಡಿ ಸ್ಥಾಪಿಸಲಾಗುತ್ತಿದೆ. ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ಸೋಂಕಿತರ ಬೆಡ್ ಶೀಟ್, ಬ್ಲಾಂಕೆಟ್ ತೊಳೆಯಲು ಲಾಂಡ್ರಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಯಾವುದೇ ರೋಗ ಲಕ್ಷಣ ಇಲ್ಲದ ಹಾಗೂ ಅತಿ ಕಡಿಮೆ ಲಕ್ಷಣ ಹೊಂದಿರುವ ಸೋಂಕಿತರ ಆರೈಕೆ ಮಾಡಲಾಗುವುದು ಎಂದರು.

ನಗರದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಅಗತ್ಯವಿರುವ ವ್ಯಕ್ತಿಗಳಿಗೆ ಹಾಸಿಗೆ ಒದಗಿಸಲು ಅನುವಾಗುವಂತೆ ಈ ವ್ಯವಸ್ಥೆ ರೂಪಿಸಲಾಗಿದೆ. ಅನ್‍ಲಾಕ್ ಪ್ರಕ್ರಿಯೆ ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರಕಾರ ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದೆ. ಲೋಪದೋಷಗಳು ಗಮನಕ್ಕೆ ಬಂದ ಕೂಡಲೇ ಅವುಗಳನ್ನು ಸರಿಪಡಿಸುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X