Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾಂಕಾಂಗ್ ನಾಗರಿಕರಿಗೆ ಆಶ್ರಯ ನೀಡಲು...

ಹಾಂಕಾಂಗ್ ನಾಗರಿಕರಿಗೆ ಆಶ್ರಯ ನೀಡಲು ಮುಂದಾದ ಆಸ್ಟ್ರೇಲಿಯ

ಗಡಿಪಾರು ಒಪ್ಪಂದ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ9 July 2020 11:25 PM IST
share
ಹಾಂಕಾಂಗ್ ನಾಗರಿಕರಿಗೆ ಆಶ್ರಯ ನೀಡಲು ಮುಂದಾದ ಆಸ್ಟ್ರೇಲಿಯ

ಹಾಂಕಾಂಗ್ ನಾಗರಿಕರಿಗೆ ಆಶ್ರಯ ನೀಡಲು ಮುಂದಾದ ಆಸ್ಟ್ರೇಲಿಯ

ಗಡಿಪಾರು ಒಪ್ಪಂದ ಸ್ಥಗಿತ

ಸಿಡ್ನಿ (ಆಸ್ಟ್ರೇಲಿಯ), ಜು. 9: ಹಾಂಕಾಂಗ್ ನಾಗರಿಕರು ಆಸ್ಟ್ರೇಲಿಯದಲ್ಲಿ ಹೊಸ ಜೀವನವನ್ನು ಆರಂಭಿಸಲು ಸಾಧ್ಯವಾಗುವಂಥ ಹಲವಾರು ಉಪಕ್ರಮಗಳನ್ನು ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮೊರಿಸನ್ ಗುರುವಾರ ಘೋಷಿಸಿದ್ದಾರೆ.

 ಹಾಂಕಾಂಗ್ ಪ್ರಜೆಗಳ ವೀಸಾಗಳನ್ನು ಐದು ವರ್ಷಗಳಿಗೆ ವಿಸ್ತಿರಿಸುವುದೂ ಇದರಲ್ಲಿ ಸೇರಿದೆ. ಏಶ್ಯದ ಆರ್ಥಿಕ ವ್ಯವಹಾರಗಳ ಕೇಂದ್ರವಾಗಿರುವ ಹಾಂಕಾಂಗ್ ಮೇಲೆ ಚೀನಾವು ಇತ್ತೀಚೆಗೆ ಕಠಿಣ ರಾಷ್ಟ್ರೀಯ ಭದ್ರತಾ ಕಾನೂನನ್ನು ಹೇರಿದ ಬಳಿಕ ಆಸ್ಟ್ರೇಲಿಯ ಈ ಕ್ರಮಕ್ಕೆ ಮುಂದಾಗಿದೆ.

ಅದೇ ವೇಳೆ, ಹಾಂಕಾಂಗ್ ಜೊತೆಗಿನ ಗಡಿಪಾರು ಒಪ್ಪಂದವನ್ನೂ ಮೊರಿಸನ್ ಅಮಾನತಿನಲ್ಲಿಟ್ಟಿದ್ದಾರೆ. ಹಾಂಕಾಂಗ್ ನ ನೂತನ ಕಾನೂನಿನ ಪ್ರಕಾರ, ಅಲ್ಲಿನ ಆರೋಪಿಗಳನ್ನು ಕಮ್ಯುನಿಸ್ಟ್ ಪಕ್ಷದ ನಿಯಂತ್ರಣದಲ್ಲಿರುವ ನ್ಯಾಯಾಲಯಗಳಲ್ಲಿ ವಿಚಾರಣೆ ಎದುರಿಸುವುದಕ್ಕಾಗಿ ಚೀನಾಕ್ಕೆ ಕಳುಹಿಸಬಹುದಾಗಿದೆ.

ಕಳೆದ ವಾರ ಹಾಂಕಾಂಗ್ ನಲ್ಲಿ ಜಾರಿಗೆ ಬಂದಿರುವ ರಾಷ್ಟ್ರೀಯ ಭದ್ರತಾ ಕಾನೂನು ಸ್ಥಿತಿಗತಿಗಳಲ್ಲಿ ಮೂಲಭೂತ ಬದಲಾವಣೆಗಳನ್ನು ಮಾಡಿದೆ. ಹಾಗಾಗಿ, ಆಸ್ಟ್ರೇಲಿಯವು ಅದರೊಂದಿಗಿನ ಗಡಿಪಾರು ಒಪ್ಪಂದವನ್ನು ಅಮಾನತಿನಲ್ಲಿಡುವುದು ಎಂದು ಮೊರಿಸನ್ ನುಡಿದರು.

‘‘ಎಲ್ಲಿಯಾದರೂ ಹೊಸ ಜೀವನ ಆರಂಭಿಸುವುದಕ್ಕಾಗಿ ಹೊರ ಹೋಗಲು ಬಯಸುವ, ತಮ್ಮ ಕೌಶಲಗಳನ್ನು ಮತ್ತು ಉದ್ಯಮಗಳನ್ನು ಹೊರಗೆ ಸಾಗಿಸಲು ಬಯಸುವ ಹಾಂಕಾಂಗ್ ಪ್ರಜೆಗಳಿರಬಹುದು’’ ಎಂದು ಮೊರಿಸನ್ ಹೇಳಿದರು.

ಈಗಾಗಲೇ ಆಸ್ಟ್ರೇಲಿಯದಲ್ಲಿರುವ ಹಾಂಕಾಂಗ್ ಪ್ರಜೆಗಳು ಆಸ್ಟ್ರೇಲಿಯದಲ್ಲೇ ಉಳಿಯಲು ಸಹಾಯ ಮಾಡುವ ವೀಸಾ ಉಪಕ್ರಮಗಳನ್ನು ಅವರು ಘೋಷಿಸಿದರು. ಆಸ್ಟೇಲಿಯದಲ್ಲಿ ಪದವಿ ಪಡೆಯುವ ಹಾಂಕಾಂಗ್ ವಿದ್ಯಾರ್ಥಿಗಳು ಆಸ್ಟ್ರೇಲಿಯದಲ್ಲೇ 5 ವರ್ಷ ಉಳಿಯುವ ಅವಕಾಶವನ್ನು ಪಡೆಯುತ್ತಾರೆ ಹಾಗೂ ಬಳಿಕ ಅವರು ಖಾಯಂ ವಾಸ್ತವ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಮೊರಿಸನ್ ಹೇಳಿದರು.

ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ: ಚೀನಾ

ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮೊರಿಸನ್ ರ ಉಪಕ್ರಮಗಳನ್ನು ಖಂಡಿಸಿರುವ ಆಸ್ಟ್ರೇಲಿಯದಲ್ಲಿರುವ ಚೀನಾದ ರಾಯಭಾರ ಕಚೇರಿಯು, ‘‘ಅದು ಅಂತಾರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ ಹಾಗೂ ಚೀನಾದ ಆಂತರಿಕ ವ್ಯವಹಾರಗಳಲ್ಲಿ ಆಸ್ಟ್ರೇಲಿಯ ನಡೆಸುತ್ತಿರುವ ಹಸ್ತಕ್ಷೇಪವಾಗಿದೆ’’ ಎಂದು ಹೇಳಿದೆ.

ಚೀನಾವು ಆಸ್ಟ್ರೇಲಿಯದ ಆಧಾರರಹಿತ ಆರೋಪಗಳು ಮತ್ತು ಉಪಕ್ರಮಗಳನ್ನು ಬಲವಾಗಿ ಖಂಡಿಸುತ್ತದೆ ಹಾಗೂ ವಿರೋಧಿಸುತ್ತದೆ’’ ಎಂದು ಚೀನಾ ರಾಯಭಾರ ಕಚೇರಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X