ರತ್ನಾವತಿ ಸಂಜೀವ ಆಚಾರ್ಗೆ ಕಲಾಪುರಸ್ಕಾರ
ಮಂಗಳೂರು, ಜು.11: ಸಂಗೀತ ವಿದುಷಿ ರತ್ನಾವತಿ ಸಂಜೀವ ಆಚಾರ್ ಕೋಡಿಕಲ್ ಅವರಿಗೆ ಸಂಸ್ಕಾರ ಭಾರತಿ ಕಲಾಪುರಸ್ಕಾರ ನೀಡಿ ಗೌರವಿಸಲಾಯಿತು.
ನಗರದ ನಾಗುರಿ ಗರೋಡಿಯ ಅಟ್ಟಣೆ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿದ ಸಮಾರಂಭದಲ್ಲಿ ರತ್ನಾವತಿ ಸಂಜೀವ ಆಚಾರ್ಗೆ ಕಲಾಪುರಸ್ಕಾರ ನೀಡಲಾಯಿತು.
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ.ಸತೀಶ್ ರಾವ್, ರಾಜ್ಯ ಧಾರ್ಮಿಕ ಪರಿಷತ್ನ ಸದಸ್ಯರಾದ ಸೂರ್ಯನಾರಾಯಣ ಭಟ್ ಕಶೆಕೋಡಿ, ಕಸಾಪ ಜಿಲ್ಲಾ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ, ಸಂಸ್ಕಾರ ಭಾರತೀಯ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಸಂಸ್ಕಾರ ಭಾರತೀಯ ಮಂಗಳೂರು ಘಟಕದ ಅಧ್ಯಕ್ಷ ಪುರುಷೋತ್ತಮ ಭಂಡಾರಿ, ಪ್ರಾಂತ ಕಾರ್ಯದರ್ಶಿ ನಾಗರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Next Story