ಚಲನಚಿತ್ರ ನಿರ್ಮಾಣದಲ್ಲಿ ನಷ್ಟ: ಬ್ಯಾಂಕ್ ನಿವೃತ್ತ ಉದ್ಯೋಗಿ ಆತ್ಮಹತ್ಯೆ
ಕುಂದಾಪುರ, ಜು.11: ಚಲನಚಿತ್ರ ನಿರ್ಮಾಣಕ್ಕೆ ಹೂಡಿದ ಹಣ ವಾಪಾಸ್ಸು ಸಿಗದ ಹಿನ್ನೆಲೆಯಲ್ಲಿ ಮನನೊಂದ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.11ರಂದು ನಸುಕಿನ ವೇಳೆ ನಡೆದಿದೆ.
ಮೃತರನ್ನು ಬೀಜಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ನಿವಾಸಿ ನಾಗೇಶ್ ಕುಮಾರ್(64) ಎಂದು ಗುರುತಿಸಲಾಗಿದೆ. ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿರುವ ಇವರು, 2018ರಲ್ಲಿ ಭೂಮಿಕ ಪ್ರೊಡಕ್ಷನ್ ಹೆಸರಿನಲ್ಲಿರುವ ಭರತ್ ನಾವುಂದ ನಿರ್ದೇಶಿಸಿದ ಚಲನಚಿತ್ರಕ್ಕೆ 28 ಲಕ್ಷ ರೂ. ಬಂಡವಾಳ ಹಾಕಿದ್ದರು. ಆದರೆ ಈ ಹಣವು ವಾಪಾಸ್ಸು ಸಿಗದ ಕಾರಣ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾದ ಇವರು, ‘ನನ್ನನ್ನು ಕ್ಷಮಿಸಿ, ಎಲ್ಲರಿಗೂ ಒಳ್ಳೆಯದಾಗಲಿ. ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಡೆತ್ನೋಟ್ ಬರೆದಿಟ್ಟು ಮನೆ ಎದುರಿನ ಲಕ್ಷ್ಮೀ ಗ್ಲಾಸ್ ಫ್ಲೈವುಡ್ ಅಂಗಡಿಯ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story