Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಮನೆ ಮನೆ ಸಮೀಕ್ಷೆ...

ಬೆಂಗಳೂರಿನಲ್ಲಿ ಮನೆ ಮನೆ ಸಮೀಕ್ಷೆ ಪೂರ್ಣ: ಕೊರೋನ ಭೀತಿಯಲ್ಲಿ ಸಾವಿರಾರು ಕುಟುಂಬಗಳು

ವಾರ್ತಾಭಾರತಿವಾರ್ತಾಭಾರತಿ11 July 2020 11:25 PM IST
share
ಬೆಂಗಳೂರಿನಲ್ಲಿ ಮನೆ ಮನೆ ಸಮೀಕ್ಷೆ ಪೂರ್ಣ: ಕೊರೋನ ಭೀತಿಯಲ್ಲಿ ಸಾವಿರಾರು ಕುಟುಂಬಗಳು

ಬೆಂಗಳೂರು, ಜು.11: ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಬಿಬಿಎಂಪಿಯು ಆರೋಗ್ಯ ಸಮೀಕ್ಷೆ ನಡೆಸಿತ್ತು. ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುವ ಸರಕಾರಿ, ಅನುದಾನಿತ, ಖಾಸಗಿ ಮತ್ತು ಪಾಲಿಕೆ ಶಾಲೆಗಳ ಶಿಕ್ಷಕರನ್ನೊಳಗೊಂಡ ಸಮೀಕ್ಷಕರ ತಂಡವನ್ನು ರಚಿಸಲಾಗಿತ್ತು. 14 ಸಾವಿರಕ್ಕಿಂತ ಹೆಚ್ಚು ಸಮೀಕ್ಷರು ಮನೆ-ಮನೆಗೆ ತೆರಳಿ ಜನರ ಆರೋಗ್ಯದ ಮಾಹಿತಿ ಕಲೆ ಹಾಕಿದ್ದಾರೆ.

ಕಳೆದ ಮೇ 10 ರಿಂದ ಆರಂಭವಾದ ಸಮೀಕ್ಷೆಯು ಜೂ. 24ರಂದು ಪೂರ್ಣಗೊಂಡಿದೆ. ಒಟ್ಟು 7340 ತಂಡಗಳು ಮನೆ ಮನೆಗೆ ತೆರಳಿ ಕುಟುಂಬ ಸದಸ್ಯರ ಆರೋಗ್ಯ ಮಾಹಿತಿ ಸಂಗ್ರಹಿಸಿವೆ. ಐಎಲ್‍ಐ, ಸಾರಿ, ಅನ್ಯಕಾಯಿಲೆಯಿಂದ ನರಳುತ್ತಿರುವವರು, ವಯೋವೃದ್ಧರು, ಗರ್ಭಿಣಿಯರು, ಮಕ್ಕಳಿಗೆ ಹಾಲುಣಿಸುವ ತಾಯಂದಿರ ವಿವರ ಮತ್ತು ಸಂಪರ್ಕ ಸಂಖ್ಯೆಯನ್ನು ಕಲೆ ಹಾಕಲಾಗಿದೆ. ಈ ಸಾರ್ವತ್ರಿಕ ಆರೋಗ್ಯ ಸಮೀಕ್ಷೆ ವರದಿಯನ್ನು ಪಾಲಿಕೆಯ ಆರೋಗ್ಯ ವಿಭಾಗಕ್ಕೆ ಸಲ್ಲಿಸಲಾಗಿದೆ.

ಪ್ರಸ್ತುತ ಆರೋಗ್ಯ ವಿಭಾಗದಲ್ಲಿನ ವೈದ್ಯಾಧಿಕಾರಿಗಳ ತಂಡವು ಸೋಂಕಿನ ಭೀತಿಯಲ್ಲಿರುವ ಕುಟುಂಬಗಳು, ವಯೋವೃದ್ಧರು, ಗರ್ಭಿಣಿಯರು, ಬಾಣಂತಿಯರು, ಐಎಲ್‍ಐ, ಸಾರಿ ಮತ್ತು ಅನ್ಯ ಕಾಯಿಲೆಗಳಿಂದ ನರಳುತ್ತಿರುವವರನ್ನು ಆರೋಗ್ಯ ತಪಾಸಣೆಗೊಳಪಡಿಸುತ್ತಿದೆ. ಐಎಲ್‍ಐ, ವಯೋವೃದ್ಧರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್‍ಗೆ ತುತ್ತಾಗುತ್ತಿದ್ದಾರೆ. ಹೀಗಾಗಿ, ಇಂಥವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ.

ಮಾಹಿತಿ ಸಂಗ್ರಹ: ಸಮೀಕ್ಷಕರ ತಂಡವು ಪಾಲಿಕೆ ವ್ಯಾಪ್ತಿಯ 27 ವಿಧಾನಸಭಾ ಕ್ಷೇತ್ರಗಳಲ್ಲಿನ ಕುಟುಂಬಗಳ ಆರೋಗ್ಯದ ಸ್ಥಿತಿಯ ಮಾಹಿತಿ ಸಂಗ್ರಹಿಸಿವೆ. ಈ ಪೈಕಿ 21 ಕ್ಷೇತ್ರಗಳಲ್ಲಿ ತಲಾ 20 ಸಾವಿರಕ್ಕಿಂತ ಹೆಚ್ಚು ಕುಟುಂಬಗಳು ಸೋಂಕಿನ ಅಪಾಯದಲ್ಲಿರುವುದು ಗೊತ್ತಾಗಿದೆ. ಬ್ಯಾಟರಾಯನಪುರ, ಬೆಂಗಳೂರು ದಕ್ಷಿಣ, ಮಹದೇವಪುರ, ಕೆ.ಆರ್.ಪುರ, ರಾಜರಾಜೇಶ್ವರಿನಗರ, ಸರ್ವಜ್ಞನಗರ, ಬೊಮ್ಮನಹಳ್ಳಿ, ಪದ್ಮನಾಭನಗರ, ಯಶವಂತಪುರ, ದಾಸರಹಳ್ಳಿ, ಮಲ್ಲೇಶ್ವರದ ಕ್ಷೇತ್ರದಲ್ಲಿ ಹೆಚ್ಚಿನ ಕುಟುಂಬಗಳು ಅಪಾಯದ ಸ್ಥಿತಿಯಲ್ಲಿವೆ.

1.92 ಲಕ್ಷ ಮಂದಿಗೆ ಅನ್ಯ ಕಾಯಿಲೆ: ನಗರದಲ್ಲಿ 33,38,959 ಮನೆಗಳಿದ್ದು, ಈ ಪೈಕಿ ಸಮೀಕ್ಷರು ಆರೋಗ್ಯದ ಮಾಹಿತಿ ಕಲೆ ಹಾಕಲು 32.13 ಲಕ್ಷ ಮನೆಗಳಿಗೆ ಭೇಟಿ ಕೊಟ್ಟಿದ್ದರು. 30.18 ಲಕ್ಷ ಕುಟುಂಬಗಳು ಮಾತ್ರ ಆರೋಗ್ಯದ ಮಾಹಿತಿ ಹಂಚಿಕೊಂಡಿವೆ. ಸಮೀಕ್ಷಕರು ಭೇಟಿ ನೀಡಿದ್ದ ವೇಳೆ 1.99 ಮನೆಗಳಿಗೆ ಬೀಗ ಹಾಕಲಾಗಿತ್ತು. ಸಮೀಕ್ಷರ ತಂಡವು ನಡೆಸಿದ ಸರ್ವೆಯಲ್ಲಿ 1.92 ಲಕ್ಷ ಮಂದಿ ಅನ್ಯ ಕಾಯಿಲೆಗಳಿಂದ ನರಳುತ್ತಿರುವುದು ಕಂಡು ಬಂದಿದೆ. ಇದಲ್ಲದೆ, 7.43 ಲಕ್ಷ ವಯೋವೃದ್ಧರನ್ನು ಗುರುತಿಸಲಾಗಿದೆ. 37,017 ಮಂದಿ ಗರ್ಭಿಣಿಯರು, ಮಕ್ಕಳಿಗೆ ಹಾಲುಣಿಸುವ ತಾಯಂದಿರು ಪತ್ತೆಯಾಗಿದ್ದಾರೆ.

11,051 ಮಂದಿಗೆ ಸೋಂಕಿನ ಲಕ್ಷಣ: ಆರೋಗ್ಯ ಸಮೀಕ್ಷೆಯಲ್ಲಿ ಒಟ್ಟು 11,051 ಮಂದಿ ಕೆಮ್ಮು, ನೆಗಡಿ, ಶೀತ ಜ್ವರ ಮತ್ತುತೀವ್ರ ಉಸಿರಾಟದ ಸಮಸ್ಯೆಯಿಂದ ನರಳುತ್ತಿರುವುದು ಕಂಡು ಬಂದಿದೆ. ಇವರಲ್ಲಿ ಕೊರೋನ ಸೋಂಕಿನ ಲಕ್ಷಣಗಳಿರುವುದು ಪತ್ತೆಯಾಗಿದೆ. ಹೀಗಾಗಿ, ಇವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈಗಾಗಲೇ ಹಲವರ ಗಂಟಲುದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ.

ಕೋವಿಡ್ ಕೇಂದ್ರಗಳ ನಿರ್ವಹಣೆಗಾಗಿ 1700 ಸಿಬ್ಬಂದಿ ನೇಮಕಕ್ಕೆ 21.42 ಕೋಟಿರೂ. ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X