ಮಂಗಳೂರಲ್ಲಿ ಇಬ್ಬರು ಪತ್ರಕರ್ತರಿಗೆ ಕೊರೋನ ಪಾಸಿಟಿವ್
ಮಂಗಳೂರು, ಜು.12: ದ.ಕ. ಜಿಲ್ಲೆಯಲ್ಲಿ ಇಬ್ಬರು ಪತ್ರಕರ್ತರಿಗೆ ಕೊರೋನ ಸೋಂಕು ತಗುಲಿರುವುದು ರವಿವಾರ ದೃಢಪಟ್ಟಿದೆ.
ರಾಜ್ಯದ ಪ್ರತಿಷ್ಠಿತ ಸುದ್ದಿವಾಹಿನಿಯ ದ.ಕ. ಜಿಲ್ಲಾ ಕ್ಯಾಮರಮ್ಯಾನ್ಗಳಿಬ್ಬರಿಗೆ ಕೊರೋನ ಸೋಂಕು ತಗುಲಿದೆ. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಈ ಇಬ್ಬರು ಪತ್ರಕರ್ತರು ಕಳೆದ ವಾರ ಗುರುಪುರ ಗುಡ್ಡ ಕುಸಿತದ ಸುದ್ದಿ ಮಾಡಲು ತೆರಳಿದ್ದರು. ಅಲ್ಲಿಂದ ಬಂದ ನಂತರ ಜ್ವರ ಇವರಲ್ಲಿ ಕಂಡುಬಂದಿತ್ತು. ಬಳಿಕ ಐದು ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿದ್ದರು. ಏತನ್ಮಧ್ಯೆ, ಗಂಟಲು ದ್ರವ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು. ರವಿವಾರ ಬಂದ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆ ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story