Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್ ಗೆ ಅರ್ಹತೆ ಪಡೆಯದೇ...

ಒಲಿಂಪಿಕ್ಸ್ ಗೆ ಅರ್ಹತೆ ಪಡೆಯದೇ ಇರುವುದಕ್ಕೆ ಚಿಂತಿಸಲಾರೆ: ಹಿಮಾ ದಾಸ್

ವಾರ್ತಾಭಾರತಿವಾರ್ತಾಭಾರತಿ13 July 2020 3:15 PM IST
share
ಒಲಿಂಪಿಕ್ಸ್ ಗೆ ಅರ್ಹತೆ ಪಡೆಯದೇ ಇರುವುದಕ್ಕೆ ಚಿಂತಿಸಲಾರೆ:  ಹಿಮಾ ದಾಸ್

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿ ಕೊಳ್ಳದೆ ಇರುವುದಕ್ಕೆ ಸ್ಟಾರ್ ಓಟಗಾರ್ತಿ ಹಿಮಾ ದಾಸ್ ಚಿಂತಿತರಾಗಿಲ್ಲ. ಕೋವಿಡ್-19ನಿಂದಾಗಿ ಸ್ಥಗಿತಗೊಂಡಿರುವ ಅಂತರ್‌ರಾಷ್ಟ್ರೀಯ ಕ್ರೀಡಾ ಋತು ಮತ್ತೆ ಪುನಾರಂಭವಾದ ಬಳಿಕ ಮೊದಲ ಬಾರಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವೆ ಎಂದಿದ್ದಾರೆ.

400 ಮೀ. ಓಟದಲ್ಲಿ ಹಾಲಿ ಜೂನಿಯರ್ ವಿಶ್ವ ಚಾಂಪಿಯನ್ ಆಗಿರುವ ಹಿಮಾ ದಾಸ್ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿರುವ ಟೋಕಿಯೊ ಒಲಿಂಪಿಕ್ಸ್‌ಗೆ ಇನ್ನಷ್ಟೇ ಅರ್ಹತೆ ಪಡೆಯಬೇಕಾಗಿದೆ. ಜಾಗತಿಕ ಆರೋಗ್ಯ ಬಿಕ್ಕಟ್ಟಿನಿಂದಾಗಿ ನವೆಂಬರ್ 30ರ ತನಕವೂ ಅಂತರ್‌ರಾಷ್ಟ್ರೀಯ ಕ್ರೀಡಾ ಋತು ರದ್ದುಗೊಂಡಿದೆ.

  ‘‘ಒಲಿಂಪಿಕ್ಸ್ ಅರ್ಹತೆಯ ಕುರಿತು ನಾನು ಚಿಂತಿತಳಾಗಿಲ್ಲ. ಇದು ಕೇವಲ ತಲೆನೋವು ಸೃಷ್ಟಿಸುತ್ತದೆ. ಒಲಿಂಪಿಕ್ಸ್‌ಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಜಗತ್ತನ್ನೇ ಕಾಡುತ್ತಿರುವ ಸಾಂಕ್ರಾಮಿಕ ಕಾಯಿಲೆ ಮೊದಲಿಗೆ ಶೀಘ್ರವೇ ಅಂತ್ಯವಾಗಲಿ ಎಂದು ಪ್ರಾರ್ಥಿಸುವೆ. ಅಥ್ಲೆಟಿಕ್ಸ್ ಋತು ಡಿಸೆಂಬರ್ 1ರಿಂದ ಆರಂಭವಾದರೆ, ಮುಂದಿನ ವರ್ಷದ ಒಲಿಂಪಿಕ್ಸ್‌ಗೆ ಸಾಕಷ್ಟು ಸಮಯ ಸಿಗಲಿದೆ’’ ಎಂದು ಸರಿಯಾಗಿ ಎರಡು ವರ್ಷಗಳ ಹಿಂದೆ ಫಿನ್‌ಲ್ಯಾಂಡ್‌ನಲ್ಲಿ ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಜಯಿಸಿರುವ ಹಿಮಾ ದಾಸ್ ಹೇಳಿದ್ದಾರೆ.

‘‘ಧಿಂಗ್ ಎಕ್ಸ್‌ಪ್ರೆಸ್’’ಎಂದೇ ಖ್ಯಾತಿ ಪಡೆದಿರುವ 20ರ ಹರೆಯದ ಹಿಮಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರದ ಪದಕ ಜಯಿಸಿರುವ ಭಾರತದ ಮೊದಲ ಮಹಿಳಾ ಅಥ್ಲೀಟ್ ಆಗಿದ್ದಾರೆ. 400 ಮೀ. ಓಟದಲ್ಲಿ ಹಿಮಾ ರಾಷ್ಟ್ರೀಯ ದಾಖಲೆ(50.79 ಸೆಕೆಂಡ್)ನಿರ್ಮಿಸಿದ್ದಾರೆ.

ಹಿಮಾಗೆ ಕಳೆದ ಕೆಲವು ಸಮಯದಿಂದ ಬೆನ್ನುನೋವಿನ ಸಮಸ್ಯೆ ಕಾಡುತ್ತಿದೆ. ಭವಿಷ್ಯದಲ್ಲಿ ಹಿಮಾ 400 ಮೀ. ಓಟದಲ್ಲಿ ಸ್ಪರ್ಧಿಸದೆ 200 ಮೀ. ಓಟದಲ್ಲಿ ಮಾತ್ರ ಗಮನ ನೀಡಲಿದ್ದಾರೆ ಎಂಬ ಊಹಾಪೋಹವೂ ಕೇಳಿಬಂದಿದೆ.

ಈ ಕುರಿತು ಹಿಮಾರಲ್ಲಿ ಕೇಳಿದಾಗ,‘‘ನಾನು ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಕೋಚ್ ಹಾಗೂ ಎಎಫ್‌ಐ ಏನೇ ನಿರ್ಧರಿಸಿದರೂ ಅದನ್ನು ನಾನು ಮಾಡುತ್ತೇನೆ. ನಾನು 400 ಮೀ., 200 ಮೀ. ಓಟದಲ್ಲಿ ಸ್ಪರ್ಧಿಸುವ ಕುರಿತು ಅವರೇ ನಿರ್ಧರಿಸುತ್ತಾರೆ’’ ಎಂದರು.

ನೀವು ಬೆನ್ನುನೋವಿನಿಂದ ಸಂಪೂರ್ಣ ಚೇತರಿಸಿಕೊಂಡಿದ್ದೀರಾ? ಎಂದು ಕೇಳಿದಾಗ, ‘‘ಈ ಪ್ರಕ್ರಿಯೆ ನಡೆಯುತ್ತಿದೆ. ಹೊರಾಂಗಣ ತರಬೇತಿಗೆ ಒಳಗಾಗಲು ನಾನು ಫಿಟ್ ಇದ್ದೇನೆ ಹಾಗೂ ಕಳೆದ 30ರಿಂದ 40 ದಿನಗಳಿಂದ ಹೊರಾಂಗಣ ತರಬೇತಿಯಲ್ಲಿ ನಿರತನಾಗಿದ್ದೇನೆ’’ ಎಂದರು.

ಹಿಮಾ 2018ರ ಏಶ್ಯನ್ ಗೇಮ್ಸ್‌ನಲ್ಲಿ 400 ಮೀ. ಓಟದ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಮಹಿಳೆಯರ 4-400 ಮೀ. ರಿಲೇ ಹಾಗೂ 4-400 ಮೀ. ಮಿಕ್ಸೆಡ್ ರಿಲೇ ಸ್ಪರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಜಯಿಸಿದ್ದರು.

ಏಶ್ಯನ್ ಗೇಮ್ಸ್‌ನಲ್ಲಿ ಓಟದ ಸ್ಪರ್ಧೆಯಲ್ಲಿರುವಾಗಲೇ ಹಿಮಾಗೆ ಬೆನ್ನುನೋವು ಕಾಣಿಸಿಕೊಂಡಿತ್ತು. ಕಳೆದ ವರ್ಷದ ಎಪ್ರಿಲ್‌ನಲ್ಲಿ ದೋಹಾದಲ್ಲಿ ನಡೆದಿದ್ದ ಏಶ್ಯನ್ ಚಾಂಪಿಯನ್‌ಶಿಪ್‌ನಲ್ಲಿ ವೈಯಕ್ತಿಕ 400 ಮೀ. ರೇಸ್‌ನ ಮಧ್ಯದಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಆ ನಂತರ ವಿಶ್ವ ಚಾಂಪಿಯನ್‌ಶಿಪ್ ತಂಡದಿಂದ ಕೈಬಿಡಲ್ಪಟ್ಟಿದ್ದರು. ಬೆನ್ನುನೋವಿಗೆ ಚಿಕಿತ್ಸೆ ಪಡೆದ ಬಳಿಕ ಕಳೆದ ವರ್ಷದ ಜುಲೈ ಹಾಗೂ ಆಗಸ್ಟ್‌ನಲ್ಲಿ ಪೊಲ್ಯಾಂಡ್ ಹಾಗೂ ಝೆಕ್ ರಿಪಬ್ಲಿಕ್‌ನಲ್ಲಿ ನಡೆದ ಆರು ಕೆಳ ದರ್ಜೆಯ ರೇಸ್‌ಗಳಲ್ಲಿ ಜಯಶಾಲಿಯಾಗಿದ್ದರು. ಕಳೆದ ವರ್ಷವಿಡೀ ಕೇವಲ ಒಂದು ಬಾರಿ ಮಾತ್ರ 400 ಮೀ. ಓಟದಲ್ಲಿ ಭಾಗವಹಿಸಿದ್ದರು. ಐದರಲ್ಲಿ ನಾಲ್ಕು ಬಾರಿ 200 ಮೀ. ರೇಸ್‌ನಲ್ಲಿ ಜಯ ಸಾಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X