Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಚೆ ಇಲಾಖೆಯಲ್ಲೂ ‘ಸರ್ವರ್’ ಸಮಸ್ಯೆ

ಅಂಚೆ ಇಲಾಖೆಯಲ್ಲೂ ‘ಸರ್ವರ್’ ಸಮಸ್ಯೆ

ಇಲಾಖೆಯ ಸಿಬ್ಬಂದಿಗಳ ಜತೆಗೆ ಗ್ರಾಹಕರಿಗೂ ಸುಸ್ತು

ವಾರ್ತಾಭಾರತಿವಾರ್ತಾಭಾರತಿ13 July 2020 6:31 PM IST
share
ಅಂಚೆ ಇಲಾಖೆಯಲ್ಲೂ ‘ಸರ್ವರ್’ ಸಮಸ್ಯೆ

ಮಂಗಳೂರು, ಜು.13: ಭಾರತೀಯ ಅಂಚೆ ಇಲಾಖೆಯು ದ.ಕ.ಜಿಲ್ಲೆಯ ಬಹುತೇಕ ಕಚೇರಿಗಳಲ್ಲಿ ‘ಸರ್ವರ್’ ಸಮಸ್ಯೆ ಉಂಟಾಗಿದೆ. ಇದರಿಂದ ಸಕಾಲದಲ್ಲಿ ಆಗಬೇಕಾಗಿದ್ದ ಕೆಲಸ ಕಾರ್ಯಗಳು ವಿಳಂಬವಾಗುತ್ತಿದ್ದು, ಸಿಬ್ಬಂದಿ ವರ್ಗಕ್ಕೆ ಮಾತ್ರವಲ್ಲ ಗ್ರಾಹಕರು ಕೂಡ ಕಾದು ಕಾದು ಸುಸ್ತಾಗುವಂತಾಗಿದೆ.

ಭಾರತೀಯ ಅಂಚೆ ಇಲಾಖೆಯು ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾಗಿ ತನ್ನ ಕಾರ್ಯಸ್ವರೂಪವನ್ನು ಬದಲಾಯಿಸಿಕೊಂಡು ಹೋಗುತ್ತಿದೆ. ಹಿಂದೆ ಕೇವಲ ಕಾಗದ ಬಟವಾಡೆ, ಮನಿ ಆರ್ಡರ್ ಸೇವೆ ನೀಡುತ್ತಿದ್ದ ಅಂಚೆ ಇಲಾಖೆಯು ಈಗ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಕೈಯಾಡಿಸುತ್ತಿದೆ. ಅದಕ್ಕಾಗಿ ಆಕರ್ಷಕ ಬಡ್ಡಿದರ ಘೋಷಿಸಿ ಬ್ಯಾಂಕ್ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಗ್ರಾಹಕರು ಕೂಡ ಅಂಚೆ ಇಲಾಖೆಯ ಸೇವೆಗೆ ಮಾರು ಹೋದರೂ ಕೂಡ ‘ಸರ್ವರ್’ ಸಮಸ್ಯೆಯು ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿವೆ. ಕಳೆದ ಮೂರು ವಾರದಿಂದ ಈ ಸಮಸ್ಯೆ ಬಿಗಡಾಯಿಸಿದ್ದು, ಗ್ರಾಹಕರು ಅಂಚೆ ಇಲಾಖೆಗೆ ತೆರಳಿ ಕಾದು ಕಾದು ಕೆಲಸ ಕಾರ್ಯಗಳಾಗದೆ ವಾಪಸ್ ಬರುತ್ತಿರುವುದು ಮಾಮೂಲಿಯಾಗಿದೆ.

ಭಾರತೀಯ ಅಂಚೆ ಇಲಾಖೆ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಇಂಟರ್ನೆಟ್ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿದೆ. ಆದರೆ ಇದನ್ನು ನೇರವಾಗಿ ಸಂಸ್ಥೆಯ ಜತೆಯಲ್ಲಿ ಇಲಾಖೆ ಒಡಂಬಡಿಕೆ ಮಾಡಿಕೊಂಡಿಲ್ಲ. ಬದಲಾಗಿ ‘ಸೆಫಿ ಟೆಕ್ನಾಲಜಿ’ ಎಂಬ ಖಾಸಗಿ ಸಂಸ್ಥೆಯ ಮೂಲಕ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ಬಿಎಸ್ಎನ್ಎಲ್ ಸಂಸ್ಥೆಯು ಸೆಫಿ ಟೆಕ್ನಾಲಜಿಗೆ ವ್ಯವಸ್ಥೆ ಮಾಡಿಕೊಟ್ಟುದುದರ ಪರಿಣಾಮ ‘ಸೆಫಿ’ಯು ಅಂಚೆ ಇಲಾಖೆ ನೀಡುವ ಕೆಲಸ ಮಾಡುತ್ತಿದೆ. ಆದರೆ ಜಿಲ್ಲಾದ್ಯಂತ ಅಂಚೆ ಇಲಾಖೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸರ್ವರ್ ಸಮಸ್ಯೆಯ ಕುರಿತು ಈಗಾಗಲೇ ಉನ್ನತ ಮಟ್ಟದಲ್ಲಿ ಅಧಿಕಾರಿಗಳ ಜತೆಯಲ್ಲಿ ಚರ್ಚೆಗಳು ನಡೆದರೂ ಕೂಡ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. *ಗ್ರಾಹಕರ ಜೊತೆ ಸಿಬ್ಬಂದಿ ವರ್ಗಕ್ಕೂ ಸುಸ್ತು

ಅಂಚೆ ಇಲಾಖೆಯ ಬಹುಮುಖ್ಯ ಕೆಲಸ ಕಾರ್ಯಗಳಿಗೆ ‘ನೆಟ್’ ಅತ್ಯಗತ್ಯ. ಆದರೆ ನಿರಂತರ ನೆಟ್ ಸಮಸ್ಯೆಯಿಂದ ಗ್ರಾಹಕರು ಮಾತ್ರವಲ್ಲ ಸಿಬ್ಬಂದಿ ವರ್ಗವೂ ಸುಸ್ತಾಗುತ್ತಿದೆ. ಗ್ರಾಮಾಂತರ ಪ್ರದೇಶದಲ್ಲಿ ಕೆಲವು ಗ್ರಾಹಕರು ಸಾಕಷ್ಟು ದೂರದಿಂದ ರಿಕ್ಷಾ ಮತ್ತಿತರ ಬಾಡಿಗೆ ವಾಹನದಲ್ಲಿ ಅಂಚೆ ಇಲಾಖೆಗೆ ತೆರಳಿದರೂ ಕೂಡ ‘ಸರ್ವರ್’ ಸಮಸ್ಯೆಯಿಂದ ಕೆಲಸ ಆಗದೆ ಸಿಟ್ಟಿನಿಂದ ವಾಪಸ್ ಹೋಗುವುದು ಮತ್ತು ಸಿಬ್ಬಂದಿಯ ಜೊತೆ ಜಗಳವಾಡುವುದು ಸಾಮಾನ್ಯವಾಗಿದೆ. ಗ್ರಾಹಕರಿಗೆ ಸಕಾಲದಲ್ಲಿ ಸೇವೆ ನೀಡಲಾಗದೆ ಕೆಲವು ಸಿಬ್ಬಂದಿ ವರ್ಗವು ಪರಿತಪಿಸುವುದು ಕೂಡ ಮಾಮೂಲಿಯಾಗಿದೆ. ಅಂಚೆ ಇಲಾಖೆಯ ಸರ್ವರ್ ಸಮಸ್ಯೆ ಇಂದು ನಿನ್ನೆಯದಲ್ಲ. ಗ್ರಾಹಕರಿಗೆ ಹತ್ತಿರವಾಗುವ ಸಲುವಾಗಿ ಇಲಾಖೆಯು ಅನೇಕ ಹೊಸ ಯೋಜನೆ ಮತ್ತು ಸೇವೆಯನ್ನು ಪ್ರಕಟಿಸುತ್ತಿದ್ದರೂ ಕೂಡ ಸರ್ವರ್ ಸಮಸ್ಯೆಯಿಂದ ತಲೆಚಿಟ್ಟು ಹಿಡಿಯುತ್ತಿದೆ. ಸರ್ವರ್ ಸಮಸ್ಯೆಯಿಂದ ನಮ್ಮ ಉಳಿತಾಯ ಖಾತೆಯಲ್ಲಿ ಜಮೆಯಾದ ಹಣವನ್ನು ಪಡೆಯುವುದು ಕೂಡ ಸಾಧ್ಯವಾಗುತ್ತಿಲ್ಲ ಎಂದು ಗ್ರಾಹಕ ಮಂಗಳೂರಿನ ಹುಸೈನ್ ಎಂಬವರು ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X