Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಬ್ಲೀಗಿ ಜಮಾಅತ್: 14 ರಾಷ್ಟ್ರಗಳ...

ತಬ್ಲೀಗಿ ಜಮಾಅತ್: 14 ರಾಷ್ಟ್ರಗಳ ಪ್ರಜೆಗಳು ಆರೋಪ ಮುಕ್ತ

ವಾರ್ತಾಭಾರತಿವಾರ್ತಾಭಾರತಿ13 July 2020 8:51 PM IST
share
ತಬ್ಲೀಗಿ ಜಮಾಅತ್: 14 ರಾಷ್ಟ್ರಗಳ ಪ್ರಜೆಗಳು ಆರೋಪ ಮುಕ್ತ

ಹೊಸದಿಲ್ಲಿ, ಜು. 13: ಕೋವಿಡ್-19 ಲಾಕ್ ಡೌನ್ ಸಂದರ್ಭ ಇಲ್ಲಿ ನಡೆದ ತಬ್ಲೀಗಿ ಜಮಾಅತ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ವಿಸಾ ನಿಯಮ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿದ ಪ್ರಕರಣಗಳ ಮನವಿ ಚೌಕಾಶಿ ಪ್ರಕ್ರಿಯೆ (ವಿಚಾರಣೆಯನ್ನು ತಪ್ಪಿಸಲು ಇರುವ ಕಾನೂನು ಪ್ರಕ್ರಿಯೆ) ಅಡಿಯಲ್ಲಿ ಲಘು ಆರೋಪಗಳನ್ನು ಒಪ್ಪಿಕೊಂಡ 14 ರಾಷ್ಟ್ರಗಳ ಪ್ರಜೆಗಳಿಗೆ ವಿವಿಧ ಮೊತ್ತದ ದಂಡ ಪಾವತಿಸಿ ಬಿಡುಗಡೆಗೊಳ್ಳಲು ದಿಲ್ಲಿ ನ್ಯಾಯಾಲಯ ಸೋಮವಾರ ಅವಕಾಶ ನೀಡಿದೆ.

ದರೆ, ಐದು ರಾಷ್ಟ್ರಗಳ ಪ್ರಜೆಗಳು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುವುದಾಗಿ ತಿಳಿಸಿದ್ದಾರೆ.

 ಅಲ್ಜೀರಿಯಾ, ಬೆಲ್ಜಿಯಂ, ಇಂಗ್ಲೆಂಡ್, ಈಜಿಪ್ಟ್ ಹಾಗೂ ಪಿಲಿಪ್ಪೈನ್ ರಾಷ್ಟ್ರದ ಪ್ರಜೆಗಳು ತಲಾ 10 ಸಾವಿರ ರೂಪಾಯಿ ದಂಡ ಪಾವತಿಸಿ ಬಿಡುಗಡೆಗೊಳ್ಳಲು ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಹಿಮಾಂಶು ಅವಕಾಶ ನೀಡಿದ್ದಾರೆ.

ತಲಾ 5000 ರೂಪಾಯಿ ದಂಡ ಪಾವತಿಸಿ ಬಿಡುಗಡೆಗೊಳ್ಳಲು ಐವರು ಸುಡಾನ್ ಪ್ರಜೆಗಳಿಗೆ ಇನ್ನೊರ್ವ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಆಶಿಸ್ ಗುಪ್ತಾ ಅವಕಾಶ ನೀಡಿದ್ದಾರೆ.

ತಲಾ 5000 ರೂಪಾಯಿ ದಂಡ ಪಾವತಿಸಿ ಬಿಡುಗಡೆಗೊಳ್ಳುವಂತೆ ಚೀನಾ, ಮೊರಾಕ್ಕೊ, ಉಕ್ರೈನ್, ಇಥಿಯೋಪಿಯಾ, ಫಿಜಿ, ಆಸ್ಟ್ರೇಲಿಯಾ, ಬ್ರೆಝಿಲ್, ಅಫಘಾನಿಸ್ಥಾನದ ಪ್ರಜೆಗಳಿಗೆ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಪರಾಸ್ ದಲಾಲ್ ಅವಕಾಶ ನೀಡಿದ್ದಾರೆ.

 ಪ್ರಕರಣದಲ್ಲಿ ದೂರು ನೀಡಿದ ಲಜಪತ್ ನಗರದ ಉಪ-ವಿಭಾಗೀಯ ದಂಡಾಧಿಕಾರಿ , ಲಜಪತ್ ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ, ನಿಝಾಮುದ್ದೀನ್  ಇನ್ ಸ್ಪೆಕ್ಟರ್ ಆರೋಪಿಗಳ ಮನವಿಗೆ ತಮ್ಮ ಆಕ್ಷೇಪ ಏನೂ ಇಲ್ಲ ಎಂದು ಹೇಳಿದ ಬಳಿಕ ದಂಡ ಪಾವತಿಸಿ ಬಿಡುಗಡೆಗೊಳ್ಳಲು ನ್ಯಾಯಾಲಯ ಅವರಿಗೆ ಅವಕಾಶ ನೀಡಿದೆ.

ಆದರೆ, ಸುಡಾನ್ ನ ಇಬ್ಬರು ಪ್ರಜೆಗಳು, ಜೋರ್ಡಾನ್, ಅಮೆರಿಕ, ರಶ್ಯಾ, ಕಝಕಿಸ್ತಾನದ ಪ್ರಜೆಗಳು ಹಾಗೂ ಇಂಗ್ಲೆಂಡ್ ನಲ್ಲಿರುವ ಅನಿವಾಸಿ ಭಾರತೀಯರು ಲಘು ಆರೋಪಗಳಿಗೆ ಸಂಬಂಧಿಸಿ ತಪ್ಪೊಪ್ಪಿಗೆ ಮನವಿ ಸಲ್ಲಿಸಿಲ್ಲ ಎಂದು ಆರೋಪಿಗಳನ್ನು ಪ್ರತಿನಿಧಿಸುತ್ತಿರುವ ವಕೀಲರಾದ ಅಶಿಮಾ ಮಂಡ್ಲಾ, ಮಂದಾಕಿನಿ ಸಿಂಗ್, ಫಾಹಿಮ್ ಖಾನ್ ಹಾಗೂ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮನವಿ ಚೌಕಾಶಿ ಅಡಿಯಲ್ಲಿ ತಮ್ಮ ತಪ್ಪಿಗೆ ಕನಿಷ್ಠ ಶಿಕ್ಷೆ ನೀಡುವಂತೆ ಆರೋಪಿಗಳು ತಪ್ಪೊಪ್ಪಿಗೆ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X