Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್‌ಗೆ ಸಂಬಂಧಿಸಿ ನಿರ್ಧಾರ...

ಲಾಕ್‌ಡೌನ್‌ಗೆ ಸಂಬಂಧಿಸಿ ನಿರ್ಧಾರ ಕೈಗೊಳ್ಳಲು ಸರ್ವ ಪಕ್ಷ ಸಭೆ ಕರೆಯಬೇಕು: ಐವನ್ ಡಿಸೋಜಾ

ವಾರ್ತಾಭಾರತಿವಾರ್ತಾಭಾರತಿ13 July 2020 10:00 PM IST
share
ಲಾಕ್‌ಡೌನ್‌ಗೆ ಸಂಬಂಧಿಸಿ ನಿರ್ಧಾರ ಕೈಗೊಳ್ಳಲು ಸರ್ವ ಪಕ್ಷ ಸಭೆ ಕರೆಯಬೇಕು: ಐವನ್ ಡಿಸೋಜಾ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಅಧಿಕವಾಗಿದೆ. ಲಾಕ್‌ಡೌನ್‌ಗೆ ಸಂಬಂಧಿಸಿ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ದ.ಕ.ಜಿಲ್ಲೆಗೆ ಸಂಬಂಧಿಸಿ ಸರ್ವ ಪಕ್ಷ ಸಭೆ ಕರೆಯಬೇಕು ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಸಂಸದರು, ಸಚಿವರು ಹಾಗೂ ಏಳು ಮಂದಿ ಶಾಸಕರು ಬಿಜೆಪಿಯವರಾಗಿರುವುದರಿಂದ ಬಿಜೆಪಿಯ ಸೂಕ್ತ ನಿರ್ಧಾರ ಕೈಗೊಳ್ಳುವಲ್ಲಿ ಈ ಸಭೆ ಅಗತ್ಯವಾಗಿದೆ ಎಂದು ಐವನ್ ಡಿಸೋಜಾ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

2ನೆ ಬಾರಿ ಲಾಕ್‌ಡೌನ್ ನಿರ್ಧಾರಕ್ಕೆ ಮುಂದಾಗಿರುವುದರಿಂದ ಈವರೆಗೆ ಕೈಗೊಂಡಿರುವ ನಿರ್ಧಾರಗಳಲ್ಲಿ ವಿಫಲವಾಗಿರುವುದಕ್ಕೆ ನಿದರ್ಶನವಾಗಿದ್ದು, ಇದನ್ನು ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಒಪ್ಪಬೇಕು. ಹಾಗಾಗಿ ಮತ್ತೆ ಅದೇತಪ್ಪು ಮಾಡುವ ಬದಲು ಸರ್ವ ಪಕ್ಷ ತಕ್ಷಣ ಕರೆದು ಸೂಕ್ತ ನಿರ್ಧಾರ ಕೈಗೊಳ್ಳಬೇಕು. 2ನೆ ಬಾರಿ ಲಾಕ್‌ಡೌನ್ ಯಶಸ್ವಿಯಾಗಬೇಕಿದ್ದರೆ ಜನರ ಸಹಕಾರ ಅಗತ್ಯವಾಗಿದೆ. ಕೊರೋನ ನಿರ್ಮೂಲನೆಗೆ ಸಂಬಂಧಿಸಿ ಆರಂಭದ ಸಭೆಯಲ್ಲಿ ನಾನು ಹಾಗೂ ಶಾಸಕ ಯು.ಟಿ.ಖಾದರ್ ಅದಾಗಲೇ ಜಿಲ್ಲೆಯಲ್ಲಿ 500 ಬೆಡ್‌ಗಳನ್ನು ಮೀಸಲಿಡುವ ಜತೆಗೆ ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯುವಂತೆ ಒತ್ತಾಯಿಸಿದ್ದರೂ ಈ ಬಗ್ಗೆ ಸೂಕ್ತ ಕ್ರಮವಾಗಿಲ್ಲ. ಬೋಳಾರದಲ್ಲಿ ಶವಸಂಸ್ಕಾರಕ್ಕೆ ಅವಕಾಶ ನೀಡಲಾಗಿದ್ದರೂ ಅಲ್ಲಿದ್ದ ಒಂದೂ ಇಲೆಕ್ಟ್ರಿಕ್ ‌ಚಿತಾಗಾರ ಕೆಟ್ಟಿದ್ದು ಅದನ್ನು ರಿಪೇರಿ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಒಟ್ಟಿನಲ್ಲಿ ಕೊರೋನ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು  ಆರೋಪಿಸಿದರು.

ಲಾಕ್‌ಡೌನ್‌ನಿಂದಲೇ ಕೊರೋನ ನಿಯಂತ್ರಣ ಎನ್ನುವುದು ಮೂರ್ಖರ ತೀರ್ಮಾನ. ಇದರಿಂದ ಕೊರೋನ ಸೋಂಕಿನ ಸಂಖ್ಯೆ ಹೆಚ್ಚಳವಾಗುವುದನ್ನು ಹಾಗೂ ಸಾವಿನ ಸಂಖ್ಯೆಯನ್ನು ಮುಂದೂಡಬಹುದು ಅಷ್ಟೆ. ಹಾಗಾಗಿ ಧಾರ್ಮಿಕ ಮುಖಂಡರು, ಕಾರ್ಮಿಕ ನಾಯಕರು, ಜನ ನಾಯಕರನ್ನು ಒಳಗೊಂಡ ಸರ್ವಪಕ್ಷದ ಸಭೆಯ ಮೂಲಕ ಒಮ್ಮತದ ನಿರ್ಧಾರಕ್ಕೆ ಬರಬೇಕಾಗಿದೆ. ಲಾಕ್‌ಡೌನ್ ಸಂದರ್ಭ ಯಾವ ರೀತಿಯಲ್ಲಿ ಜನರಿಗೆ ಹೇಗೆ ನೆರವಾಗುವುದು ಎಂಬ ಬಗ್ಗೆ ಸ್ಪಷ್ಟವಾದ ಚಿತ್ರಣ ನೀಡಬೇಕು. ಇಲ್ಲವಾದಲ್ಲಿ ಮತ್ತೆ ವಿಧಿಸಲಾಗುವ ಲಾಕ್‌ಡೌನ್ ಕೂಡಾ ವಿಫಲವಾಗಲಿದೆ. ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿ ರ್ಯಾಂಡಮ್ ತಪಾಸಣೆ (ಸಾಮೂಹಿಕ ತಪಾಸಣೆ) ಹೆಚ್ಚಿಸಬೇಕು. ತಪಾಸಣೆಯ ಲ್ಯಾಬ್ ಸಂಖ್ಯೆ ಹೆಚ್ಚಿಸಬೇಕು. ಬಡವರ ತಪಾಸಣೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಐವನ್ ಡಿಸೋಜಾ ಆಗ್ರಹಿಸಿದರು.

ಜಿಲ್ಲೆಯಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆರಂಭಿಸಿರುವ ಕೊರೋನ ಆರೋಗ್ಯ ಕಿಟ್‌ಗಳ ಖರೀದಿಯಲ್ಲಿ ಆಗಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಲೆಕ್ಕಕೊಡಿ ಅಭಿಯಾನವನ್ನು ಬೆಂಬಲಿಸುವುದಲ್ಲದೆ, ಜಿಲ್ಲೆಯಲ್ಲೂ ಈ ಅಭಿಯಾನ ನಡೆಸಿ ಚಳವಳಿ ಆರಂಭಿಸಲಾಗುವುದು. ಕೊರೋನ ನಿಯಂತ್ರಣ ಬಂದ ಮೇಲೆ ಬೀದಿಗಿಳಿದು ಈ ಬಗ್ಗೆ ಹೋರಾಟ ನಡೆಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X