Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಪೂರ್ವ ವಲಯದ 6 ವಿಧಾನಸಭಾ...

ಬೆಂಗಳೂರು ಪೂರ್ವ ವಲಯದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಕಮಾಂಡ್ ಕೋವಿಡ್ ಸೆಂಟರ್: ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ13 July 2020 11:02 PM IST
share
ಬೆಂಗಳೂರು ಪೂರ್ವ ವಲಯದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಕಮಾಂಡ್ ಕೋವಿಡ್ ಸೆಂಟರ್: ವಿ.ಸೋಮಣ್ಣ

ಬೆಂಗಳೂರು, ಜು.13: ಬೆಂಗಳೂರು ನಗರ ಪೂರ್ವ ವಲಯದ ಪ್ರತಿ ವಿಧಾನಸಭಾ ಕ್ಷೇತ್ರ ಗಳಲ್ಲಿ ಕಮಾಂಡ್ ಕೋವಿಡ್ ಸೆಂಟರ್ ಗಳನ್ನು ನಿರ್ಮಾಣ ಮಾಡಿ ಅದರಲ್ಲಿ ಆರೋಗ್ಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಹಾಗೂ ಕಾರ್ಯಪಾಲಕ ಅಭಿಯಂತರರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ವಸತಿ‌ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.

ಇಂದು ಸಂಜೆ ನಗರದ ಮಯೋಹಾಲ್ ನ ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೂರ್ವ ವಲಯದ 6 ವಿಧಾನ ಸಭಾ ಕ್ಷೇತ್ರ ಗಳಲ್ಲಿ ಒಟ್ಟು 18 ಆಂಬುಲೆನ್ಸ್ ಹಾಗೂ 60 ಟಿಟಿ ವಾಹನಗಳು ಒಳಗೊಂಡು ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ 3 ಆಂಬುಲೆನ್ಸ್ ಹಾಗೂ 10 ಟಿಟಿ ವಾಹನ ಅಯಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಕೊರೋನ ವೈರಸ್ ಸೋಂಕಿನಿಂದ ಮೃತಪಟ್ಟವರ ಶವವನ್ನು ಪೋಷಕರಿಗೆ ನೀಡಲಾಗುತ್ತದೆ. ಒಂದು ವೇಳೆ ಪೋಷಕರು ಶವವನ್ನು ನಿರಾಕರಿದರೆ ಬಿಬಿಎಂಪಿ ಗೆ ಹಸ್ತಾಂತರ ಮಾಡಲಾಗುತ್ತದೆ‌. 44 ವಾರ್ಡ್ ಗಳಲ್ಲಿ ಕಳೆದ ವಾರ 6 ಕಡೆ ಫೀವರ್ ಕ್ಲಿನಿಕ್ ನಿರ್ಮಿಸಿದ್ದು, ಇವತ್ತು 26 ಕಡೆ ಫೀವರ್ ಕ್ಲಿನಿಕ್ ನಿರ್ಮಾಣ ‌ಮಾಡಲಾಗುವುದು. ಇನ್ನು, 18 ವಾರ್ಡ್ ಗಳಲ್ಲಿ ಜಾಗದ ಕೊರತೆ ಇದೆ. ಆದರಿಂದ ತಕ್ಷಣವೇ ಸುಸಜ್ಜಿತವಾದ 5 ಮೊಬೈಲ್ ವಾಹನಗಳನ್ನು ಬಾಡಿಗೆ ತೆಗೆದುಕೊಂಡು 18 ವಾರ್ಡ್ ಗಳಲ್ಲಿ  ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಿದರು.

ಕಮಾಂಡ್ ಕೋವಿಡ್ ಸೆಂಟರ್ ಗಳಲ್ಲಿ 24x7 ಸಹಾಯ ವಾಣಿ ಕೇಂದ್ರವನ್ನು ರಚಿಸಲಾಗುತ್ತದೆ. ಡಾಕ್ಟರ್ ಹಾಗೂ ಲ್ಯಾಬ್ ಟೆಕ್ನೀಶಿಯನ್ ಕೊರತೆ ಇರುವುದರಿಂದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು. ಒಟ್ಟು 6 ಕ್ಷೇತ್ರದಲ್ಲಿ 1438 ಬೂತ್ ಗಳಿದ್ದು, ಬೂತ್ ಗಳಲ್ಲಿ ವಾರಿಯರ್ಸ್‌ ತಂಡಗಳನ್ನು ರಚಿಸಲಾಗುತ್ತದೆ. ಖಾಸಗಿ ಆಸ್ಪತ್ರೆಯಲ್ಲಿ ಕೊರೋನ ವೈರಸ್ ಸೋಂಕಿತರಿಗೆ ಹೆಚ್ಚಿನ ದರ ವಿಧಿಸಿದರೆ ಸೂಕ್ತ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X