Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್‌ನಿಂದ ಮೃತಪಟ್ಟ ರೋಗಿಯ ಶವ...

ಕೋವಿಡ್‌ನಿಂದ ಮೃತಪಟ್ಟ ರೋಗಿಯ ಶವ ಅಂತ್ಯಸಂಸ್ಕಾರಕ್ಕೆ ವೈದ್ಯ ಸಹಕರಿಸಿದ್ದು ಹೀಗೆ...

ಮಾನವೀಯ ಸೇವೆ

ವಾರ್ತಾಭಾರತಿವಾರ್ತಾಭಾರತಿ14 July 2020 9:44 AM IST
share
ಕೋವಿಡ್‌ನಿಂದ ಮೃತಪಟ್ಟ ರೋಗಿಯ ಶವ ಅಂತ್ಯಸಂಸ್ಕಾರಕ್ಕೆ ವೈದ್ಯ ಸಹಕರಿಸಿದ್ದು ಹೀಗೆ...

ಹೈದರಾಬಾದ್, ಜು.14: ವೈದ್ಯರೊಬ್ಬರು ಸ್ವತಃ ಟ್ರ್ಯಾಕ್ಟರ್ ಚಲಾಯಿಸಿಕೊಂಡು, ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಯ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಒಯ್ದು ಮಾನವೀಯತೆ ಮೆರೆದ ಅಪರೂಪದ ಘಟನೆ ವರದಿಯಾಗಿದೆ.

ಪೆದ್ದಪಲ್ಲಿ ಜಿಲ್ಲಾ ವೈದ್ಯಕೀಯ ಸರ್ವೇಕ್ಷಣಾ ಅಧಿಕಾರಿಯಾಗಿರುವ ಡಾ.ಪೆಂಡ್ಯಾಲ ಶ್ರೀರಾಮ್ ಅವರು ಕೋವಿಡ್-19 ರೋಗಿಯೊಬ್ಬ ಮೃತಪಟ್ಟ ವೇಳೆ ಕರ್ತವ್ಯದಲ್ಲಿದ್ದರು. ಆದರೆ ಆಸ್ಪತ್ರೆಯಲ್ಲಿ ಯಾವುದೇ ಆ್ಯಂಬುಲೆನ್ಸ್ ಲಭ್ಯವಿಲ್ಲದ ಕಾರಣ ಮಹಾನಗರ ಪಾಲಿಕೆ ಟ್ರ್ಯಾಕ್ಟರ್‌ನಲ್ಲಿ ಮೃತದೇಹ ಒಯ್ಯಲು ನಿರ್ಧರಿಸಲಾಯಿತು. ಆದರೆ ಟ್ರ್ಯಾಕ್ಟರ್ ಚಾಲಕ ಮೃಯದೇಹ ಒಯ್ಯಲು ನಿರಾಕರಿಸಿದ. ಈ ಹಿನ್ನೆಲೆಯಲ್ಲಿ 45 ವರ್ಷ ವಯಸ್ಸಿನ ಶ್ರೀರಾಮ್ ಸ್ಮಶಾನದವರೆಗೆ ಸ್ವತಃ ತಾವೇ ಟ್ರ್ಯಾಕ್ಟರ್ ಚಲಾಯಿಸಿ ಮೃತದೇಹ ಒಯ್ದರು.

ಕೋವಿಡ್-19ನಿಂದ ಮೃತಪಟ್ಟ ರೋಗಿಯ ಮೃತದೇಹವನ್ನು ಟ್ರ್ಯಾಕ್ಟರ್‌ನಲ್ಲಿ ಸ್ವತಃ ವೈದ್ಯರೇ ಒಯ್ಯುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ ಇದುವರೆಗೆ ಎಂಟು ಮಂದಿ ಮೃತಪಟ್ಟಿದ್ದರೂ, ಪೆದ್ದಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಇದು ಮೊದಲ ಸಾವು. ರವಿವಾರ ಬೆಳಗ್ಗೆ 9:30ರ ವೇಳೆಗೆ ರೋಗಿ ಮೃತಪಟ್ಟಿದ್ದ.

ಮೊದಲ ಪ್ರಕರಣವಾದ್ದರಿಂದ ಶಿಷ್ಟಾಚಾರಕ್ಕೆ ಅನುಸಾರವಾಗಿ ಮೃತದೇಹವನ್ನು ಹೇಗೆ ಪ್ಯಾಕ್ ಮಾಡಬೇಕು ಎನ್ನುವುದೂ ಸೇರಿದಂತೆ ಪ್ರಕರಣಗಳವನ್ನು ಹೇಗೆ ನಿಭಾಯಿಸಬೇಕು ಎನ್ನುವುದು ಆಸ್ಪತ್ರೆ ಸಿಬ್ಬಂದಿಗೂ ತಿಳಿದಿರಲಿಲ್ಲ. ಆಸ್ಪತ್ರೆಯಲ್ಲಿ ಏಕೈಕ ಮಹಿಳಾ ವೈದ್ಯಾಧಿಕಾರಿ ಹಾಗೂ ನರ್ಸ್‌ಗಳಿದ್ದರು. ದುರಾದೃಷ್ಟವಶಾತ್ ಆಸ್ಪತ್ರೆಯಲ್ಲಿ ಮೃತದೇಹವನ್ನು 4 ಡಿಗ್ರಿ ಸೆಲ್ಷಿಯಸ್‌ಗಿಂತ ಕಡಿಮೆ ಉಷ್ಣತೆಯಲ್ಲಿ ಕೆಲ ಕಾಲ ಶವವನ್ನು ಇಡಬಹುದಾದ ಶವಾಗಾರವೂ ಇಲ್ಲ. ಮೃತದೇಹ ಒಯ್ಯಲು ಆ್ಯಂಬುಲೆನ್ಸ್ ಕೂಡಾ ಇರಲಿಲ್ಲ ಎಂದು ಶ್ರೀರಾಮ್ ವಿವರಿಸಿದರು.

ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದಾಗ ಪಾಲಿಕೆ ಟ್ರ್ಯಾಕ್ಟರ್‌ನಲ್ಲಿ ಒಯ್ಯಲು ಸೂಚಿಸಿದರು. ಆದರೆ ಟ್ರ್ಯಾಕ್ಟರ್ ಚಾಲಕ, ವಾಹನವನ್ನು ಅಲ್ಲೇ ಬಿಟ್ಟು ಓಡಿಹೋದ. ಆಗ ಮೃತದೇಹ ಸಾಗಿಸುವ ಹೊಣೆಯನ್ನು ಸ್ವತಃ ಶ್ರೀರಾಮ್ ವಹಿಸಿಕೊಂಡರು. ತಾವು ಪಿಪಿಇ ಧರಿಸುವ ಜತೆಗೆ ರೋಗಿಯ ಕುಟುಂಬದ ನಾಲ್ವರಿಗೂ ಪಿಪಿಇ ಧರಿಸಲು ಸೂಚಿಸಿ ಅವರ ನೆರವಿನೊಂದಿಗೆ ಟ್ರ್ಯಾಕ್ಟರ್‌ಗೆ ಮೃತದೇಹ ಸಾಗಿಸಿ ಟ್ರ್ಯಾಕ್ಟರ್‌ನಲ್ಲಿ ಸ್ಮಶಾನಕ್ಕೆ ಸಾಗಿಸಿ, ಶಿಷ್ಟಾಚಾರದ ಅನ್ವಯ ಸಂಸ್ಕಾರಕ್ಕೆ ನೆರವಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X