Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ:...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ-ದಕ್ಷಿಣ ಕನ್ನಡ ಜಂಟಿ ಪ್ರಥಮ

ರಾಜ್ಯದಲ್ಲಿ ಒಟ್ಟಾರೆ ಶೇ.61.80 ರಷ್ಟು ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ14 July 2020 12:14 PM IST
share
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ-ದಕ್ಷಿಣ ಕನ್ನಡ ಜಂಟಿ ಪ್ರಥಮ

ಬೆಂಗಳೂರು, ಜು.14: ದ್ವಿತೀಯು ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳು ಶೇ.90.71 ಪ್ರಥಮ ಸ್ಥಾನ ಪಡೆದಿವೆ. ಕೊಡಗು ಶೇ.81.53 ದ್ವಿತೀಯ ಸ್ಥಾನ ಪಡೆದಿದ್ದು, ಒಟ್ಟಾರೆ ಈ ಬಾರಿ ಶೇ.61.80 ರಷ್ಟು ಫಲಿತಾಂಶ ದಾಖಲಾಗಿದೆ.

ದ್ವಿತೀಯ ಪಿಯು ಪರೀಕ್ಷೆ ಬರೆದ ಒಟ್ಟು 6,75,277 ವಿದ್ಯಾರ್ಥಿಗಳಲ್ಲಿ 4,17,297 ಮಂದಿ ಉತ್ತೀರ್ಣರಾಗಿದ್ದು, ಕಲಾ ವಿಭಾಗದಲ್ಲಿ 82,077(ಶೇ.41.27), ವಾಣಿಜ್ಯ 1,70,426(ಶೇ.65.52) ಹಾಗೂ ವಿಜ್ಞಾನ ವಿಭಾಗದಲ್ಲಿ 1,64,794(ಶೇ.76.2) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಬಾಲಕಿಯರು ಶೇ.68.73 ಹಾಗೂ ಬಾಲಕರು ಶೇ.54.77ರಷ್ಟು ಉತ್ತೀರ್ಣರಾಗಿದ್ದಾರೆ.

ಮಾಧ್ಯಮವಾರು ಫಲಿತಾಂಶವನ್ನು ನೋಡುವುದಾದರೆ ಕನ್ನಡ ಮಾಧ್ಯಮದಲ್ಲಿ ಬರೆದ 2,88,998 ವಿದ್ಯಾರ್ಥಿಗಳ ಪೈಕಿ 1,37,454 ಮಂದಿ ಉತ್ತೀರ್ಣರಾಗಿದ್ದು, ಕೇವಲ ಶೇ.47.57 ಫಲಿತಾಂಶ ಸಿಕ್ಕಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಬರೆದ 3,86,279 ವಿದ್ಯಾರ್ಥಿಗಳಲ್ಲಿ ಶೇ.72.45 ಮಂದಿ ಉತ್ತೀರ್ಣರಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಬರೆದ ಶೇ.52ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವುದು ಆತಂಕದ ಬೆಳವಣಿಗೆಯಾಗಿದೆ. 

ನಗರದ ಪ್ರದೇಶದಲ್ಲಿ ಶೇ.62.60ರಷ್ಟು ಫಲಿತಾಂಶ ಬಂದಿದ್ದು, ಕಳೆದ ಸಾಲಿಗಿಂತ ಶೇ.1.22ರಷ್ಟು ಏರಿಕೆಯಾಗಿದೆ. ಆದರೆ, ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿ ಶೇ.58.99 ಫಲಿತಾಂಶ ಬಂದಿದ್ದು, ಶೇ.3.89 ರಷ್ಟು ಕಡಿಮೆಯಾಗಿದೆ. ಸರಕಾರಿ ಕಾಲೇಜಿನಲ್ಲಿ ಶೇ.46.24, ಅನುದಾನಿತ ಕಾಲೇಜು-ಶೇ.57.64, ಅನುದಾನ ರಹಿತ ಶೇ.72.51, ವಿಭಜಿತ ಪದವಿ ಪೂರ್ವ ಕಾಲೇಜು-70.47, ಕಾರ್ಪೊರೇಷನ್ ಕಾಲೇಜು-ಶೇ.50.43ರಷ್ಟು ಫಲಿತಾಂಶ ಲಭಿಸಿದೆ. 

-ಒಟ್ಟು 92 ಕಾಲೇಜುಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಹಾಗೂ 88 ಕಾಲೇಜುಗಳು ಶೂನ್ಯ ಫಲಿತಾಂಶ ಗಳಿಸಿವೆ.
-68,866 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 2,21866 ವಿದ್ಯಾರ್ಥಿಗಳು ಪ್ರಥಮ ದರ್ಜೆ, 77,455 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 49,110 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
-ಅನುತ್ತೀರ್ಣ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಲು ಮರು ಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು. ಮೂಲ ಓಎಂಆರ್, ಅನುತ್ತೀರ್ಣ ಅರ್ಜಿ ಅಥವಾ ಹಿಂದಿನ ಎಂಸಿಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕ ಕಟ್ಟಬಹುದು.
-ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಇಲಾಖೆಯ www.pue.kar.nic.in ಅಂತರ್ ಜಾಲದಲ್ಲಿ ಪ್ರಕಟಿಸಲಾಗಿದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಜು.16ರಿಂದ 30ರವರೆಗೆ ಅವಕಾಶವಿದೆ.
-ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಹಾಗೂ ಮರು ಮೌಲ್ಯಮಾಪನದ ಪ್ರತಿ ವಿಷಯಕ್ಕೆ 1670 ರೂ.  ಆಗಿದೆ. ಅಂಕಗಳ ಮರು ಎಣಿಕೆಗೆ ಶುಲ್ಕ ಇರುವುದಿಲ್ಲ.
-ದ್ವಿತೀಯ ಪಿಯು ಫಲಿತಾಂಶಕ್ಕೆwww.karresults.nic.in ಗೆ ಸಂಪರ್ಕಿಸಬಹುದು. ಹೆಚ್ಚಿನನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 080-23083900ಕ್ಕೆ ಕರೆ ಮಾಡಬಹುದು.

ಜಿಲ್ಲಾವಾರು ಫಲಿತಾಂಶ
ಉಡುಪಿ-ಶೇ.90.71, ದಕ್ಷಿಣ ಕನ್ನಡ ಶೇ.90-71, ಕೊಡಗು-ಶೇ.81.53, ಉತ್ತರ ಕನ್ನಡ-ಶೇ.80.97, ಚಿಕ್ಕಮಗಳೂರು-ಶೇ.79.11, ಬೆಂಗಳೂರು ದಕ್ಷಿಣ-ಶೇ.77.56, ಬೆಂಗಳೂರು ಉತ್ತರ-ಶೇ.75.54, ಬಾಗಲಕೋಟೆ ಶೇ.74.59, ಚಿಕ್ಕಬಳ್ಳಾಪುರ ಶೇ.73.74, ಶಿವಮೊಗ್ಗ ಶೇ.72.19, ಹಾಸನ ಶೇ.70.18, ಚಾಮರಾಜನಗರ ಶೇ.69.29, ಬೆಂಗಳೂರು ಗ್ರಾಮಾಂತರ-ಶೇ.69.02, ಹಾವೇರಿ-ಶೇ.68.01, ಮೈಸೂರು-ಶೇ.67.98, ಕೋಲಾರ-ಶೇ.67.42, ಧಾರವಾಡ-ಶೇ.67.31, ಬೀದರ್-ಶೇ.64.61, ದಾವಣಗೆರೆ-ಶೇ.64.09, ಚಿಕ್ಕೋಡಿ-ಶೇ.63.88, ಮಂಡ್ಯ-63.82, ಗದಗ-ಶೇ.63, ತುಮಕೂರು-ಶೇ.62.26, ಬಳ್ಳಾರಿ-ಶೇ.62.02, ರಾಮನಗರ-ಶೇ.60.96, ಕೊಪ್ಪಳ-ಶೇ.60.9, ಬೆಳಗಾವಿ ಶೇ.59.7, ಯಾದಗಿರಿ ಶೇ.58.38, ಕಲಬುರಗಿ ಶೇ.58.27, ಚಿತ್ರದುರ್ಗ ಶೇ.51.42, ರಾಯಚೂರು ಶೇ.56.22 ಹಾಗೂ ವಿಜಯಪುರ ಶೇ.54.22.

ಕೊರೋನ ಸೋಂಕಿನ ನಡುವೆ ಪರೀಕ್ಷೆ ಬರೆದು ದ್ವಿತೀಯ ಪಿಯುಸಿ ಫಲಿತಾಂಶ ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ, ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ, ತಾಯಿಯರಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X