Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಒಂದು ಪ್ರದೇಶದ ಎಲ್ಲಾ...

ಉತ್ತರ ಪ್ರದೇಶ: ಒಂದು ಪ್ರದೇಶದ ಎಲ್ಲಾ ಮನೆಗಳಿಗೆ ಕೇಸರಿ ಬಣ್ಣ ಬಳಿದ ಗುಂಪು; ಸಮರ್ಥಿಸಿದ ಸಚಿವ

ಪೊಲೀಸರಿಗೆ ದೂರು ನೀಡಿದ ಸ್ಥಳೀಯರು

ವಾರ್ತಾಭಾರತಿವಾರ್ತಾಭಾರತಿ14 July 2020 4:25 PM IST
share
ಉತ್ತರ ಪ್ರದೇಶ: ಒಂದು ಪ್ರದೇಶದ ಎಲ್ಲಾ ಮನೆಗಳಿಗೆ ಕೇಸರಿ ಬಣ್ಣ ಬಳಿದ ಗುಂಪು; ಸಮರ್ಥಿಸಿದ ಸಚಿವ

ಪ್ರಯಾಗ್‍ರಾಜ್ : ತನ್ನ ಆಕ್ಷೇಪದ ಹೊರತಾಗಿಯೂ ತನ್ನ ಮನೆಯ ಗೋಡೆಗಳಿಗೆ ಕೇಸರಿ ಬಣ್ಣ ಬಳಿದ  ಜನರ ಗುಂಪೊಂದರ ವಿರುದ್ಧ ಪ್ರಯಾಗ್‍ ರಾಜ್ ನಗರದ ಉದ್ಯಮಿಯೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ.

ಕೇಸರಿ ಬಣ್ಣ ಬಳಿಯುವುದನ್ನು ನಿಲ್ಲಿಸುವಂತೆ ಸೂಚಿಸಿದಾಗ ತನಗೆ  ಆ ಗುಂಪು ಬೆದರಿಕೆ ಹಾಕಿ ನಿಂದಿಸಿದೆ ಎಂದೂ ಅವರು ದೂರಿದ್ದಾರೆ. ಈ ಘಟನೆ ನಡೆದ ಪ್ರದೇಶದಲ್ಲಿಯೇ  ಉತ್ತರ ಪ್ರದೇಶ ಸಚಿವ ನಂದ್ ಗೋಪಾಲ್ ನಂದಿ ಅವರ ನಿವಾಸವೂ ಇದೆ. ಸಚಿವರು ಕೇಸರಿ ಬಣ್ಣ ಬಳಿಯುವ ಕಾರ್ಯವನ್ನು ಸಮರ್ಥಿಸಿದ್ದಾರಲ್ಲದೆ ಅದನ್ನು ``ಅಭಿವೃದ್ಧಿ ಕಾಮಗಾರಿ'' ಎಂದು ಬಣ್ಣಿಸಿ ವಿವಾದ ಅನಗತ್ಯ ಎಂದಿದ್ದಾರೆ.

ಆ ನಿರ್ದಿಷ್ಟ ರಸ್ತೆಯ ಎಲ್ಲಾ ಮನೆಗಳ ಗೋಡೆಗಳಿಗೆ ಕೇಸರಿ ಬಣ್ಣ ಬಳಿಯಲಾಗಿರುವುದು ಹಾಗೂ ಕೆಲವು ಮನೆಗಳಲ್ಲಿ ಧಾರ್ಮಿಕ ಚಿಹ್ನೆಗಳನ್ನೂ ಬಿಡಿಸಿರುವುದು ಕಂಡು ಬಂದಿದೆ. ಉದ್ಯಮಿ ರವಿ ಗುಪ್ತಾ ಅವರು ಪ್ರಯಾಗ್‍ ರಾಜ್‍ ನ ಬಹಾದುರ್‍ ಗಂಜ್ ಪ್ರದೇಶದಲ್ಲಿರುವ ತಮ್ಮ ಮನೆಯ ಬಾಲ್ಕನಿಯಿಂದ ಚಿತ್ರೀಕರಿಸಿದ ಒಂದು ನಿಮಿಷ ಅವಧಿಯ ವೀಡಿಯೋದಲ್ಲಿ ಅವರ ಮನೆಯ ಹೊರ ಗೋಡೆಗಳಿಗೆ ಕೇಸರಿ ಬಣ್ಣವನ್ನು ಕೆಲವರು ಸ್ಪ್ರೇ ಮಾಡುತ್ತಿರುವುದು ಕಾಣಿಸುತ್ತದೆ.

ಸಚಿವ ನಂದಿಯ ಸೂಚನೆ ಮೇರೆಗೆ ಕೇಸರಿ ಬಣ್ಣ ಬಳಿಯಲಾಗಿದೆ ಎಂದು ಕೆಲವರು ದೂರುತ್ತಿರುವುದೂ ವೀಡಿಯೋದಲ್ಲಿ ಕೇಳಿಸುತ್ತದೆ.  ವೀಡಿಯೋ ಮಾಡಲಾಗುತ್ತಿದೆ ಎಂದು ತಿಳಿಯುತ್ತಲೇ  ಆ ಮಂದಿ  ಬಾಲ್ಕನಿಯತ್ತಲೇ  ನೇರವಾಗಿ ಪೈಂಟ್ ಸ್ಪ್ರೇ ಮಾಡಿದ್ದು ಅದು ಫೋನ್‍ನ ಲೆನ್ಸ್‍ ಗೂ ತಾಗಿದೆ.

ಈ ಕುರಿತು ಗುಪ್ತಾ ದಾಖಲಿಸಿರುವ ದೂರಿನಲ್ಲಿ ಒಬ್ಬ ಆರೋಪಿಯನ್ನು  ಕಮಲ್ ಕುಮಾರ್ ಕೇಸರ್ವಾನಿ ಎಂದು ಗುರುತಿಸಲಾಗಿದೆ. ಆತ ಸಚಿವ ನಂದ್ ಗೋಪಾಲ್ ನಂದಿಯ ಸೋದರ ಸಂಬಂಧಿ ಎಂದು ತಿಳಿದು ಬಂದಿದೆ.

ದೂರನ್ನು ಒಂದು `ಸಂಚು' ಎಂದು ಸಚಿವ ನಂದಿ ಹೇಳಿದ್ದು ``ಅದು ಸಂಪೂರ್ಣವಾಗಿ ಕೇಸರಿಯಲ್ಲ. ನನಗೆ ಕೆಂಪು, ಹಸಿರು,  ಹಾಗೂ ಚಾಕೊಲೇಟ್ ಬಣ್ಣ ಕೂಡ ಕಾಣಿಸುತ್ತದೆ. ಕೆಲ ಜನರಿಗೆ ಸುಂದರೀಕರಣ ಇಷ್ಟವಿಲ್ಲವೆಂದು ಕಾಣಿಸುತ್ತದೆ. ಈ ಜನರು ವಿಕಾಸ್ ವಿರೋಧಿ'' ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X