Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನುದಾನ ನೀಡುವಲ್ಲಿ ವಿಳಂಬ: ಮಹತ್ವದ...

ಅನುದಾನ ನೀಡುವಲ್ಲಿ ವಿಳಂಬ: ಮಹತ್ವದ ಚಬಹಾರ್ ರೈಲು ಯೋಜನೆಯಿಂದ ಭಾರತವನ್ನು ಕೈಬಿಟ್ಟ ಇರಾನ್

ಕೇಂದ್ರದ ರಾಜತಾಂತ್ರಿಕತೆ ವಿಫಲ ಎಂದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ14 July 2020 4:31 PM IST
share
ಅನುದಾನ ನೀಡುವಲ್ಲಿ ವಿಳಂಬ: ಮಹತ್ವದ ಚಬಹಾರ್ ರೈಲು ಯೋಜನೆಯಿಂದ ಭಾರತವನ್ನು ಕೈಬಿಟ್ಟ ಇರಾನ್

ಹೊಸದಿಲ್ಲಿ: ಭಾರತದಿಂದ ಹಣಕಾಸು ಸಹಾಯ ದೊರೆಯುವಲ್ಲಿ ವಿಳಂಬವಾಗಿದೆ ಎಂದು ಹೇಳಿ ಇರಾನ್ ಸರಕಾರ ಚಬಹಾರ್ ಬಂದರು ರೈಲು ಯೋಜನೆಯನ್ನು ತಾನಾಗಿಯೇ ನಡೆಸಲು ಮುಂದಾಗಿರುವ ಕುರಿತಾದ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್  ಪ್ರತಿಕ್ರಿಯಿಸಿ ಇದು ‘ಭಾರತಕ್ಕೆ ದೊಡ್ಡ ನಷ್ಟವಾಗಿದೆ’ ಎಂದು ಹೇಳಿದೆಯಲ್ಲದೆ ಕೇಂದ್ರದ ರಾಜತಾಂತ್ರಿಕ ತಂತ್ರಗಾರಿಕೆಯನ್ನು ಪ್ರಶ್ನಿಸಿದೆ.

“ಚಬಹಾರ್ ಬಂದರು ಒಪ್ಪಂದದಿಂದ ಭಾರತವನ್ನು ಕೈಬಿಡಲಾಗಿದೆ. ಕೆಲಸ ಮಾಡದೆಯೇ ಶ್ರೇಯ ಪಡೆದುಕೊಂಡ ಮೋದಿ ಸರಕಾರದ ರಾಜತಾಂತ್ರಿಕತೆಯಿದು. ಚೀನಾ ಸದ್ದಿಲ್ಲದೆ ಕೆಲಸ ಮಾಡಿ ಅವರಿಗೆ ಉತ್ತಮ ಡೀಲ್ ನೀಡಿದೆ. ಭಾರತಕ್ಕೆ ದೊಡ್ಡ ನಷ್ಟ. ಆದರೆ ನೀವು ಪ್ರಶ್ನೆಗಳನ್ನು ಕೇಳುವ ಹಾಗಿಲ್ಲ” ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಟ್ವೀಟ್ ಮಾಡಿದ್ದಾರೆ.

ಆಂಗ್ಲ ದೈನಿಕವೊಂದರಲ್ಲಿನ ವರದಿಯ ಪ್ರಕಾರ  ಚಬಹಾರ್ ಬಂದರಿನಿಂದ ಅಫ್ಗಾನಿಸ್ತಾನ ಗಡಿಯ ಝಾಹೆದನ್ ತನಕದ ರೈಲು ಹಳಿ ಯೋಜನೆಗೆ ಭಾರತ ಸರಕಾರದ ಅನುದಾನ ನೀಡಿಕೆಯಲ್ಲಿ ಹಾಗೂ ಯೋಜನೆ ಆರಂಭದಲ್ಲಿನ ವಿಳಂಬದಿಂದಾಗಿ ಇರಾನ್ ತಾನಾಗಿಯೇ ಯೋಜನೆ ಮುಂದುವರಿಸಿಕೊಂಡು ಹೋಗಲು ನಿರ್ಧರಿಸಿದೆ.

ಚೀನಾ ಜತೆ 400 ಶತಕೋಟಿ ಡಾಲರ್ ಮೊತ್ತದ  25 ವರ್ಷಗಳ ಪಾಲುದಾರಿಕೆ ಒಪ್ಪಂದವನ್ನು ಇರಾನ್ ಅಂತಿಮಗೊಳಿಸಿದ ಬೆನ್ನಲ್ಲಿಯೇ ಈ ಬೆಳವಣಿಗೆ ನಡೆದಿದೆ. ಈ ಒಪ್ಪಂದದಂತೆ ಚಬಹಾರ್ ಡ್ಯೂಟಿ ಫ್ರೀ ವಲಯ, ಹತ್ತಿರದಲ್ಲಿಯೇ ತೈಲ ಸಂಸ್ಕರಣಾಗಾರ ಹಾಗೂ  ಇತರ  ಯೋಜನೆಗಳಲ್ಲಿ ಚೀನಾ ಭಾಗಿಯಾಗಲಿದೆ.

ಚಬಹಾರ್ ರೈಲು ಯೋಜನೆ ನಿರ್ಮಾಣಕ್ಕೆ ಭಾರತ ಮತ್ತು ಇರಾನ್ ನಾಲ್ಕು ವರ್ಷಗಳ ಹಿಂದೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭಾರತದ ಪ್ರಧಾನಿ ನರೇಂದ್ರ ಮೋದಿ ಟೆಹ್ರಾನ್‍ ಗೆ ಭೇಟಿ ನೀಡಿದ್ದ ಸಂದರ್ಭ ಭಾರತ ಸರಕಾರದ ಇಂಡಿಯನ್ ರೈಲ್ವೇಸ್ ಕನ್‍ಸ್ಟ್ರಕ್ಷನ್ ಲಿ. ಹಾಗೂ ಇರಾನಿಯನ್ ರೈಲ್ವೆ ಸಚಿವಾಲಯದ ನಡುವೆ ಒಪ್ಪಂದ ನಡೆದಿತ್ತು. ಪಾಕಿಸ್ತಾನದ ಗ್ವಾದರ್ ಬಂದರಿನಿಂದ 72 ಕಿಮೀ ದೂರವಿರುವ ಚಬಹಾರ್ ಭಾರತದ ಪಾಲಿಗೆ  ಬಹಳ ಮಹತ್ವದ್ದಾಗಿತ್ತು. ಕಳೆದ ವಾರ ಇರಾನ್ ಸಾರಿಗೆ ಸಚಿವ ಮುಹಮ್ಮದ್ ಇಸ್ಲಾಮಿ ಈ ಯೋಜನೆಗೆ  ಶಂಕುಸ್ಥಾಪನೆ ನೆರವೇರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X